ಬೆಂಗಳೂರಿಗರಿಗೆ ಬೀದಿನಾಯಿ ಕಾಟ: ಎರಡು ವರ್ಷದಲ್ಲಿ 52,262 ಮಂದಿಗೆ ಕಡಿತ!
ಬೆಂಗಳೂರು,ಜು.20: 2020 ರಿಂದೀಚೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 52,262 ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ಪಾಲಿಕೆ ಸಮೀಕ್ಷೆಯಿಂದ ತಿಳಿದುಬಂದಿದೆ.
ಬಿಬಿಎಂಪಿ ಈಗ ನಾಯಿಗಳ ಸಂತತಿ ನಿಯಂತ್ರಣದ ಕಾರ್ಯಗಳನ್ನು ಕೈಗೊಳ್ಳಲು ಹೆಚ್ಚಿನ ಎನ್ಜಿಒಗಳನ್ನು ಒಳಗೊಳ್ಳುವಂತೆ ಒತ್ತಾಯಿಸಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಗೆ ಮನವಿ ಮಾಡಿದೆ. ಅಲ್ಲದೆ ಈ ಸಮಸ್ಯೆಯನ್ನು ಬಗೆಹರಿಸಲು ಆ್ಯಂಟಿ ರೇಬಿಸ್ ಲಸಿಕೆಗಳನ್ನು ದೊಡ್ಡ ಪ್ರಮಾಣದಲ್ಲಿ ಲಭ್ಯವಾಗುವಂತೆ ಮಾಡಿದೆ.
ಆದಾಗ್ಯೂ, ಅನೇಕ ಸಾಮಾಜಿಕ ಕಾರ್ಯಕರ್ತರು ಮತ್ತು ಎನ್ಜಿಒಗಳು ಪಾವತಿಯಲ್ಲಿನ ವಿಳಂಬ ಮತ್ತು ತಮ್ಮ ದುರುಪಯೋಗದ ಕಾರಣದಿಂದ ಪಾಲಿಕೆಯೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿಮಲ್ ಬರ್ತ್ ಕಂಟ್ರೋಲ್ (ಎಬಿಸಿ) ಅಭಿಯಾನ ಮತ್ತು ಆ್ಯಂಟಿ ರೇಬೀಸ್ ಲಸಿಕೆ (ಎಆರ್ವಿ) ಕಾರ್ಯಕ್ರಮಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಗುರುತಿಸಲ್ಪಟ್ಟ ಎನ್ಜಿಒಗಳು ಪಾಲಿಕೆಯೊಂದಿಗೆ ಒಟ್ಟಾಗಿ ಪರಿಣಾಮಕಾರಿ ಕೆಲಸ ಮಾಡಬೇಕು ಎಂದು ಬಿಬಿಎಂಪಿ ಜಂಟಿ ನಿರ್ದೇಶಕ ಚಂದ್ರಯ್ಯ ಹೇಳಿದ್ದಾರೆ.

ನಾಯಿ ಕಚ್ಚುವುದು ಮತ್ತು ಬೀದಿ ನಾಯಿಗಳ ಹಾವಳಿಯನ್ನು ಪರಿಹರಿಸಲು ಅನಿಮಲ್ ಬರ್ತ್ ಕಂಟ್ರೋಲ್ ಮತ್ತು ಆ್ಯಂಟಿ ರೇಬೀಸ್ ಲಸಿಕೆ ಅಭಿಯಾನಗಳನ್ನು ಹೆಚ್ಚಿಸಲಾಗಿದೆ. ನಮ್ಮಲ್ಲಿ ಹೆಚ್ಚಿನ ಎನ್ಜಿಒಗಳು ಮುಂದೆ ಬರುತ್ತಿಲ್ಲವಾದ್ದರಿಂದ ಹೆಚ್ಚಿನ ಎನ್ಜಿಒಗಳನ್ನು ಗುರುತಿಸಲು ನಾವು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಗೆ ಪತ್ರ ಬರೆದಿದ್ದೇವೆ. ಇದರಿಂದಾಗಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬಹುದಾಗಿದೆ ಎಂದು ಚಂದ್ರಯ್ಯ ಹೇಳಿದರು.
ಎನ್ಜಿಒಗಳಿಗೆ ಸಕಾಲದಲ್ಲಿ ಹಣ ಪಾವತಿ ಮಾಡದೆ, ಮೂಲಸೌಕರ್ಯ ಕಲ್ಪಿಸದೆ ಸತಾಯಿಸುತ್ತಿದೆ ಎಂದು ಕಾರ್ಯಕರ್ತರು ಬಿಬಿಎಂಪಿಯನ್ನು ದೂರಿದ್ದಾರೆ. ಬಿಬಿಎಂಪಿಯಲ್ಲಿ ಎಬಿಸಿ ಅಥವಾ ಎಆರ್ವಿ ಅಭಿಯಾನದ ಉದ್ದೇಶವು ಯಶಸ್ವಿಯಾದಂತ್ತಿಲ್ಲ. ಎಬಿಸಿ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಗಳನ್ನು (ಎಸ್ಒಪಿ) ಅನುಸರಿಸುವ ಬಗ್ಗೆ ಪಾಲಿಕೆಯು ಸ್ವಲ್ಪವು ತಲೆಕೆಡಿಸಿಕೊಳ್ಳದ ಕಾರಣ ಎನ್ಜಿಒಗಳು ನಿರಾಸಕ್ತಿ ತೋರುತ್ತಿವೆ.

ಕಂಪ್ಯಾಶನ್ ಅನ್ಲಿಮಿಟೆಡ್ ಪ್ಲಸ್ ಆಕ್ಷನ್ (ಸಿಯುಪಿಎ) ಸಂಸ್ಥೆ ದಕ್ಷಿಣ ವಲಯದಲ್ಲಿ ಎಬಿಸಿ ಮತ್ತು ಎಆರ್ವಿ ಕಾರ್ಯಕ್ರಮಗಳನ್ನು ನಡೆಸುತ್ತಿತ್ತು. ಆದರೆ ಅವರು ಇತ್ತೀಚೆಗೆ ಕಾರ್ಯಕ್ರಮದಿಂದ ಹೊರಬಂದಿದ್ದಾರೆ. ಎಎಎಸ್ಎಆರ್ಎ ಮತ್ತು ಸಿಎಆರ್ಇ ನಂತಹ ಇನ್ನೂ ಕೆಲವು ಎನ್ಜಿಒಗಳು ಬಿಬಿಎಂಪಿಯೊಂದಿಗೆ ಕೆಲಸ ಮಾಡಲು ನಿರಾಕರಿಸಿವೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ನವೀನ ಕಾಮತ್ ಹೇಳಿದ್ದಾರೆ.
ಇಲ್ಲಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಗಳನ್ನು ರಾಜಿ ಮಾಡಿಕೊಳ್ಳಬೇಕು. ಒಂದು ಮೋರಿಯಲ್ಲಿ ಹಲವಾರು ನಾಯಿಗಳನ್ನು ಶಸ್ತ್ರಚಿಕಿತ್ಸೆಯ ನಂತರ ಇರಿಸಲಾಗುತ್ತದೆ ಹಾಗೂ ಅವುಗಳನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುತ್ತದೆ. ಯಲಹಂಕ ಹೊರತುಪಡಿಸಿ, ಯಾವುದೇ ಎಬಿಸಿ ಕೇಂದ್ರಗಳು ಪರಿಣಾಮಕಾರಿಯಾಗಿ ನಡೆಯುತ್ತಿಲ್ಲ ಎಂದು ಮತ್ತೊಬ್ಬ ಕಾರ್ಯಕರ್ತ ಹೇಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications