Get Updates
Get notified of breaking news, exclusive insights, and must-see stories!

6 ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿ: ಭೂಸ್ವಾಧೀನ ಸೇರಿ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿ ವಿಚಾರವು ಈ ವರ್ಷ ಚರ್ಚೆಯಾದ ಪ್ರಮುಖ ಅಭಿವೃದ್ಧಿ ವಿಷಯಗಳಲ್ಲಿ ಒಂದು. ಇದರೊಂದಿಗೆ ಕರ್ನಾಟಕದ ಆರು ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿಯ ಬಗ್ಗೆಯೂ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಆರು ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಯಾವುದು ಆರು ಪ್ರಮುಖ ವಿಮಾನ ನಿಲ್ದಾಣಗಳು ಹಾಗೂ ಸಿದ್ದರಾಮಯ್ಯ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಭರ್ಜರಿ ಸಿದ್ಧತೆ ಪ್ರಾರಂಭಿಸಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ತಜ್ಞರ ತಂಡ ರಚನೆ, ಟೆಂಡರ್ ಆಹ್ವಾನ ಸೇರಿದಂತೆ ಪ್ರಮುಖ ಬೆಳವಣಿಗೆಗಳು ನಡೆದಿವೆ. ಇದರೊಂದಿಗೆ 6 ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಕೆಲವೊಂದು ನಿರ್ದಿಷ್ಟ ಸೂಚನೆಗಳನ್ನು ಸಹ ಕೊಡಲಾಗಿದೆ.

6 Major Airports Developed in Karnataka CM Siddaramaiah Shares Good News

ಕರ್ನಾಟಕದ ಆರು ಪ್ರಮುಖ ವಿಮಾನ ನಿಲ್ದಾಣಗಳ ಅಭಿವೃದ್ಧಿ

ಕರ್ನಾಟಕ ಸರ್ಕಾರವು ಪ್ರಮುಖ 6 ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಮುಂದಾಗಿದೆ. ಅದರಲ್ಲಿ ಹಾಸನ ವಿಮಾನ ನಿಲ್ದಾಣ, ವಿಜಯಪುರ, ರಾಯಚೂರು, ಮೈಸೂರು, ಕಾರವಾರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳು ಸೇರಿವೆ. ಈ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸುವುದಕ್ಕೆ ಸೂಚನೆ ನೀಡಿದ್ದಾರೆ. ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು. ಈ ಸಭೆಯಲ್ಲಿ ವಿಮಾನ ನಿಲ್ದಾಣಗಳ ವಿಚಾರವೂ ಚರ್ಚರ ಆಗಿದೆ.

ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನವು ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂ ಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಂತ್ರಿಕ ಸಮಸ್ಯೆ ಪರಿಹರಿಸಲು ಸೂಚನೆ

ಕರ್ನಾಟಕದಲ್ಲಿ ಆರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಹಾಗೂ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಚರ್ಚೆ ನಡೆದಿದೆ. ಕೆಲವು ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಅಥವಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎದುರಾಗಿರುವ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನ ಮತ್ತು ಮೈಸೂರು ವಿಮಾನ ನಿಲ್ದಾಣ: ಇನ್ನು ಹಾಸನ ವಿಮಾನ ನಿಲ್ದಾಣಕ್ಕಾಗಿ ಭೂಮಿ ನೀಡಿದ ರೈತರಿಗೆ ವಿಳಂಬ ಮಾಡದೆ ತಕ್ಷಣವೇ ಭೂಸ್ವಾಧೀನ ಪರಿಹಾರವನ್ನು ವಿತರಿಸಲು ಸೂಚಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಣೆಗಾಗಿ ಈಗಾಗಲೇ ರಾಜ್ಯ ಸರ್ಕಾರವು 319 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಭೂಸ್ವಾಧೀನಕ್ಕಾಗಿ ವೆಚ್ಚ ಮಾಡಿದೆ. ಅಲ್ಲದೇ ಕಾಮಗಾರಿಯನ್ನು ವೇಗಗೊಳಿಸಲು ಕೇಂದ್ರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮನವಿ ಸಲ್ಲಿಸಲಾಗಿದೆ.

6 ವಿವಿಧ ವಿಮಾನ ನಿಲ್ದಾಣಗಳ ಪ್ರಗತಿ

ರಾಜ್ಯದ ಆರು ವಿಮಾನ ನಿಲ್ದಾಣಗಳ ಪ್ರಗತಿಯು ವಿವಿಧ ಹಂತಗಳಲ್ಲಿ ಇದೆ. ಹಾಸನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪರಿಹಾರ ಪ್ರಕ್ರಿಯೆ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣವು 2026ರಲ್ಲಿ ಕಾರ್ಯಾಚರಣೆಗೆ ಸಿದ್ಧವಾಗುವ ನಿರೀಕ್ಷೆ ಇದೆ. ರಾಯಚೂರು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾರವಾರ ನೌಕಾನೆಲೆ ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಗತಿಯಲ್ಲಿದೆ. ಶಿವಮೊಗ್ಗ ಅಥವಾ ಇತರ ಪ್ರಾದೇಶಿಕ ನಿಲ್ದಾಣಗಳು ಅಭಿವೃದ್ಧಿ ಮತ್ತು ಅಂತರರಾಷ್ಟ್ರೀಯ ದರ್ಜೆಗೆ ಏರಿಸುವ ಪ್ರಕ್ರಿಯೆ ನಡೆದಿದೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣ ವಿಚಾರವೂ ಚರ್ಚೆ ಆಗುತ್ತಿದೆ. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಕನಕಪುರ ರಸ್ತೆ ಅಥವಾ ಕುಣಿಗಲ್ ರಸ್ತೆ ಸಮೀಪದ ಸ್ಥಳಗಳನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+