ಬೆಂಗಳೂರಿನಲ್ಲೂ ಹನಿಟ್ರ್ಯಾಪ್ ಪ್ರಕರಣ: ಆರೋಪಿಗಳ ಬಂಧನ
ಉದ್ಯಾನನಗರಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರು ಜನರನ್ನು ಬಂಧಿಸುವಲ್ಲಿ ಬ್ಯಾಟರಾಯನಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು, ಏಪ್ರಿಲ್ 1: ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಗಂಗಾಧರ್ ಎಂಬುವವರನ್ನು ಬಲೆಗೆ ಹಾಕಿಕೊಂಡು ನಗನಾಣ್ಯಗಳನ್ನು ದೋಚಿದ್ದ 6 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಬ್ಯಾಟರಾಯನಪುರದ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದೊಂದು ಹನಿಟ್ರ್ಯಾಪ್ ಪ್ರಕರಣವಾಗಿದ್ದು, ಬಂಧಿತರನ್ನು ಮಂಜುನಾಥ್, ಮಹಾದೇವ, ಸ್ವಾಮಿ, ಮಹೇಶ್, ಆಶಾ, ಜ್ಯೋತಿ ಎಂದು ಗುರುತಿಸಲಾಗಿದೆ.[ಮಹಿಳಾ ಸಹಾಯವಾಣಿಗೇ ಅಶ್ಲೀಲ ಕರೆ!]

ತಾವು ಖಾಸಗಿ ಬ್ಯಾಂಕಿನ ಮ್ಯಾನೇಜರ್ ಎಂದು ಗಂಗಾಧರ್ ಅವರನ್ನು ಪರಿಚಯಿಸಿಕೊಂಡಿದ್ದ ಜ್ಯೋತಿ ಮತ್ತವರ ತಂಡ, ಗಂಗಾಧರ್ ಅವರೊಂದಿಗೆ ಫೋನಿನಲ್ಲಿ ಕನಿಷ್ಠ 15 ಬಾರಿ ಮಾತನಾಡಿತ್ತು. ನಂತರ ಬ್ಯಾಂಕ್ ಅಕೌಂಟ್ ತೆರೆಯುವ ಬಗ್ಗೆ ಮಾಹಿತಿ ನೀಡುವುದಾಗಿ ಅವರನ್ನು ಖಾಸಗಿ ಹೊಟೇಲ್ ಒಂದಕ್ಕೆ ಕರೆಸಿಕೊಂಡಿತ್ತು. ವಾಪಸ್ಸಾಗುವಾಗ ಇವರ ಕಣ್ಣಿಗೆ ಬಟ್ಟೆ ಕಟ್ಟಿ ಬಿಡದಿ ಕಡೆಗೆ ಕರೆದೊಯ್ದು, 10 ಲಕ್ಷ ರೂಪಾಯಿ ಹಣ ನೀಡದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆಂದು ಬೆದರಿಕೆ ಹಾಕಲಾಗಿತ್ತು.[ದಂಡುಪಾಳ್ಯ ಗ್ಯಾಂಗ್ ಸದಸ್ಯ ತಿಮ್ಮನ ಬಿಡುಗಡೆಗೆ ಹೈಕೋರ್ಟ್ ಆದೇಶ]
ಇವರ ಬೆದರಿಕೆಗೆ ಹೆದರಿದ ಉದ್ಯಮಿ ತಮ್ಮ ಸ್ನೇಹಿತರ ಬಳಿ ಹಣ ತರಿಸಿಕೊಟ್ಟಿದ್ದರು. ನಂತರ ಅವರನ್ನು ಅಲ್ಲಿಯೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು.[ಬೆಂಗಳೂರು: ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನ]
ವಾಪಾಸ್ಸಾದ ಗಂಗಾಧರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಆರೂ ಜನ ಆರೋಪಿಗಳನ್ನು ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು











Click it and Unblock the Notifications