ಕರ್ನಾಟಕ : ಕರಡು ಮತದಾರರ ಪಟ್ಟಿ ಬಿಡುಗಡೆ, ಮುಖ್ಯಾಂಶಗಳು
ಬೆಂಗಳೂರು, ಡಿಸೆಂಬರ್ 05 : ಕಳೆದ ಬಾರಿಗಿಂತ 72 ಲಕ್ಷಕ್ಕೂ ಹೆಚ್ಚು ಮಂದಿ 2018ರ ಚುನಾವಣೆಯಲ್ಲಿ ಮತ ಚಲಾಯಿಸುವ ಅಧಿಕಾರ ಪಡೆದುಕೊಂಡಿದ್ದಾರೆ. ರಾಜ್ಯ ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು 72 ಲಕ್ಷಕ್ಕೂ ಅಧಿಕ ಹೊಸ ಮತದಾರರು ಸೇರ್ಪಡೆಗೊಂಡಿದ್ದಾರೆ.
2013 ರಲ್ಲಿ ರಾಜ್ಯದಲ್ಲಿ 4,18,38,541 ಇತ್ತು, ಅದು ಈಗ 4,90,06,901 ಕ್ಕೆ ಹೆಚ್ಚಿದೆ. ಅಲ್ಲದೆ, ಮತಗಟ್ಟೆಗಳ ಸಂಖ್ಯೆಯೂ 2,433 ಹೆಚ್ಚಳವಾಗಲಿದೆ, ಬೆಂಗಳೂರಿನಲ್ಲಿ 574 ಮತಗಟ್ಟೆಗಳು ಹೆಚ್ಚಲಿವೆ ಎಂದು ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲಿಚ್ಚಿಸುವವರು ಇದೇ ಡಿಸೆಂಬರ್ 29 ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು, ತೆಗೆದು ಹಾಕಲು ಮತ್ತು ತಿದ್ದುಪಡಿ ಮಾಡಬಹುದು. ಫೆಬ್ರುವರಿ 15 ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಮೇ ಮೊದಲ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ?
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಮತದಾರರನ್ನು 5,58,670 ಹೊಂದಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ಅತಿ ಕಡಿಮೆ 1,60,199 ಮತದಾರರನ್ನು ಹೊಂದಿದೆ. ಉಳಿದಂತೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ಮತದಾರರ ಸಂಖ್ಯೆ 2.18 ಲಕ್ಷ ಇದೆ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಅಂಕಿ ಅಂಶ ಹೇಳುತ್ತಿದೆ.
ಮತದಾರರ ಪಟ್ಟಿಗೆ ಹೆಸರು ಸೇರಿಸಲು ಚುನಾವಣೆವರೆಗೂ ಅವಕಾಶ ಇದೆ. ಇದರಿಂದ ಹೊಸ ಮತದಾರರ ಸಂಖ್ಯೆ 10 ರಿಂದ 15 ಲಕ್ಷ ಹೆಚ್ಚುವ ನಿರೀಕ್ಷೆ ಇದೆ ಎಂದು ಸಂಜೀವ್ ಕುಮಾರ್ ಅವರ ಅಭಿಪ್ರಾಯ.
ಕರಡು ಮತದಾರರ ಪಟ್ಟಿ ಈಗಾಗಲೇ ಚುನಾವಣಾ ವೆಬ್ಸೈಟ್ಗೆ ಅಪ್ಲೋಡ್ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಕರಡು ಪಟ್ಟಿಯನ್ನು ರಾಜಕೀಯ ಮುಖಂಡರುಗಳಿಗೆ ತಲುಪಿಸಿದ್ದಾರೆ ಎಂದು ಅವರು ಹೇಳಿದರು.
ಚುನಾವಣೆಗೆ ವಿದ್ಯುನ್ಮಾನ ಮತಯಂತ್ರವನ್ನೇ ಬಳಸುವುದಾಗಿ ಹೇಳಿದ ಅವರು, ಮೇ 28 ಹಾಲಿ ವಿಧಾನಸಭೆಯ ಅವಧಿ ಮುಗಿಯುತ್ತದೆ ಚುನಾವಣೆ ಎಂದು ನಡೆಸಬೇಕು ಎಂಬುದನ್ನು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications