ಭಾರತ್ ಗೌರವ್ ರೈಲು: ಕಾಶಿ ವಿಶ್ವನಾಥ ದರ್ಶನಕ್ಕೆ ₹5000 ಸಹಾಯಧನ
ಬೆಂಗಳೂರು ನವೆಂಬರ್ 11: ಕಾಶಿ ವಿಶ್ವನಾಥ ದರ್ಶನ ತೆರಳುವ ಭಾರತ್ ಗೌರವ್ ರೈಲು ಪ್ರಯಾಣಿಕರಿಗೆ ಇನ್ನು ಮುಂದೆ ಮತ್ತಷ್ಟು ಅನುಕೂಲವಾಗಲಿದೆ. ಈ ವಿಶೇಷ ರೈಲು ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆ ಹಾಗೂ ಭಾರತೀಯ ರೈಲ್ವೆ ನೀತಿಯಡಿಯಲ್ಲಿ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಹೇಳಿಕೊಂಡಿದೆ. ಕಾಶಿ ದರ್ಶನಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಯಾವುದೇ ತೊಂದರೆ ಹಾಗೂ ದೇಶದ ಹಿಂದೂ ಧಾರ್ಮಿಕ ಕ್ಷೇತ್ರಗಳ ಪೂರ್ವ ಮಾಹಿತಿ, ಯೋಜನೆ ವಸತಿ ಸೌಲಭ್ಯಗಳ ಕುರಿತು ಸರ್ಕಾರದ ಮುಜರಾಯಿ ಇಲಾಖೆಯೇ ಯಾತ್ರಾರ್ಥಿಗಳಿಗೆ ಸಹಕರಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಇಂದು ದಕ್ಷಿಣ ಭಾರತ ಪ್ರವಾಸದಲ್ಲಿದ್ದಾರೆ. ಇಲ್ಲಿ ಪ್ರಧಾನಿ ದಕ್ಷಿಣ ಭಾರತಕ್ಕೆ ಮೊದಲ ವಂದೇ ಭಾರತ್ ರೈಲನ್ನು ಉಡುಗೊರೆಯಾಗಿ ನೀಡಿದರು. ಈ ರೈಲು ಮೈಸೂರಿನಿಂದ ಚೆನ್ನೈ ನಡುವೆ ಸಂಚರಿಸಲಿದೆ. ಇದೇ ವೇಳೆ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಈ ರೈಲಿಗೆ ಚಾಲನೆ ನೀಡಿದರು. ಕಾಸಿ ದರ್ಶನಕ್ಕೆ ಸಂಚರಿಸುವ ಬೆಂಗಳೂರು-ವಾರಣಾಸಿ ಭಾರತ ಗೌರವ್ ಕಾಶಿ ವಿಶ್ವನಾಥ ದರ್ಶನಕ್ಕೆ ಸಂಚರಿಸಲಿರುವ ರೈಲಿಗೆ ನರೇಂದ್ರ ಮೋದಿ ಚಾಲನೆ ನೀಡಿದರು.

ಭಾರತೀಯ ರೈಲ್ವೆಯ 'ಭಾರತ್ ಗೌರವ್' ರೈಲು ನೀತಿಯಡಿಯಲ್ಲಿ ಕರ್ನಾಟಕದ ಮುಜರಾಯಿ ಇಲಾಖೆಯು 'ಭಾರತ್ ಗೌರವ್ ಕಾಶಿ ದರ್ಶನ' ಈ ರೈಲನ್ನು ಓಡಿಸಲಿದೆ. ನೈಋತ್ಯ ರೈಲ್ವೆ ಪ್ರಕಾರ, "ಕಾಶಿಗೆ ಪ್ರಯಾಣಿಸಲು ಬಯಸುವ ಅನೇಕ ಪ್ರಯಾಣಿಕರ ಹಾಗೂ ಯಾತ್ರಾರ್ಥಿಗಳ ಕನಸನ್ನು ಇದು ಈಡೇರಿಸುತ್ತದೆ." ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಯಾತ್ರಾರ್ಥಿಗಳಿಗೆ 5,000 ರೂಪಾಯಿಗಳ ನಗದು ಸಹಾಯಧನ
ರೈಲ್ವೇಯ 'ಭಾರತ್ ಗೌರವ್' ರೈಲು ನೀತಿಯಡಿಯಲ್ಲಿ ಕರ್ನಾಟಕದ ಮುಜರಾಯಿ ಇಲಾಖೆಯು ನಡೆಸುವ 'ಭಾರತ ಗೌರವ್ ಕಾಶಿ ದರ್ಶನ' ರೈಲಿಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ನೈಋತ್ಯ ರೈಲ್ವೆ ಪ್ರಕಾರ, "ಕಾಶಿಗೆ ಭೇಟಿ ನೀಡಲು ಬಯಸುವ ಅನೇಕ ಪ್ರಯಾಣಿಕರ ಕನಸನ್ನು ಇದು ಈಡೇರಿಸುತ್ತದೆ." ಈ ರೈಲು ಯಾತ್ರಿಕರಿಗೆ ರಿಯಾಯಿತಿ ದರದಲ್ಲಿ 8 ದಿನಗಳ ಪ್ರವಾಸ ಪ್ಯಾಕೇಜ್ನ್ನು ನೀಡುತ್ತಿದೆ. ಕರ್ನಾಟಕ ಸರ್ಕಾರವು ಕಾಶಿ ವಿಶ್ವನಾಥ ಯಾತ್ರಾರ್ಥಿಗಳಿಗೆ 5,000 ರೂಪಾಯಿಗಳ ನಗದು ಸಹಾಯಧನ ನೀಡುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ರೈಲು ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್ ಸೇರಿದಂತೆ ಪವಿತ್ರ ಸ್ಥಳಗಳನ್ನು ಒಳಗೊಂಡಿದೆ.
-
Railway Alert: ಚನ್ನಸಂದ್ರ ನಿಲ್ದಾಣದಲ್ಲಿ ಕಾಮಗಾರಿ, ವಿವಿಧ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ!












Click it and Unblock the Notifications