ಬೆಂಗಳೂರಲ್ಲಿ ₹694 ವೆಚ್ಚದಲ್ಲಿ 349 ಕಿ.ಮೀ ಉದ್ದದ 182 ರಸ್ತೆಗಳ ಬ್ಲಾಕ್ ಟಾಪಿಂಗ್!
ಬೆಂಗಳೂರಿನಲ್ಲಿ ಮಹತ್ವದ ಕಾಮಗಾರಿಗೆ ಗ್ರೇಟರ್ ಬೆಂಗಳೂರು ಆಡಳಿತ ಮುಂದಾಗಿದೆ. ನಗರದಲ್ಲಿ 694 ಕೋಟಿ ರೂಪಾಯಿ ವೆಚ್ಚದಲ್ಲಿ 349 ಕಿ.ಮೀ ಉದ್ದದ 182 ರಸ್ತೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಪ್ರಗತಿಯಲ್ಲಿರುವ ಕಡೆ ರಸ್ತೆ ಮೇಲೆ ನೀರು ನಿಲ್ಲದಂತೆ ಡಾಂಬರೀಕರಣ ಹಾಕಬೇಕು. ಜೊತೆಗೆ ಡಾಂಬರೀಕರಣ ಕಾಮಗಾರಿಯನ್ನು ನವೆಂಬರ್ 2025ರ ಒಳಗಾಗಿ ಪೂರ್ಣಗೊಳಿಸಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಲ್ಲದೇ ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮಹೇಶ್ವರ್ ರಾವ್ ಅವರು ಸೂಚನೆ ಕೊಟ್ಟಿದ್ದಾರೆ. ಜಿಬಿಎ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಸಲುವಾಗಿ ಮಲ್ಲೇಶ್ವರಂ ನ ಐ.ಪಿ.ಪಿ ಕೇಂದ್ರದಲ್ಲಿ ಸೋಮವಾರ (ಸೆಪ್ಟೆಂಬರ್ 15ರಂದು) ಅಧಿಕಾರಿಗಳು ಹಾಗು ಗುತ್ತಿಗೆದಾರರ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ 702 ಕಿ.ಮೀ ಆರ್ಟಿರಿಯಲ್ ಹಾಗೂ 946 ಕಿ.ಮೀ ಸಬ್ ಆರ್ಟಿರಿಯಲ್ ರಸ್ತೆಗಳು ಸೇರಿದಂತೆ ಒಟ್ಟು 1648 ಕಿ.ಮೀ ಪ್ರಮುಖ ರಸ್ತೆಗಳಿವೆ. ಈ ಪೈಕಿ 2016 ರಿಂದ 2024 ರವರೆಗೆ 104 ಕಿ.ಮೀ ಉದ್ದದ 61 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಹೊಸದಾಗಿ 1700 ಕೋಟಿ ರೂಪಾಯಿ ವೆಚ್ಚದಲ್ಲಿ 143 ಕಿ.ಮೀ ಉದ್ದದ 82 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಕಾಮಗಾರಿ ಪ್ರಾರಂಭಿಸಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಕಡೆಗಳಲ್ಲಿ ಡಕ್ಟ್ ಗಳ ಅಳವಡಿಕೆ, ಸೈಡ್ ಡ್ರೈನ್, ಒಳ ಚರಂಡಿ, ಕಾವೇರಿ ನೀರಿನ ಪೈಪ್ ಲೈನ್ ಸ್ಥಳಾಂತರ ಮಾಡುತ್ತಿರುವ ಸ್ಥಳಗಳಲ್ಲಿ, ವಾಹನಗಳ ಸಂಚಾರದ ವೇಳೆ ಅವಘಡಗಳು ಸಂಭವಿಸುವುದನ್ನು ತಪ್ಪಿಸುವ ಸಲುವಾಗಿ ಸುರಕ್ಷತಾ ದೃಷ್ಟಿಯಿಂದ ಬ್ಯಾರಿಕೇಡ್ ಹಾಗೂ ಕಾಷನ್ ಟೇಪ್ ಅವಳವಡಿಸಲು ಸೂಚನೆ ನೀಡಲಾಯಿತು. ಜೊತೆಗೆ ರಸ್ತೆ ಬದಿ ಹಾಕಿರುವಂತಹ ಡೆಬ್ರೀಸ್ ಗಳನ್ನು ಕೂಡಲೆ ತೆರವುಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.
ಡಿ.ಎಲ್.ಪಿ ರಸ್ತೆಗಳ ಜವಾಬ್ದಾರಿ ಗುತ್ತಿಗೆದಾರರಿಗೆ ವಹಿಸಿ: ನಗರದಲ್ಲಿ 401 ಕಿ.ಮೀ ಉದ್ದದ 178 ರಸ್ತೆಗಳು ದೋಷಮುಕ್ತ ಅವಧಿ (ಡಿ.ಎಲ್.ಪಿ) ಯಲ್ಲಿದ್ದು, ಆ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗುಳು, ಮೇಲ್ಮೈ ಪದರ ಹಾಳಾಗಿದ್ದರೆ ಗುತ್ತಿಗೆದಾರರೇ ಅದನ್ನು ದುರಸ್ಥಿಪಡಿಸಬೇಕು. ದುರಸ್ಥಿ ಮಾಡದಿದ್ದಲ್ಲಿ ಅವರಿಗೆ ಕಾಲಮಿತಿ ನಿಗದಿಪಡಿಸಬೇಕು. ಆ ಸಮಯದಲ್ಲೂ ಮುಚ್ಚದಿದ್ದರೆ ಪಾಲಿಕೆಯಿಂದಲೇ ಅದನ್ನು ಮುಚ್ಚಿ ಗುತ್ತಿಗೆದಾರರಿಗೆ ಬಿಡುಗಡೆ ಮಾಡುವ ಅನುದಾನದಲ್ಲಿ ಕಟಾವು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು 552 ಕಿ.ಮೀ ಉದ್ದದ 188 ರಸ್ತೆಗಳು ಡಿಎಲ್ಪಿ ಅವಧಿ ಪೂರ್ಣಗೊಂಡಿದ್ದು, ಅದರಲ್ಲಿ 435 ಕಿ.ಮೀ ಉದ್ದದ 126 ರಸ್ತೆಗಳು ಸುಸ್ತಿತಿಯಲ್ಲಿವೆ. ಉಳಿದ 116 ಕಿ.ಮೀ ಉದ್ದದ 62 ರಸ್ತೆಗಳಲ್ಲಿ ಸುಸ್ತಿತಿಯಲ್ಲಿರುವುದಿಲ್ಲ. ಈ ಸಂಬಂಧ ಆಯಾ ಪಾಲಿಕೆಗಳ ವ್ಯಾಪ್ತಿಗೆ ಬರುವ ರಸ್ತೆಗಳಲ್ಲಿ ಕೂಡಲೇ ದುರಸ್ಥಿ ಕಾರ್ಯ ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೊಳ್ಳಲು ಸೂಚನೆ ನೀಡಿದರು.
ಗುತ್ತಿಗೆ ಎ.ಎಂ.ಸಿ ನಿರ್ವಹಣೆ ಸರಿಯಾಗಿ ಮಾಡಲು ಕ್ರಮ: ನಗರ ರಸ್ತೆಗಳನ್ನು ಸ್ವಚ್ಛವಾಗಿಡಲು ವಾರ್ಷಿಕ ನಿರ್ವಹಣೆಗೆ ಗುತ್ತಿಗೆ ಪಡೆದಿರುವವರಿಂದ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಮಾಡಬೇಕು. ಪಾದಚಾರಿ ಮಾರ್ಗಗಳಲ್ಲಿ ಸಂಪೂರ್ಣ ಸ್ವಚ್ಛತೆ, ಹಾಳಾಗಿರುವ ಸ್ಲ್ಯಾಬ್ ಗಳ ಅಳವಡಿಕೆ, ಶೋಲ್ಡರ್ ಡ್ರೈನ್ ಗಳ ಕ್ಲೀನಿಂಗ್, ಗ್ರೇಟಿಂಗ್ ಅಳವಡಿಕೆ ಹಾಗೂ ಸ್ವಚ್ಛತೆಯನ್ನು ಸರಿಯಾಗಿ ಮಾಡುತ್ತಿರುವ ಕುರಿತು ಮೇಲ್ವಿಚಾರಣೆ ಮಾಡಲು ಸೂಚನೆ ನೀಡಿದರು.
ಆಯಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಭೆ ನಡೆಸಿ
ನಗರದಲ್ಲಿ ರಸ್ತೆಗಳು ಸುಸ್ಥಿತಿಯಲ್ಲಿರಬೇಕು. ಈ ಸಂಬಂಧ ಆಯಾ ನಗರಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಜೊತೆ ಸಭೆ ಏರ್ಪಡಿಸಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕಾಲಮಿತಿಯೊಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.
ಹೈಡೆನ್ಸಿಟಿ ಕಾರಿಡಾರ್ ಗಳಲ್ಲಿ ಕಾಮಗಾರಿಗೆ ವೇಗ ನೀಡಿ: ನಗರದಲ್ಲಿ 46 ಕಿ.ಮೀ ಉದ್ದದ 11 ಹೈಡೆನ್ಸಿಟಿ ಕಾರಿಡಾರ್ ಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಸ್ಥಳೀಯವಾಗಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಈ ರಸ್ತೆಗಳಲ್ಲಿ ಯಾವುದೇ ರಸ್ತೆ ಗುಂಡಿಗಳಿಲ್ಲದಂತೆ ಕ್ರಮವಹಿಸಲು ಸೂಚನೆ ಕೊಟ್ಟಿದ್ದಾರೆ.
ಸ್ವಚ್ಛತೆ ಮಾಡದಿದ್ದರೆ/ಹೂಳೆತ್ತದ್ದಿದ್ದರೆ ನೋಟೀಸ್ ನೀಡಿ: ನಗರದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆ ಕಾಮಗಾರಿ ತ್ಯಾಜ್ಯವನ್ನು ಮೇಟ್ರೋ ಇಲಾಖೆಯಿಂದಲೇ ಸ್ವಚ್ಛತೆ ಮಾಡಬೇಕು ಹಾಗೂ ಹೂಳೆತ್ತುವ ಕಾರ್ಯವನ್ನು ನಡೆಸಬೇಕು. ಈ ಸಂಬಂಧ ಸ್ವಚ್ಛತೆ/ಹೂಳೆತ್ತದಿರುವುದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟೀಸ್ ನೀಡಿ ಸ್ವಚ್ಛಗೊಳಿಸಬೇಕೆಂದು ಸೂಚನೆ ನೀಡಿದರು.
ಸಾಫ್ಟ್ವೇರ್ ಅಭಿವೃದ್ಧಿ: ನಗರದಲ್ಲಿ ಬರುವ ರಸ್ತೆಗಳಲ್ಲಿ ಎಲ್ಲೆಲ್ಲಿ ಗುಂಡಿಗಳಿವೆ, ಯಾವ್ಯಾವ ರಸ್ತೆಗಳಲ್ಲಿ ಏನೇನು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ, ಗುತ್ತಿಗೆ ಪಡೆದಿರುವರ್ಯಾರು ಎಂಬ ಮಾಹಿತಿ ಸೇರಿದಂತೆ ಇನ್ನಿತರೆ ಮಾಹಿತಿಯು ಒಂದೇ ಕಡೆ ಸಿಗುವಂತಹ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಲಾಗಿದೆ. ಅದಕ್ಕೆ ಅಧಿಕಾರಿಗಳ ವಿವರ ಹಾಗೂ ಮೊಬೈಲ್ ಸಂಖ್ಯೆಯನ್ನು ಕೂಡ ಅಳವಡಿಸಲು ಸೂಚನೆ ನೀಡಿದರು.
-
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications