ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ನ ಸುಷ್ಮಾಗೆ 4 ಚಿನ್ನದ ಪದಕ
ಬೆಂಗಳೂರು, ಡಿ. 05: ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಬಿ.ಎ. ಪದವಿಯಲ್ಲಿ ನಗರದ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ನ ಸುಷ್ಮಾ ಎಚ್.ದೊಡ್ಡಬಿಲ್ಲಾ ಅವರು ನಾಲ್ಕು ಚಿನ್ನದ ಪದಕ ಹಾಗೂ ಎರಡು ನಗದು ಪುರಸ್ಕಾರ ಸಹಿತ 6 ಪದಕಗಳೊಂದಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಇದೇ ಸಂಸ್ಥೆಯ ಒಟ್ಟು 9 ವಿದ್ಯಾರ್ಥಿಗಳು ಟಾಪ್ 10 ರ್ಯಾಂಕ್ಗಳ ಪೈಕಿ ವಿವಿಧ ರ್ಯಾಂಕ್ಗಳನ್ನು ಗಳಿಸಿದ್ದಾರೆ.
ವಿಷ್ಣುಶಿವ 2ನೇ ರ್ಯಾಂಕ್, ಮೇಘಾ ಚೌಧರಿ 3ನೇ ರ್ಯಾಂಕ್, ಅನೀಸ್ ಫಾತಿಮಾ 4ನೇ ರ್ಯಾಂಕ್, ಮಹಾಂಕಾಳಿ ವೆಂಕಟ್ ಸ್ವಸ್ತಿಕಾ 6ನೇ ರ್ಯಾಂಕ್, ಧರ್ಮಶ್ರೀ ಶೆಟ್ಟಿ 7ನೇ ರ್ಯಾಂಕ್, ಮಾರೇಗೌಡ ಪಲ್ಗುಣ 8ನೇ ರ್ಯಾಂಕ್ ಹಾಗೂ ಕಾವೇರಿ ಮತ್ತು ಅಭಿಲಾಷ್ ಜಿ.ಆರ್. ಅವರು ತಲಾ 10ನೇ ರ್ಯಾಂಕ್ ಗಳಿಸಿ ಕಿರುನಗೆ ಬೀರಿದ್ದಾರೆ.

*ಯುಪಿಎಸ್ಸಿಗೆ ತಯಾರಿ*
ರಾಣೆಬೆನ್ನೂರಿನ ಸುಷ್ಮಾ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದು, ಈಗಾಗಲೇ ಯುನಿವರ್ಸಲ್ ಕೋಚಿಂಗ್ ಸೆಂಟರ್ನಲ್ಲಿ ಅಭ್ಯಾಸ ಮುಂದುವರಿಸಿದ್ದಾರೆ. ಇದಕ್ಕೆ ಬುನಾದಿಯಾಗಿ ಅವರು ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ನಲ್ಲಿ ಬಿ.ಎ.ವ್ಯಾಸಂಗ ಮಾಡಿದ್ದರು.
"ನನ್ನ ಅಪ್ಪ ಸರ್ಕಾರಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರು, ತಾಯಿ ಗೃಹಿಣಿ. ಯುಪಿಎಸ್ಸಿ ಪರೀಕ್ಷೆಯ ಸಲುವಾಗಿಯೇ ಯುನಿವರ್ಸಲ್ ಸ್ಕೂಲ್ಗೆ ದಾಖಲಾದೆ. ಇಲ್ಲಿನ ಮಾರ್ಗದರ್ಶನ ಅತ್ಯುತ್ತಮವಾಗಿದ್ದುದಕ್ಕೇ ಮೊದಲ ರ್ಯಾಂಕ್ ಗಳಿಸುವುದು ಸಾಧ್ಯವಾಯಿತು. ಯುಪಿಎಸ್ಸಿ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿ ಐಎಎಸ್ ಅಥವಾ ಐಪಿಎಸ್ ಅಧಿಕಾರಿಯಾಗಬೇಕೆಂಬ ಕನಸು ಇಟ್ಟುಕೊಂಡಿದ್ದೇನೆ' ಎಂದು ಸುಷ್ಮಾ ಹೇಳಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿಯಿರುವ ಕೋಲೂರಿನ ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಟೂಟ್ನ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ಬಿ.ಎ. ಬಿ.ಕಾಂ. ಜತೆಯಲ್ಲಿ ಐಎಎಸ್, ಕೆಎಎಸ್ಗೆ ತರಬೇತಿ ನೀಡುವ ಇಂಟಿಗ್ರೇಟೆಡ್ ಕೋಚಿಂಗ್ ನೀಡುವ ಸಂಸ್ಥೆಯಾಗಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications