ಕೊರೊನಾದಿಂದ ಚೇತರಿಸಿಕೊಂಡ ಶೇ.50ರಷ್ಟು ಮಂದಿಗೆ ಅನಾರೋಗ್ಯ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಶೇ.50ರಷ್ಟು ಮಂದಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ ಎಂಬುದು ತಿಳಿದುಬಂದಿದೆ.
ಕೊರೊನಾ ಸೋಂಕಿಗೊಳಗಾದ ವ್ಯಕ್ತಿ ಗುಣಮುಖರಾದರೂ ಕೂಡ ದೇಹದಲ್ಲಿ ಸಾಕಷ್ಟು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಕಾಲುಗಳಲ್ಲಿ ರಕ್ತ ಹೆಪ್ಪುಗಟ್ಟುವುದು, ಹೃದಯ ಸ್ನಾಯುವಿನ ಉರಿಯೂತ, ಆಯಾಸ, ಮನಸ್ಥಿತಿ ಬದಲಾವಣೆಗಳು, ತಲೆನೋವು ಮತ್ತು ದೇಹದಲ್ಲಿ ನೋವುಗಳು ಕಾಣಿಸಿಕೊಳ್ಳುತ್ತವೆ ಎಂದು ವೈದ್ಯರು ಹೇಳಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಎದೆ ನೋವು, ಹೃದಯ ಸಂಬಂಧಿತ ಸಮಸ್ಯೆಗಳು, ಕೀಲು ನೋವು, ದೃಷ್ಟಿ ದೋಷ, ಮರೆಗುಳಿತನದಂತಹ ಸಮಸ್ಯೆಗಳು ಕಾಡುತ್ತಿವೆ.

ಕೊರೊನಾದಿಂದ ಚೇತರಿಸಿಕೊಂಡ ಬಹಳಷ್ಟು ರೋಗಿಗಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಕಂಡು ಬಂದಿದ್ದು, ಕೆಲವರು ಇದ್ದಕ್ಕಿದ್ದಂತೆ ಸಾವನ್ನಪ್ಪಿರುವುದೂ ಕೂಡ ವರದಿಯಾಗಿವೆ. ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಜೂನ್ 23 ರಿಂದ ಇಲ್ಲಿಯವರೆಗೂ 1,400 ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದೆ. ಅದರಲ್ಲಿ 480 ಮಂದಿ ಐಸಿಯುಲ್ಲಿದ್ದು, ಮರಣ ಪ್ರಮಾಣ ಶೇ.7.8 ರಿಂದ 8.5ರ ನಡುವೆ ಇದೆ.
ಕೊರೊನಾದಿಂದ ಚೇತರಿಸಿಕೊಂಡವರಿಗೆ ಚಿಕಿತ್ಸೆ ನೀಡುವ ಸಲುವಾಗಿಯೇ ಈಗಾಗಲೇ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ರಾಮಯ್ಯ ಆಸ್ಪತ್ರೆಗಳು ಕ್ಲಿನಿಕ್ ಗಳನ್ನು ತೆರೆದಿವೆ.
ಕೊರೊನಾ ವೈರಸ್ ಕೇವಲ ಮನುಷ್ಯನ ದೇಹದ ಮೇಲಷ್ಟೇ ಅಲ್ಲ. ದೇಹದ ಇತರೆ ಅಂಗಾಂಗಗಳ ಮೇಲೂ ಪರಿಣಾಮ ಬೀರುತ್ತವೆ. ಕೆಲ ವ್ಯಕ್ತಿಗಳಲ್ಲಿ ಗುಣಮುಖರಾದ ವಾರಗಳು ಅಥವಾ ತಿಂಗಳುಗಳ ಬಳಿಕ ಕಾಣಿಸಿಕೊಳ್ಳುತ್ತವೆ. ಕೆಲವರಲ್ಲಿ ಈ ಸಮಸ್ಯೆಗಳು ದೀರ್ಘಕಾಲಿಕವಾಗಿಯೂ ಕಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications