ನಗರದಿಂದ ಗ್ರಾಮೀಣ ಪ್ರದೇಶಕ್ಕೆ ಮರಳುವವರಿಗೆ ಉದ್ಯೋಗ :ಯಡಿಯೂರಪ್ಪ
ಬೆಂಗಳೂರು, ಆಗಸ್ಟ್ 15: 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯವನ್ನುದ್ದೇಶಿಸಿ ಮಾತನಾಡಿದರು.
Recommended Video
-ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯವನ್ನು ಕಟ್ಟುವುದೇ ನಮ್ಮ ಗುರಿ, ಕೊವಿಡ್ 19 ಎಂಬ ಮಹಾ ಪಿಡುಗಿನ ವಿರುದ್ಧಧ ಹೋರಾಟದ ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿಯ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜಧರ್ಮ ಪಾಲನೆಗೆ ನಾವು ಮುಂದಾಗಿದ್ದೇವೆ
ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಐಡಿ: ಮೋದಿ ಘೋಷಣೆ
-ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಂತೆ ರಾಜ್ಯಾದ್ಯಂತ ಉದ್ಯೋಗವಾಕಾಶಗಳನ್ನು ಸೃಷ್ಟಿಸುವತ್ತ ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರದಿಂದ ಗ್ರಾಮೀಣ ಪ್ರದೇಶಕ್ಕೆ ಮರಳುವವರಿಗೆ ಅವರು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಸರ್ಕಾರ ಯೋಜನೆಗಳನ್ನು ರೂಪಿಸಿದೆ.
-ದಾಖಲೆಯ ಮಳೆ ಮತ್ತು ಪ್ರವಾಹದ ಜೊತೆಗೆ ಬರ ಹಾಗೂ ಶತಮಾನದಲ್ಲೇ ಭಯಾನಕವಾದ ಸಾಂಕ್ರಾಮಿಕ ಪಿಡುಗು ದೊಡ್ಡ ವಾಲುಗಳನ್ನು ತಂದೊಡ್ಡಿದೆ. ಆರ್ಥಿಕ ಹಿಂಜರಿಕೆ, ಉದ್ಯೋಗ ಕಡಿತ ಹಾಗೂ ಬೊಕ್ಕಸಕ್ಕೆ ರಾಜಸ್ವ ನಷ್ಟ, ಸ್ಥಬ್ಧವಾದ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
-ಬೆಂಗಳೂರು ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಆಸ್ಪತ್ರೆಗಳು, ಫಿವರ್ ಕ್ಲಿನಿಕ್ಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ.
-ಆಯುಷ್ಮಾನ್ ಭಾರತ್ ಯೋಜನೆಯಲ್ಲಿ 1.31 ಕೋಟಿಗಿಂತಲೂ ಹೆಚ್ಚು ಜನರಿಗೆ ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಗಿದೆ. ಹಾಗೂ 1694 ಕೋಟಿ ರೂ ವೆಚ್ಚದಲ್ಲಿ ಈವರೆಗೆ 8.5 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ.
-ನೇಗಿಲ ಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಆದ್ಯತೆ, ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ 6 ಸಾವಿರ ರೂ ನಗದು ನೆರವಿನ ಜೊತೆಗೆ ಸರ್ಕಾರ ಹೆಚ್ಚುವರಿಯಾಗಿ 4 ಸಾವಿರ ರೂ ಆರ್ಥಿಕ ನೆರವಿನ 2 ಸಾವಿರ ರೂಗಳ ಮೊದಲ ಕಂತನ್ನು 50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ ಜಮಾ ಮಾಡಲಾಗುತ್ತದೆ.