Narayana Murthy: 70 ಗಂಟೆ ಕೆಲಸ ಚರ್ಚೆ ಮತ್ತೆ ಮುನ್ನೆಲೆಗೆ: ದೇಶದಲ್ಲಿ ಅವರೊಬ್ಬರಿಂದಲೇ ಸಾಧ್ಯ ಎಂದ ನಾರಾಯಣ ಮೂರ್ತಿ!
Narayana Murthy: ಭಾರತದ ಉದ್ಯೋಗಿಗಳು ವಾರಕ್ಕೆ ಕನಿಷ್ಠ 70 ಗಂಟೆ ಕೆಲಸ ಮಾಡಬೇಕು 100 ಗಂಟೆ ಕೆಲಸ ಮಾಡಿದರೂ ಕಡಿಮೆ ಎಂದು ಕೆಲವು ಉದ್ಯಮಿಗಳು ಈಚೆಗೆ ಹೇಳಿದ್ದರು. ಈ ಹೇಳಿಕೆಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ನಡುವೆ ಇನ್ಫೋಸಿಸ್ ಸಂಸ್ಥೆಯು ವಾರಕ್ಕೆ 70 ಗಂಟೆಗೂ ಹೆಚ್ಚು ಕೆಲಸ ಮಾಡುವವರಿಗೆ ಸಂದೇಶಗಳನ್ನು ಕಳುಹಿಸುತ್ತಿದೆ ಎನ್ನುವ ವಿಚಾರವೂ ಚರ್ಚೆಯಾಗಿತ್ತು. ನಾರಾಯಣ ಮೂರ್ತಿ ಅವರು ಮನಸ್ಸು ಬದಲಾಯಿಸಿಕೊಂಡಿದ್ದಾರೆ ಅಂತಲೇ ತುಂಬಾ ಜನ ಭಾವಿಸಿದ್ದರು. ಆದರೆ, ಇದೀಗ ಅವರು ಮತ್ತೆ 70 ಗಂಟೆಯ ವಿಚಾರದಲ್ಲಿ ಚರ್ಚೆಯಲ್ಲಿದ್ದಾರೆ. ಇದಕ್ಕೆ ಕಾರಣ ಸಂಸದ ತೇಜಸ್ವಿ ಸೂರ್ಯ ಅವರು ಮಾಡಿರುವ ಟ್ವೀಟ್.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು, 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿ ಭಾರೀ ಟ್ರೋಲ್ಗೆ ಒಳಗಾಗಿದ್ದರು. ಇನ್ನೊಂದಷ್ಟು ಉದ್ಯಮಿಗಳು 100 ಗಂಟೆ ಕೆಲಸ ಮಾಡಬೇಕು ಎಂದು ಹೇಳಿರುವುದೂ ಸಹ ಇದೆ. ಆದರೆ ಈ ವಿಚಾರಗಳೆಲ್ಲವೂ ಚರ್ಚೆಯಾಗಿ ಮುಗಿದು ಹೋಗಿದೆ ಅಂತಲೇ ಜನ ಭಾವಿಸಿದ್ದರು. ಅದರಲ್ಲೂ ಈಚೆಗೆ ಇನ್ಫೋಸಿಸ್ನಲ್ಲೇ ಉದ್ಯೋಗಿಗಳಿಗೆ ಪರ್ಸನಲ್ ಲೈಫ್ ಹಾಗೂ ವರ್ಕ್ ಲೈಫ್ ಬ್ಯಾಲೆನ್ಸ್ನ ಬಗ್ಗೆ ಸೆಷೆನ್ಗಳು ನಡೆಯುತ್ತಿದ್ದು. ಪರವಾಗಿಲ್ಲ ನಾರಾಯಣ ಮೂರ್ತಿ ಅವರು ಸಹ ಬದಲಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ತೇಜಸ್ವಿ ಸೂರ್ಯ ಅವರು ನಾರಾಯಣ ಮೂರ್ತಿ ಅವರೊಂದಿಗೆ ಚರ್ಚಿಸಿದ ವಿಷಯವನ್ನು ಹಂಚಿಕೊಂಡಿದ್ದು. ಮತ್ತೆ 70 ಗಂಟೆ ಕೆಲಸ ವಿಚಾರ ಮತ್ತೆ ಚರ್ಚೆ ಆಗುತ್ತಿದೆ.

ಈಚೆಗೆ ಮುಂಬೈನಿಂದ ಬೆಂಗಳೂರಿಗೆ ಹಿಂತಿರುಗುವಾಗ ಪ್ರಸಿದ್ಧ ನಾರಾಯಣ ಮೂರ್ತಿ ಅವರೊಂದಿಗೆ ಸ್ಫೂರ್ತಿದಾಯಕ ಸಂಭಾಷಣೆ ನಡೆಸಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಾರಾಯಣ ಮೂರ್ತಿ ಅವರು, ಭಾರತೀಯ ಐಟಿ ಸೇವಾ ವಲಯದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿ, ಅದನ್ನು ಜಾಗತಿಕ ಶಕ್ತಿ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಅವರು ಇನ್ಫೋಸಿಸ್ ಮೂಲಕ ಅಕ್ಷರಶಃ ಲಕ್ಷಾಂತರ ಮಧ್ಯಮ ವರ್ಗದ ಕುಟುಂಬಗಳಿಗೆ ಸಂಪತ್ತನ್ನು ಸೃಷ್ಟಿಸಿದ್ದಾರೆ.
AI ನಿಂದ ಉತ್ಪಾದನೆಯವರೆಗೆ, ನಮ್ಮ ನಗರಗಳ ಸ್ಥಿತಿಯಿಂದ ನಮ್ಮ ಯುವಕರನ್ನು ನೈತಿಕತೆ ಮತ್ತು ನಾಯಕತ್ವದವರೆಗೆ ಕೌಶಲ್ಯ ಹೆಚ್ಚಿಸುವ ವಿಷಯಗಳ ಬಗ್ಗೆ ಅವರಿಂದ ಕಲಿಯಲು 2 ಗಂಟೆಗಳ ಮಾಸ್ಟರ್ಕ್ಲಾಸ್ ಇದಾಗಿತ್ತು. ನಮ್ಮ ಸಂಭಾಷಣೆಯ ಕೊನೆಯಲ್ಲಿ ನಾನು ಅವರ ವಾರಕ್ಕೆ 70 ಗಂಟೆಗಳ ಗುರಿಯನ್ನು ತಲುಪಲು ಶ್ರಮಿಸುತ್ತೇನೆ ಎಂದು ಹಾಸ್ಯಮಯವಾಗಿ ಹೇಳಿದೆ ಎಂದು ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಇದಕ್ಕೆ ನಾರಾಯಣ ಮೂರ್ತಿ ಅವರು ನಕ್ಕರು ಮತ್ತು "ನನಗೆ ತಿಳಿದಿರುವ ಏಕೈಕ ವ್ಯಕ್ತಿ ಬಹುಶಃ ವಾರಕ್ಕೆ 100 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ" ಎಂದು ಹೇಳಿದರು. ಅವರು ಪ್ರಧಾನಿ ನರೇಂದ್ರ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ ಎನ್ನಲಾಗಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications