ಪೆರಿಫೆರಲ್ ರಿಂಗ್ ರಸ್ತೆ ನೈಸ್ ರಸ್ತೆಗೆ ಸೇರಲು 300 ಎಕರೆ ಭೂಮಿ ಬೇಕು
ಬೆಂಗಳೂರು, ನವೆಂಬರ್ 29 : ಕರ್ನಾಟಕ ಸರ್ಕಾರ ಬೆಂಗಳೂರು ನಗರದ ಸುತ್ತಲು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ ಮಾಡುವ ಯೋಜನೆಗೆ ಒಪ್ಪಿಗೆ ನೀಡಿದೆ. ಈ ರಸ್ತೆಯನ್ನು ನೈಸ್ ರಸ್ತೆಗೆ ಸಂಪರ್ಕಿಸಲಾಗುತ್ತದೆ. ಆದರೆ, ಹೇಗೆ ಎಂಬುದು ಅಧಿಕಾರಿಗಳ ಪ್ರಶ್ನೆ.
ಬೆಂಗಳೂರು ನಗರದ ಸುತ್ತ 17 ಸಾವಿರ ಕೋಟಿ ವೆಚ್ಚದಲ್ಲಿ 65 ಕಿ.ಮೀ. ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲು ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. 12 ವರ್ಷಗಳ ಹಿಂದೆ ರೂಪಿಸಿದ್ದ ಯೋಜನೆ ಈಗ ಜಾರಿಗೆ ಬರುತ್ತಿದೆ.
ಪ್ರಸ್ತುತ ಇರುವ ನೈಸ್ ರಸ್ತೆ ತುಮಕೂರು ರಸ್ತೆ-ಮಾಗಡಿ ರಸ್ತೆ-ಮೈಸೂರು ರಸ್ತೆ-ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಈಗ ನಿರ್ಮಾಣ ಮಾಡಲು ಉದ್ದೇಶಿಸಿರುವ ಪೆರಿಫೆರಲ್ ರಿಂಗ್ ರಸ್ತೆ ಹೊಸೂರು ರಸ್ತೆ-ಹಳೆ ಮದ್ರಾಸ್ ರಸ್ತೆ-ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಇದರಿಂದ ಬೆಂಗಳೂರು ನಗರದ ಸುತ್ತಲೂ ರಿಂಗ್ ರಸ್ತೆ ನಿರ್ಮಾಣವಾದಂತೆ ಆಗಲಿದೆ.

ಕಳೆದ ವಾರ ಸಭೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪೆರಿಫೆರಲ್ ರಿಂಗ್ ರಸ್ತೆಯನ್ನು ನೈಸ್ ರಸ್ತೆಗೆ ಸಂಪರ್ಕಿಸಲು 300 ಎಕರೆ ಭೂಸ್ವಾಧೀನ ಮಾಡಿಕೊಳ್ಳಬೇಕು ಎಂದು ಅಂದಾಜಿಸಿದ್ದಾರೆ.
ತುಮಕೂರು ರಸ್ತೆ ಮತ್ತು ಹೊಸರು ರಸ್ತೆಯ ಭಾಗದಲ್ಲಿ ತಲಾ 150 ಎಕರೆ ಜಮೀನು ಸಿಕ್ಕರೆ ಪೆರಿಫೆರಲ್ರಿಂಗ್ ರಸ್ತೆಯನ್ನು ನೈಸ್ ರಸ್ತೆಗೆ ಸಂಪರ್ಕಿಸಬಹುದು ಎಂದು ಅಂದಾಜಿಸಿದ್ದಾರೆ. ರಸ್ತೆ ಮಾರ್ಗದ ಸಮೀಕ್ಷೆಯನ್ನು ನಡೆಸಿ, ನಂತರ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ.
ಕರ್ನಾಟಕ ಸರ್ಕಾರ ಭೂ ಸ್ವಾಧೀನಕ್ಕಾಗಿ 10 ಸಾವಿರ ಕೋಟಿ ರೂ.ಗಳನ್ನು ಬಿಡಿಎಗೆ ನೀಡಲಿದೆ. ಆದರೆ, ಅದಕ್ಕಿಂತ ಹೆಚ್ಚಿನ ಹಣ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಸರ್ವೇ ಕಾರ್ಯಗಳು ಮುಗಿದ ಬಳಿಕ ಎಷ್ಟು ಭೂಮಿ ಬೇಕಾಗಬಹುದು? ಎಂಬ ಅಂದಾಜು ಸಿಗಲಿದೆ.
-
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications