50% ದಂಡ ರಿಯಾಯಿತಿ: 5 ದಿನದಲ್ಲಿ ಸಂಗ್ರಹವಾದ ಮೊತ್ತವೆಷ್ಟು?
ಬೆಂಗಳೂರು ಟ್ರಾಫಿಕ್ ಪೊಲೀಸರು (ಬಿಟಿಪಿ) ಮಂಗಳವಾರ 8.13 ಕೋಟಿ ರೂಪಾಯಿ ದಂಡಗಳನ್ನು ಸಂಗ್ರಹಿಸಿ ಇದುವರೆಗೆ ಒಟ್ಟು 14,71,593 ಪ್ರಕರಣಗಳನ್ನು ತೆರವುಗೊಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 8: ಸಂಚಾರಿ ಪೊಲೀಸರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸಾವರರು ದಂಡ ಪಾವತಿಸಲು ಶೇಕಡ 50ರಷ್ಟು ರಿಯಾಯಿತಿ ನೀಡಿದ್ದು ಈ ಪರಿಣಾಮವಾಗಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹರಿದು ಬರುತ್ತಿದೆ.
ಸಂಚಾರಿ ನಿಯಮ ಉಲ್ಲಂಘಟನೆಯಿಂದ ಬಾಕಿ ಉಳಿದಿರುವ ಟ್ರಾಫಿಕ್ ಚಲನ್ಗಳ ಮೇಲೆ ಸರ್ಕಾರವು 50% ರಿಯಾಯಿತಿಯನ್ನು ಪರಿಚಯಿಸಿದ ಐದು ದಿನಗಳ ನಂತರ ಮಂಗಳವಾರ ಟ್ರಾಫಿಕ್ ದಂಡ ಸಂಗ್ರಹದಲ್ಲಿ ಹೆಚ್ಚಳ ಮುಂದುವರೆಯಿತು.
ಬೆಂಗಳೂರು ಟ್ರಾಫಿಕ್ ಪೊಲೀಸರು (ಬಿಟಿಪಿ) ಮಂಗಳವಾರ 8.13 ಕೋಟಿ ರೂಪಾಯಿ ದಂಡಗಳನ್ನು ಸಂಗ್ರಹಿಸಿ ಒಟ್ಟು 5 ದಿನದಲ್ಲಿ 41.20 ಕೋಟಿ ರೂಪಾಯಿಯಷ್ಟು ದಂಡವನ್ನು ಸಂಗ್ರಹಿಸಿದ್ದಾರೆ. ಮಂಗಳವಾರ ಒಟ್ಟು 3,14,285 ಪ್ರಕರಣಗಳನ್ನು ತೆರವುಗೊಳಿಸುವುದರೊಂದಿಗೆ ಇದುವರೆಗೆ ಒಟ್ಟು 14,71,593 ಪ್ರಕರಣಗಳನ್ನು ತೆರವುಗೊಳಿಸಿದ್ದಾರೆ.

ದಂಡವನ್ನು ಕರ್ನಾಟಕ ರಾಜ್ಯ ಪೊಲೀಸ್ ಅಪ್ಲಿಕೇಶನ್ ಬಳಸಿಯೂ ಪಾವತಿಸಬಹುದು. Android ಫೋನ್ಗಳಲ್ಲಿ https://play.google.com/store/apps ಮತ್ತು iPhone ಗಳಲ್ಲಿ https://itunes.apple.com/in/app/karnataka-state-police ನಿಂದ ಲಿಂಕ್ಗಳನ್ನು ಡೌನ್ಲೋಡ್ ಮಾಡಬಹುದು.
ಬೆಂಗಳೂರಿನಲ್ಲಿ ದಂಡದಲ್ಲಿ ಅರ್ಧದಷ್ಟು ರಿಯಾಯಿತಿ ಘೋಷಿಸಿದ ನಂತರ 3 ದಿನದಲ್ಲಿ ಹೆಚ್ಚು ವಾಹನಗಳಿಂದ ಕೂಡಿರುವ ಸಿಲಿಕಾನ್ ಸಿಟಿ ಬೆಂಗಳೂರು ಒಂದರಲ್ಲೇ ಭಾನುವಾರ (ರಾತ್ರಿ 8.30ರ ತನಕ) ಭರ್ಜರಿ ದಂಡ ಪಾವತಿಯಾಗಿತ್ತು. ಬೆಂಗಳೂರು ನಗರ ಪೊಲೀಸರು ನಿಯಮ ಉಲ್ಲಂಘಿಸಿದವರಿಂದ ಭಾನುವಾರ 6.31 ಕೋಟಿ ರೂಪಾಯಿ ಸಂಗ್ರಹಿಸಿ, ಒಟ್ಟಾಗಿ 22,32,47,491 ರೂಪಾಯಿ ಸಂಗ್ರಹಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ವಿವಿಧ ಪಾವತಿ ವಿಧಾನಗಳ ಮೂಲಕ ಒಟ್ಟು ಸುಮಾರು 6,31,77,750 ರೂಪಾಯಿ ಪಾವತಿಯಾಗಿತ್ತು. ಇದರಿಂದಾಗಿ ಇದುವರೆಗೆ ಬಾಕಿ ಉಳಿದಿದ್ದ ಸಂಚಾರ ನಿಯಮ ಉಲ್ಲಂಘಿಸಿದ್ದ 2,06,326 ಪ್ರಕರಣಗಳು ವಿಲೇವಾರಿಯಾಗಿದ್ದವು. ಸಂಚಾರ ನಿಯಮಗಳ ದಂಡದಲ್ಲಿ ಶೇ.50 ರಿಯಾಯಿತಿ ಘೋಷಿಸಿತು. ಇದಾದ ಬೆನ್ನಲ್ಲೆ ಕೇವಲ ಎರಡೇ ದಿನದಲ್ಲಿ 13.8 ಕೋಟಿ ರೂ. ಹಣ ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ದಂಡ ಕಟ್ಟುವ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸುವಂತೆ ಎಎಪಿ ಆಗ್ರಹಿಸಿದೆ.
ಆದರೆ ಸಾರಿಗೆ ಇಲಾಖೆ ರಿಯಾಯಿತಿ ದಂಡದ ಬಾಕಿ ಪಾವತಿಗೆ ಫೆಬ್ರುವರಿ 11ರವರೆಗೆ ಅವಕಾಶ ನೀಡಲಾಗಿದೆ. ಈ ಅವಧಿ ವಿಸ್ತರಣೆಗೆ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಅವರು ಮನವಿ ಮಾಡಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ










Click it and Unblock the Notifications