ವೇತನ ತಾರತಮ್ಯ ನಿವಾರಣೆಗೆ ಸಿದ್ಧ: ಪಿಯು ಉಪನ್ಯಾಸಕರಿಗೆ ಸಿಎಂ ಭರವಸೆ
ಬೆಂಗಳೂರು, ಮಾರ್ಚ್ 3: ಬಹು ದಿನದಿಂದ ಚರ್ಚೆಯಲ್ಲಿರುವ ಪದವಿಪೂರ್ವ ಉಪನ್ಯಾಸಕರ ವೇತನ ತಾರತಮ್ಯವನ್ನು ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಮತ್ತು ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಪದಾಧಿಕಾರಿಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು.

ಈ ಮೂಲಕ ಪ್ರತಿ ವರ್ಷ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಆರಂಭವಾಗುತ್ತಿದ್ದ ಮೌಲ್ಯಮಾಪನ ಬಹಿಷ್ಕಾರ ಪ್ರಹಸನ ಈ ಬಾರಿ ತಣ್ಣಗಾಗುವ ಸೂಚನೆ ಸಿಕ್ಕಿದೆ.
ಶಿಕ್ಷಕರು ಮತ್ತು ಉಪನ್ಯಾಸಕರಲ್ಲಿ ಅಸಮಾಧಾನ ಮೂಡಿಸಿರುವ ವೇತನ ತಾರತಮ್ಯವನ್ನು ನಿವಾರಿಸುವ ಉದ್ದೇಶದಿಂದ ಏಳನೇ ವೇತನ ಆಯೋಗ ರಚನೆಯಾಗಲಿದೆ. ಆಯೋಗದ ವರದಿಯ ಆಧಾರದ ಮೇಲೆ ವೇತನ ಪರಿಷ್ಕರಣೆ ಮಾಡಲಾಗುವುದು ಎಂದಿರುವ ಅವರು ಶಿಕ್ಷಕರು ಮತ್ತು ಉಪನ್ಯಾಸಕರು ಯಾವುದೇ ಕಾರಣಕ್ಕೂ ಮೌಲ್ಯಮಾಪನ ಬಹಿಷ್ಕರಿಸಬಾರದು ಎಂದು ಮನವಿ ಮಾಡಿದರು.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಮತ್ತು ಮೌಲ್ಯಮಾಪನ ಮುಗಿಯುತ್ತಿದ್ದಂತೆಯೇ ಶಿಕ್ಷಕರ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ನಿರ್ಧರಿಸಲಾಗುವುದು. ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಚಳವಳಿ, ಗಲಾಟೆ ಎಬ್ಬಿಸುವುದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ದಯವಿಟ್ಟು ಮುಷ್ಕರಕ್ಕೆ ಮುಂದಾಗಬೇಡಿ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಸಹ ಉಪಸ್ಥಿತರಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications