ಬೆಂಗಳೂರಿನ 6 ಲಕ್ಷ ಮಕ್ಕಳು ಪಟಾಕಿ ಹೊಡೆಯೋಲ್ಲ
ಬೆಂಗಳೂರು, ನ.2 : ಉದ್ಯಾನನಗರಿ ಬೆಂಗಳೂರಿನಲ್ಲಿ ಈ ಬಾರಿಯ ದೀಪಾವಳಿಗೆ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪಟಾಕಿ ಹೊಡೆಯದೆ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಮಾಡುತ್ತೇವೆ ಎಂದು ಸಂಕಲ್ಪ ಮಾಡಿದ್ದಾರೆ. ಆದ್ದರಿಂದ ನಗರದಲ್ಲಿ ಪಟಾಕಿಗಳಿಂದ ಉಂಟಾಗುವ ಮಾಲಿನ್ಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ.
ಶಾಲಾ ಮಕ್ಕಳಿಗೆ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಮಾಡುವಂತೆ ಮಾಲಿನ್ಯ ನಿಯಂತ್ರಂಣ ಮಂಡಳಿ ನೀಡಿದ ಕರೆ ಯಶಸ್ವಿಯಾಗಿದ್ದು, ಸುಮಾರು 6 ಲಕ್ಷ ಮಕ್ಕಳು ಪಟಾಕಿಯಿಂದ ದೂರವಿರುತ್ತೇವೆ ಎಂದು ಸಂಕಲ್ಪ ಮಾಡಿದ್ದಾರೆ. ಇದರಿಂದ ನಗರದಲ್ಲಿ ವಾಯು ಮತ್ತು ಶಬ್ದ ಮಾಲಿನ್ಯ ಸ್ಪಲ್ಪ ಕಡಿಮೆಯಾಗಲಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಾಮನಾಚಾರ್ಯ ಈ ಕುರಿತು ಹೇಳಿಕೆ ನೀಡಿದ್ದು, ಶಾಲೆಯಲ್ಲಿನ ಮಕ್ಕಳಿಗೆ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಕರೆ ನೀಡಿದರೆ ಅವರು ಅದನ್ನು ತಮ್ಮ ಪೋಷಕರಿಗೂ ತಲುಪಿಸುತ್ತಾರೆ. 120 ಡಿಸಿಬಲ್ ಗಿಂತ ಹೆಚ್ಚಿನ ಶಬ್ದ ಬರುವ ಪಟಾಕಿಗಳನ್ನು ಬಳಸಬೇಡಿ ಎಂದು ಜನರಿಗೆ ಮನವಿ ಮಾಡಿರುವುದಾಗಿ ಹೇಳಿದರು.
ನಾವು ದೀಪಾವಳಿಯನ್ನು ಬೆಳಕಿನ ಹಬ್ಬವಾಗಿ ಆಚರಣೆ ಮಾಡುತ್ತೇವೆ, ಮಾಲಿನ್ಯದ ಹಬ್ಬವಾಗಿ ಆಚರಣೆ ಮಾಡುವುದಿಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ. ವಾಯು, ಶಬ್ದ ಮಾಲಿನ್ಯ ತಡೆಗಟ್ಟುವ ಸಲುವಾಗಿ ನಾವು ಆದಷ್ಟು ಕಡಿಮೆ ಪರಾಕಿಗಳನ್ನು ಹೊಡೆಯಲು ಪ್ರಯತ್ನಿಸುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ನಾವು ಮನೆಯಲ್ಲಿ ದೀಪಗಳನ್ನು ಹಚ್ಚುವ ಮೂಲಕ ದೀಪಾವಳಿ ಆಚರಣೆ ಮಾಡಲು ಮುಂದಾಗಿದ್ದೇವೆ. ಪಟಾಕಿಗಳನ್ನು ಸುಡುವುದಿಲ್ಲ ಎಂದು ಎಲ್ಲಾ ಸ್ನೇಹಿತರು ಸೇರಿ ನಿರ್ಧಾರ ಕೈಗೊಂಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಬೆಂಗಳೂರಿನ ಶಾಲೆಗಳ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುತ್ತಾರೆ.
-
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications