ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ನ ಸುಷ್ಮಾಗೆ 4 ಚಿನ್ನದ ಪದಕ
ಬೆಂಗಳೂರು, ಡಿ. 05: ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಬಿ.ಎ. ಪದವಿಯಲ್ಲಿ ನಗರದ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ನ ಸುಷ್ಮಾ ಎಚ್.ದೊಡ್ಡಬಿಲ್ಲಾ ಅವರು ನಾಲ್ಕು ಚಿನ್ನದ ಪದಕ ಹಾಗೂ ಎರಡು ನಗದು ಪುರಸ್ಕಾರ ಸಹಿತ 6 ಪದಕಗಳೊಂದಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.
ಇದೇ ಸಂಸ್ಥೆಯ ಒಟ್ಟು 9 ವಿದ್ಯಾರ್ಥಿಗಳು ಟಾಪ್ 10 ರ್ಯಾಂಕ್ಗಳ ಪೈಕಿ ವಿವಿಧ ರ್ಯಾಂಕ್ಗಳನ್ನು ಗಳಿಸಿದ್ದಾರೆ.
ವಿಷ್ಣುಶಿವ 2ನೇ ರ್ಯಾಂಕ್, ಮೇಘಾ ಚೌಧರಿ 3ನೇ ರ್ಯಾಂಕ್, ಅನೀಸ್ ಫಾತಿಮಾ 4ನೇ ರ್ಯಾಂಕ್, ಮಹಾಂಕಾಳಿ ವೆಂಕಟ್ ಸ್ವಸ್ತಿಕಾ 6ನೇ ರ್ಯಾಂಕ್, ಧರ್ಮಶ್ರೀ ಶೆಟ್ಟಿ 7ನೇ ರ್ಯಾಂಕ್, ಮಾರೇಗೌಡ ಪಲ್ಗುಣ 8ನೇ ರ್ಯಾಂಕ್ ಹಾಗೂ ಕಾವೇರಿ ಮತ್ತು ಅಭಿಲಾಷ್ ಜಿ.ಆರ್. ಅವರು ತಲಾ 10ನೇ ರ್ಯಾಂಕ್ ಗಳಿಸಿ ಕಿರುನಗೆ ಬೀರಿದ್ದಾರೆ.

*ಯುಪಿಎಸ್ಸಿಗೆ ತಯಾರಿ*
ರಾಣೆಬೆನ್ನೂರಿನ ಸುಷ್ಮಾ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದು, ಈಗಾಗಲೇ ಯುನಿವರ್ಸಲ್ ಕೋಚಿಂಗ್ ಸೆಂಟರ್ನಲ್ಲಿ ಅಭ್ಯಾಸ ಮುಂದುವರಿಸಿದ್ದಾರೆ. ಇದಕ್ಕೆ ಬುನಾದಿಯಾಗಿ ಅವರು ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ನಲ್ಲಿ ಬಿ.ಎ.ವ್ಯಾಸಂಗ ಮಾಡಿದ್ದರು.
"ನನ್ನ ಅಪ್ಪ ಸರ್ಕಾರಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರು, ತಾಯಿ ಗೃಹಿಣಿ. ಯುಪಿಎಸ್ಸಿ ಪರೀಕ್ಷೆಯ ಸಲುವಾಗಿಯೇ ಯುನಿವರ್ಸಲ್ ಸ್ಕೂಲ್ಗೆ ದಾಖಲಾದೆ. ಇಲ್ಲಿನ ಮಾರ್ಗದರ್ಶನ ಅತ್ಯುತ್ತಮವಾಗಿದ್ದುದಕ್ಕೇ ಮೊದಲ ರ್ಯಾಂಕ್ ಗಳಿಸುವುದು ಸಾಧ್ಯವಾಯಿತು. ಯುಪಿಎಸ್ಸಿ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿ ಐಎಎಸ್ ಅಥವಾ ಐಪಿಎಸ್ ಅಧಿಕಾರಿಯಾಗಬೇಕೆಂಬ ಕನಸು ಇಟ್ಟುಕೊಂಡಿದ್ದೇನೆ' ಎಂದು ಸುಷ್ಮಾ ಹೇಳಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿಯಿರುವ ಕೋಲೂರಿನ ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಟೂಟ್ನ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್ ಬಿ.ಎ. ಬಿ.ಕಾಂ. ಜತೆಯಲ್ಲಿ ಐಎಎಸ್, ಕೆಎಎಸ್ಗೆ ತರಬೇತಿ ನೀಡುವ ಇಂಟಿಗ್ರೇಟೆಡ್ ಕೋಚಿಂಗ್ ನೀಡುವ ಸಂಸ್ಥೆಯಾಗಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications