ಬೆಂಗಳೂರಿನಲ್ಲಿ ಕಸದ ಸಮಸ್ಯೆ ಪರಿಹಾರಕ್ಕೆ 8 ಮಹತ್ವದ ಸೂಚನೆಗಳು!
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ ಎನ್ನುವ ಗಂಭೀರವಾದ ಆರೋಪಗಳು ಕೇಳಿ ಬರುತ್ತಿವೆ. ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯಲಾಗುತ್ತಿದೆ. ಕಸ ಸಂಗ್ರಹ ಹಾಗೂ ವಿಲೇವಾರಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತವು ಸಾಕಷ್ಟು ಕ್ರಮಗಳನ್ನು ಅನುಸರಿಸುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಗ್ರೇಟರ್ ಬೆಂಗಳೂರು ಆಡಳಿತ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯಿಂದ ಕೆಲವೊಂದು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಸದ ಸಮಸ್ಯೆಯು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಇದೀಗ ಮತ್ತೆ ಕಸದ ಸಮಸ್ಯೆ ಬೆಂಗಳೂರಿನಲ್ಲಿ ಹೆಚ್ಚಳವಾಗಿದೆ ಎನ್ನುವ ದೂರು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಇದೀಗ ಈ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಘನತ್ಯಾಜ್ಯ ನಿರ್ವಹಣೆಯ ಪ್ರಾಥಮಿಕ ಸಂಗ್ರಹಣೆ ಮತ್ತು ಸಾಗಾಣೆಗೆ ಸಂಬಂಧಿಸಿದಂತೆ ಸೇವಾದಾರರ ಸಂಘದ ಜೊತೆ ಸಭೆ ಸಿ.ಇ.ಓ ಕರೀಗೌಡ ಅವರು ಸಭೆ ನಡೆಸಿ ಮಾತನಾಡಿದ್ದು, ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.
ನಗರದಲ್ಲಿ ಘನತ್ಯಾಜ್ಯ ನಿರ್ವಹಣೆಯ ಪ್ರಾಥಮಿಕ ಸಂಗ್ರಹಣೆ ಮತ್ತು ಸಾಗಾಣೆಗೆ ಸಂಬಂಧಿಸಿದಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ಇಂದು BSWML ಕಛೇರಿಯಲ್ಲಿ ಸೇವಾದಾರರ ಸಂಘದ ಜೊತೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬೆಂಳೂರಿನ ಕಸದ ಸಮಸ್ಯೆಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ಸೂಚನೆಗಳನ್ನು ಸಹ ಕೊಡಲಾಗಿದೆ.
ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು:
* ಮುಷ್ಕರವನ್ನು ಕೈಬಿಡುವಂತೆ ಸೇವಾದಾರರ ಸಂಘದವರಲ್ಲಿ ಕೋರಿದ್ದು, ಅದಕ್ಕೆ ಸ್ಪಂದಿಸುವುದಾಗಿ ತಿಳಿಸಿದ್ದಾರೆ.
* ಬಾಕಿ ಇರುವ ಬಿಲ್ಗಳನ್ನು ಆದ್ಯತೆಯ ಮೇರೆಗೆ ಪಾವತಿಸಲಾಗುವುದು.
* ತಿಂಗಳಿಗೊಮ್ಮೆ ಎಲ್ಲಾ ಸೇವಾ ಪೂರೈಕೆದಾರರೊಂದಿಗೆ ಸಭೆ ನಡೆಸಲಾಗುವುದು.
* ಇತರ ಬೇಡಿಕೆಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಲಾಗುವುದು ಮತ್ತು ಅದಕ್ಕೆ ಅನುಗುಣವಾಗಿ ಪರಿಹರಿಸಲಾಗುವುದು.
* ಸಂಗ್ರಹಣೆ ಮತ್ತು ಸಾಗಾಣೆಗೆ ಸಂಬಂಧಿಸಿದಂತೆ ತ್ವರಿತ ಪಾವತಿಯನ್ನು ಸರಳೀಕರಿಸಲಾಗುವುದು.
* ಇಎಸ್ಐ ಮತ್ತು ಫಿಎಫ್ ಬಾಕಿಯಿದ್ದಲ್ಲಿ, ಕೂಡಲೆ ಪಾವತಿಸಲು ಕ್ರಮವಹಿಸಲಾಗುವುದು
* ಬಿಲ್ ಗಳನ್ನು ತಡ ಮಾಡದೆ ಆಗಿಂದ್ದಾಗ್ಗೆ ನೀಡಲು ಸೇವಾದಾರರಿಗೆ ಸೂಚನೆ.
ಈ ವೇಳೆ BSWML ಮುಖ್ಯ ಕಾರ್ಯಾಚರಣೆ ಅಧಿಕಾರಿಯಾದ ರಮಾಮಣಿ, ಮುಖ್ಯ ಆರ್ಥಿಕಾಧಿಕಾರಿ ರಾಜು, ಸೇವಾದಾರರ ಸಂಘದ ಪದಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸೇರಿದಂತೆ ಹಲವರು ಹಾಜರಿದ್ದರು.
-
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ












Click it and Unblock the Notifications