50% Rebate offer: 2 ವಾರ ವಿಸ್ತರಣೆ ಸಾಧ್ಯತೆ, ಬೆಂಗಳೂರು ಒಂದರಿಂದಲೇ ₹500ಕೋಟಿ ಬರಬೇಕು.
ಸಂಚಾರ ನಿಯಮ ಉಲ್ಲಂಘನೆಯ ದಂಡಕ್ಕೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದ್ದರಿಂದ 150 ಕೋಟಿ ರೂ.ಗೂ ಅಧಿಕ ಹಣ ಸಂಗ್ರಹವಾಗಿದೆ. ಇನ್ನೂ ಎರಡು ವಾರದ ಈ ನಿಯಮ ವಿಸ್ತರಣೆ ಆಗಲಿದೆ. ಬೆಂಗಳೂರು ಒಂದರಲ್ಲೇ 500ಕೋಟಿ ರೂ. ಬರಬೇಕಿದೆ.
ಬೆಂಗಳೂರು, ಫೆಬ್ರವರಿ 15: ಎಲ್ಲ ರೀತಿಯ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದ ಮೇಲೆ 150 ಕೋಟಿ ರೂಪಾಯಿಗೂ ಅಧಿಕ ಹಣ ದಂಡದ ರೂಪದಲ್ಲಿ ಸಂಗ್ರಹವಾಗಿದೆ. ಈ ಪೈಕಿ ಇನ್ನೂ ಬೆಂಗಳೂರು ಒಂದರಲ್ಲಿ ಕೋಟ್ಯಂತರ ರೂಪಾಯಿ ಪಾವತಿಯಾಗುವುದು ಬಾಕಿ ಇದೆ.
ಈ ಕಾರಣಕ್ಕೆ ಫೆಬ್ರವರಿ 11ರಂದು ಮುಕ್ತಾಯಗೊಂಡಿರುವ ಎಲ್ಲ ರೀತಿಯ ಸಂಚಾರ ನಿಯಮ ಉಲ್ಲಂಘನೆದ ದಂಡದ ಮೇಲೆ ಶೇ. 50ರಷ್ಟು ರಿಯಾಯಿತಿ ಇನ್ನೂ ಎರಡು ವಾರ ಘೋಷಿಸುವಂತೆ ಮನವಿ ಮಾಡಲಾಗಿದೆ. ವಾಹನ ಸವಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಎರಡು ವಾರ ವಿಸ್ತರಣೆ ಮಾಡುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (KSLSA) ಕಾರ್ಯ ನಿರ್ವಾಹಕ ಅಧ್ಯಕ್ಷ ನ್ಯಾ.ಯಮೂರ್ತಿ ಬಿ. ವೀರಪ್ಪ ಸರ್ಕಾರಕ್ಕೆ ಕೇಳಿದ್ದಾರೆ.
ಸದ್ಯ ಪಿಟಿಐ ಮಾಡಿರುವ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು ಒಂಬತ್ತು ದಿನಗಳ ಅವಧಿಯಲ್ಲಿ (ಪೆಬ್ರವರಿ 11ರವರೆಗೆ) 152 ಕೋಟಿಗೂ ಹೆಚ್ಚು ದಂಡ ಸಂಗ್ರಹವಾಗಿದೆ ಎಂದು ತಿಳಿಸಲಾಗಿದೆ. ಅದೇ ರೀತಿ ವಾಹನ ಉಲ್ಲಂಘಿಸಿದ ಸವಾರರಿಂದ ರಾಜ್ಯದಲ್ಲಿ ಇನ್ನೂ ಸಂಚಾರ ಪೊಲೀಸ್ ಇಲಾಖೆಗೆ ಸುಮಾರು 530 ಕೋಟಿ ರೂಪಾಯಿ ಪಾವತಿಸಬೇಕು. ಅದರಲ್ಲಿ 500 ಕೋಟಿ ರಾಜ್ಯ ರಾಜಧಾನಿ ಬೆಂಗಳೂರು ಒಂದರಿಂದಲೇ ಪಾವತಿಯಾಗಬೇಕಿದೆ ಎಂದು ಹೇಳಲಾಗಿದೆ.

ಫೆಬ್ರವತಿ 2ರಂದು ಜಾರಿಗೊಳಿಸಿದ್ದ ಸಂಚಾರ ನಿಯಮ ಉಲ್ಲಂಘಟನೆ ಮೇಲಿನ ಶೇಕಡಾ 50 ರಿಯಾಯಿತಿ ಕೊಡುಗೆ ಫೆ. 11ರವರೆಗೆ ಮಾನ್ಯವಾಗಿತ್ತು. ಅದಾದ ಬಳಿಕ ಶನಿವಾರ ಲೋಕ ಅದಾಲತ್ ನಲ್ಲಿ ಒಟ್ಟು ಸುಮಾರು 64,13,608 ಪ್ರಕರಣ ಇತ್ಯರ್ಥಪಡಿಸಲಾಗಿದೆ. ಕರ್ನಾಟಕದಾದ್ಯಂತ ಬಾಕಿ ಇರುವ 52,11,424 ಪ್ರಕರಣಗಳಿಂದ ಹಣ ಬರಬೇಕಿದೆ. ಈ ಕಾರಣಕ್ಕೆ ಪ್ರಾಧಿಕಾರ ರಾಜ್ಯ ಸರ್ಕಾರದ ಮುಂದೆ ಮನವಿ ಮಾಡಲಾಗಿದೆ.
ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರು ದಂಡವನ್ನು ಹತ್ತಿರದ ಸಂಚಾರ ಪೊಲೀಸ್ ಠಾಣೆ ಹಾಗೂ ಬೆಂಗಳೂರು ಒನ್ನಲ್ಲಿ ಕಟ್ಟಬಹುದು. ಅಥವಾ ಪೊಲೀಸ್ ಇಲಾಖೆ ಅಧಿಕೃತ ವೆಬ್ಸೈಟ್ https://bangaloretrafficpolice.gov.in ಗೆ ಭೇಟಿ ನೀಡಬಹುದು.

ಬೆಂಗಳೂರು ಸೇರಿದಂತೆ ಕರ್ನಾಟಕದ ನಾಗರಿಕರು ಶೀಘ್ರದಲ್ಲೇ ವಿಮಾ ಸಂಸ್ಥೆಗಳ ಮೂಲಕ ಸಂಚಾರ ನಿಯಮ ಉಲ್ಲಂಘಟನೆಯ ದಂಡ ಕಟ್ಟಲು ಸಾಧ್ಯವಾಗಿಸಲು ವ್ಯವಸ್ಥೆ ಬರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ವಿಶೇಷ ಆಯುಕ್ತ ಎಂ.ಎ.ಸಲೀಂ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications