ಶಿಕ್ಷಕಿಯಿಂದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು, ನ. 22 : ಮಗುವಿನ ಮೇಲೆ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರ್.ಟಿ.ನಗರದ ಶಾಲೆಯೊಂದರಲ್ಲಿ ಆರು ವರ್ಷ ಪ್ರಾಯದ ಬಾಲಕಿಗೆ ಶಿಕ್ಷಕಿಯೊಬ್ಬರು ಲೈಂಗಿಕ ಕಿರುಕುಳ ನೀಡಿ ಬಗ್ಗೆ ದೂರು ದಾಖಲಾಗಿದೆ.
ಶಾಲೆಯಲ್ಲಿ ದೌರ್ಜನ್ಯ ನಡೆದಿದೆ ಎಂದು ಬಾಲಕಿಯ ಪೋಷಕರು ಆರ್.ಟಿ.ನಗರ ಪೊಲೀಸರಿಗೆ ಶುಕ್ರವಾರ ಸಂಜೆ ದೂರು ನೀಡಿದ್ದಾರೆ. ಬಾಲಕಿಯ ಮೇಲೆ ದೌರ್ಜನ್ಯ ನಡೆದಿರುವುದು ವೈದ್ಯಕೀಯಲ್ಲಿ ಸಾಬೀತಾಗಿದೆ. ಸಂಜೆ 5 ಗಂಟೆಗೆ ಬಾಲಕಿಯನ್ನು ನಿಮ್ಹಾನ್ಸ್ಗೆ ದಾಖಲು ಮಾಡಲಿದ್ದಾರೆ.

ಆರ್.ಟಿ.ನಗರ ಪೊಲೀಸರು ಬಾಲಕಿಯನ್ನು ಕೌನ್ಸಿಲಿಂಗ್ಗೆ ಕರೆದುಕೊಂಡು ಹೋಗಿದ್ದು, ನಂತರ ಶಾಲೆಯ ಶಿಕ್ಷಕಿಯನ್ನು ಬಂಧಿಸುವ ಸಾಧ್ಯತೆ ಇದೆ. ಪೋಷಕರು ನೀಡಿರುವ ದೂರಿನಲ್ಲಿ ಶಿಕ್ಷಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಶನಿವಾರ ಬೆಳಗ್ಗೆ ಶಾಲೆಯ ಮುಂಭಾಗದಲ್ಲಿ ಪೋಷಕರು ಸೇರಿದಂತೆ, ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣದ ಬಳಿಕ ಶಾಲೆಯ ಬಳಿ ಹೆಚ್ಚಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಶಾಲೆಗೆ ಆಡಳಿತ ಮಂಡಳಿ ಇಂದು ರಜೆ ಘೋಷಿಸಿದೆ.
ಶಾಲೆಯಲ್ಲಿ ನಡೆದ ದೌರ್ಜನ್ಯ ಪ್ರಕರಣಗಳು
* ಜುಲೈ ತಿಂಗಳಿನಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣದ ಬೆಂಗಳೂರಿನ ವಿಬ್ಗಯಾರ್ ಶಾಲೆಯಲ್ಲಿ ಬೆಳಕಿಗೆ ಬಂದಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಶಿಕ್ಷಣ ಮತ್ತು ಪೊಲೀಸ್ ಇಲಾಖೆ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಮಾರ್ಗಸೂಚಿಯನ್ನು ರೂಪಿಸಿತ್ತು. [ಶಾಲೆಯಲ್ಲಿ ದೌರ್ಜನ್ಯ ಪ್ರಕರಣಗಳು]
* ಉಡುಪಿಯ ಹೆಬ್ರಿ ಸಮೀಪದ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಾಗಿತ್ತು. ನಾಲ್ವರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕನನ್ನು ಹೆಬ್ರಿ ಪೊಲೀಸರು ಬಂಧಿಸಿದ್ದರು. [ಈ ನಿರ್ಧಾರದಿಂದ ಅತ್ಯಾಚಾರ ನಿಲ್ಲುತ್ತಾ?]
* ಬೆಂಗಳೂರಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಲಾಳದ ಮಾರುತಿ ಶಾಲೆಯ ಅತಿಥಿ ಶಿಕ್ಷಕ ಚಂದ್ರಮೌಳಿ (69)ಯನ್ನು ಪೊಲೀಸರು ಬಂಧಿಸಿದ್ದರು.
* ಒಂದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಕರಣ ಇಂದಿರಾನಗರ ಕೇಂಬ್ರಿಡ್ಜ್ ಇಂಗ್ಲೀಷ್ ಶಾಲೆಯಲ್ಲಿ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು. ಆರೋಪಿ ಜೈಶಂಕರ್ನನ್ನು ಬೈಯಪ್ಪನ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications