Get Updates
Get notified of breaking news, exclusive insights, and must-see stories!

ಬೆಂಗಳೂರು ವಿಚಾರದಲ್ಲಿ ಕೇರಳ ಸರ್ಕಾರ ಟೀಕೆ, ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ: ಕನ್ನಡಿಗರು ಹೇಳಿದ್ದೇನು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿರುವ ಒತ್ತುವರಿ ತೆರವು ಕಾರ್ಯಾಚರಣೆಯು ಇದೀಗ ದೇಶದಾದ್ಯಂತ ಸುದ್ದಿಯಾಗಿದೆ. ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಈಚೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆಯನ್ನು ನಡೆಸಿತ್ತು. ಇದಕ್ಕೆ ಕಾಂಗ್ರೆಸ್​ ಸರ್ಕಾರವು ಉತ್ತರ ಪ್ರದೇಶದ ಬುಲ್ಡೋಜರ್ ನೀತಿಯನ್ನು ಅನುಸರಿಸುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಟ್ವೀಟ್​ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಕರ್ನಾಟಕ ಬಿಜೆಪಿ ಸಹ ವಿರೋಧ ವ್ಯಕ್ತಪಡಿಸಿದೆ. ಇಷ್ಟಕ್ಕೂ ಏನಿದು ಬೆಳವಣಿಗೆ ಎನ್ನುವ ವಿವರ ಇಲ್ಲಿದೆ.

80 Cr Kogilu Bengaluru Encroachment Cleared Kerala Criticised Congress Step-In Triggers Kannadiga Outrage

ಕೆ.ಸಿ ವೇಣುಗೋಪಾಲ್ ಟ್ವೀಟ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬೆಂಗಳೂರಿನಲ್ಲಿ ಮನೆಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ಕೆಲವು ವಿಚಾರದಲ್ಲಿ ಸಹಾನುಭೂತಿಯಿಂದ ನಡೆದುಕೊಳ್ಳಬೇಕಿತ್ತು ಎಂದಿದ್ದಾರೆ.

ಅಲ್ಲದೇ ತಾವೇ ಸ್ವತಃ ಸಂತ್ರಸ್ತರ ಜೊತೆ ವೈಯುಕ್ತಿಕವಾಗಿ ಮಾತನಾಡುತ್ತೇನೆ. ಸಂತ್ರಸ್ಥರಿಗೆ ಪುನರ್ ವಸತಿ ಕಲ್ಪಿಸಿಕೊಡಲಿದ್ದೇವೆ ಎನ್ನುವ ಭರವಸೆಯನ್ನೂ ಕೆಸಿ ವೇಣುಗೋಪಾಲ್ ಕೊಟ್ಟಿದ್ದಾರೆ. ಇದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಕನ್ನಡಿಗರು ಹಾಗೂ ವಿರೋಧ ಪಕ್ಷಗಳು ಕರ್ನಾಟಕದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದು, ಅಕ್ರಮವಾಗಿ ನೆಲಸಿದವರಿಗೆ ಪುನರ್ ವಸತಿ ಕಲ್ಪಿಸುವ ಅವಶ್ಯಕತೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಕೆಲವು ವಿಚಾರಗಳನ್ನ ಗಮನದಲ್ಲಿಟ್ಟುಕೊಂಡು, ಅಂತಹ ಕ್ರಮಗಳನ್ನು ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಎಐಸಿಸಿ ಕಳವಳ ವ್ಯಕ್ತಪಡಿಸುತ್ತೆ. ಕುಂದು - ಕೊರತೆಗಳನ್ನು ಪರಿಹರಿಸಲು ಸೂಕ್ತವಾದ ಕಾರ್ಯವಿಧಾನ ಜಾರಿಗೆ ತರಲಾಗುವುದು ಹಾಗೂ ಸಂತ್ರಸ್ತರಿಗೆ ಪುನರ್​ ವಸತಿ ಮತ್ತು ಪರಿಹಾರ ಕೊಡಲಾಗುವುದು ಎಂದೂ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ಕನ್ನಡಿಗರ ವಿರೋಧ

ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿರುವುದು ಕನ್ನಡಿಗರ ವಿರೋಧಕ್ಕೆ ಕಾರಣವಾಗಿದೆ. ನೀವು ತುಂಬಾ ಕರುಣಾಮಯಿ, ಆ ಅಕ್ರಮ ವಲಸಿಗರನ್ನು ವಾಪಸ್ ಕರೆದುಕೊಂಡು ಹೋಗಿ ಕ್ಷೇತ್ರದಲ್ಲಿ ಆಶ್ರಯ ಒದಗಿಸಿ. ಕರ್ನಾಟಕದಲ್ಲಿ ಏನು ಮಾಡಬೇಕೆಂದು ಸೂಚನೆಗಳನ್ನು ನೀಡಬೇಡಿ ನೀವು ಕರ್ನಾಟಕದ ಚುನಾಯಿತ ಪ್ರತಿನಿಧಿಯಲ್ಲವೇ.

ಕೇರಳದಿಂದ ಕರ್ನಾಟಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಜನರ ವಲಸೆಯನ್ನು ನಿಲ್ಲಿಸಿ ಎಂದು ವಿನಯ್ ಗೌಡ ಎನ್ನುವವರು ಟ್ವೀಟ್ (Kaasiddore_Bossu) ಮಾಡಿದ್ದಾರೆ. ರೋಹಿತ್ ಸಿಂಹ ಎನ್ನುವವರು, ಕರ್ನಾಟಕದ ಆಂತರಿಕ ವಿಷಯಗಳಲ್ಲಿ ನೀವು ಯಾಕೆ ಮೂಗು ತೂರಿಸುತ್ತಿದ್ದೀರಿ ಸರ್. ನಾವು ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದೇವೆ, ಅದು ಕಾರ್ಯನಿರ್ವಹಿಸಲು ಬಿಡಿ ಎಂದು ಹೇಳಿದ್ದಾರೆ. ಕರ್ನಾಟಕ ಸರ್ಕಾರ ದೆಹಲಿಯಿಂದ ಆದೇಶ ಪಡೆಯುತ್ತಿದೆ. ಕನ್ನಡಿಗ ಪ್ರೈಡ್ ವಾರಿಯರ್ಸ್‌ಗೆ ಈಗ ಏನಾಯಿತು ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಜಿಬಿಎ ಆಯುಕ್ತ ಟ್ವೀಟ್

ಕೋಗಿಲು ಗ್ರಾಮದ ಸರ್ಕಾರಿ ಗೋಮಾಳ ಜಮೀನಿನ ಸರ್ವೆ ಸಂಖ್ಯೆ 99 ರಲ್ಲಿ 15 ಎಕರೆ ವಿಸ್ತೀರ್ಣವನ್ನು ಬಿಬಿಎಂಪಿಗೆ ಮಂಜೂರು ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ ಟ್ವೀಟ್‌ ಮಾಡಿದ್ದಾರೆ. ಇದು ಘನತ್ಯಾಜ್ಯ ವಿಲೇವಾರಿಗೆ ಬಳಸಲಾಗುವ ಕ್ವಾರಿ ಭೂಮಿಯಾಗಿದ್ದು, ಮಾನವ ವಾಸಕ್ಕೆ ಅತ್ಯಂತ ಅಪಾಯಕಾರಿಯಾಗಿದೆ. ಇತ್ತೀಚೆಗೆ 20-12-2025 ರಂದು ಈ ಭಾಗದ ಅನಧಿಕೃತ ಎಸಿ-ಶೀಟ್ ಮನೆಗಳನ್ನು (ಶೆಡ್‌ಗಳನ್ನು) ತೆರವು ಮಾಡಲಾಗಿದೆ.

ಪುನರ್ವಸತಿ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗಿದೆ ಮತ್ತು ಅರ್ಹ ನಿರಾಶ್ರಿತ ವ್ಯಕ್ತಿಗಳನ್ನು ಅನ್ವಯವಾಗುವ ಸರ್ಕಾರಿ ಯೋಜನೆಗಳ ಅಡಿಯಲ್ಲಿ ವಸತಿಗಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ. ಅಕ್ರಮ ವಲಸಿಗರಿಗೆ ಹಾಗೂ ಸರ್ಕಾರದಿಂದ ಪರಿಹಾರ ನೀಡುವ ಅವಶ್ಯಕತೆ ಏನಿದೆ ಎಂದು ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+