ಚುನಾವಣೆ ಹಿನ್ನೆಲೆ ಹೆಚ್ಚಾದ ನಗದು ಹರಿವು: 81 ಆರ್ಥಿಕ ಸೂಕ್ಷ್ಮ ಪ್ರದೇಶಗಳು
ಬೆಂಗಳೂರು, ಏಪ್ರಿಲ್. 28 : ಮುಂದಿನ ತಿಂಗಳು 10 ರಂದು ರಾಜ್ಯದಲ್ಲಿವಿಧಾನಸಭಾ ಚುಣಾವಣೆ ನಡೆಯಲಿದ್ದು, ಚುನಾವಣಾ ಆಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಕರುನಾಡಿನೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 81 ಆರ್ಥಿಕ ಸೂಕ್ಷ್ಮ ಪ್ರದೇಶಗಳನ್ನು ಆಯೋಗದ ಅಧಿಕಾರಿಗಳು ಗುರುತಿಸಿದ್ದಾರೆ.
ರಾಜ್ಯದಲ್ಲಿ 81 ಆರ್ಥಿಕ ಸೂಕ್ಷ್ಮ ವಲಯಗಳಿದ್ದು, ಇದರಲ್ಲಿ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ 52 ಆರ್ಥಿಕ ಸೂಕ್ಷ್ಮ ಸ್ಥಳಗಳನ್ನು ಚುನಾವಣಾ ಆಯೋಗದ ಅಧಿಕಾರಿಗಳು ಗುರುತಿಸಿದ್ದಾರೆ. ಹೆಚ್ಚಿನ ಸ್ಥಳಗಳನ್ನು ಅಧಿಕಾರಿಗಳು ಇನ್ನೂ ಪಟ್ಟಿ ಮಾಡುತ್ತಲೇ ಇದ್ದಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ನಗದು, ಒಡವೆ ಮತ್ತು ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಈ ಸ್ಥಳಗಳು ಚಿಕ್ಕ ಘಟಕಗಳಾಘಿದ್ದು, ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಪ್ರಸ್ತುತ ಈ ಸ್ಥಳಗಳಿಂದ ನಗದು ವಶಪಡಿಸಿಕೊಳ್ಳುವಿಕೆ ಹೆಚ್ಚುತ್ತಿದೆ. ಗುರುತಿಸಲಾದ 52 ಸ್ಥಳಗಳು ಆರ್ಥಿಕ ಸ್ತರಗಳಿಗೆ ಸೀಮಿತವಾಗಿರದೆ ಜನಸಾಂದ್ರತೆಯನ್ನೂ ಹೊಂದಿದೆ. ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಆರ್ಥಿಕವಾಗಿ ಸೂಕ್ಷ್ಮವೆಂದು ಗುರುತಿಸಲಾಗಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ಮತ್ತು ನಿಯೋಜಿತ ಏಜೆನ್ಸಿಗಳು ಗಸ್ತು ಮತ್ತು ಜಾಗರೂಕತೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.
*ಬೆಂಗಳೂರಿಗೆ ವಿಶೇಷ ಮೊಬೈಲ್ ಸ್ಕ್ವಾಡ್*
ಮೊದಲ ಬಾರಿಗೆ, ಬೆಂಗಳೂರಿಗೆ ವಿಶೇಷ ಮೊಬೈಲ್ ಸ್ಕ್ವಾಡ್ಗಳನ್ನು ಯೋಜಿಸಲಾಗಿದೆ. ಇವುಗಳು 200 ಫ್ಲೈಯಿಂಗ್ ಸ್ಕ್ವಾಡ್ಗಳು ಮತ್ತು 130 ಚೆಕ್ಪೋಸ್ಟ್ ತಂಡಗಳನ್ನು ಹೊರತುಪಡಿಸಿ, ಜಿಎಸ್ಟಿ, ಕೇಂದ್ರೀಯ ಅಬಕಾರಿ, ಪೊಲೀಸ್, ಸಾರಿಗೆ, ಆದಾಯ ತೆರಿಗೆ ಮತ್ತು ಇತರ ವಿಶೇಷ ತಂಡಗಳನ್ನು ಒಳಗೊಂಡಿರುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಮುಖ್ಯ ಚುನಾವಣಾ ಆಯುಕ್ತರು ಕರ್ನಾಟಕದಲ್ಲಿ ಸಾಕಷ್ಟು ಹಣಕಾಸು ತೊಡಗಿಸಿಕೊಂಡಿರುವುದನ್ನು ಗಮನಿಸಿರುವುದರಿಂದ, ಜಾಗೃತರಾಗಿರಲು ಕ್ಷೇತ್ರಗಳು ಮತ್ತು ಸ್ಥಳವಾರು ನಮ್ಮ ಕಾರ್ಯತಂತ್ರಗಳನ್ನು ಬದಲಾಯಿಸುತ್ತಿದ್ದೇವೆ. ಬೆಂಗಳೂರು ಹೊರವಲಯದಲ್ಲಿರುವ ಕೇವಲ ಏಳು ಕ್ಷೇತ್ರಗಳಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ ಶೇ.400ರಷ್ಟು ದಾಳಿ ನಡೆದಿದೆ" ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರ್ಥಿಕವಾಗಿ ಸೂಕ್ಷ್ಮ ಸ್ಥಳಗಳ ಪಟ್ಟಿಯು ಏರಿಳಿತಗೊಳ್ಳುತ್ತಲೇ ಇರುತ್ತದೆ. ಪ್ರತಿದಿನವೂ ಇದನ್ನು ಮಾನಿಟೈಜ್ ಮಾಡಲಾಗುತ್ತದೆ. ನಮ್ಮ ತಂಡಗಳು ನಿರಂತರವಾಗಿ ಸಂಚರಿಸುತ್ತಿರುತ್ತವೆ. ಜನರೊಂದಿಗೆ ಮಾತುಕತೆ ನಡೆಸುತ್ತಿರುತ್ತವೆ. ರಾತ್ರಿ ವೇಳೆ ಮಾತ್ರವಲ್ಲದೇ ಹಗಲಿನಲ್ಲೂ ವಾಹನಗಳ ತಪಾಸಣೆಯೂ ತೀವ್ರಗೊಂಡಿದೆ ಎಂದು ಚುನಾವಣಾ ಆಯೋಗದ ಅಧಿಕಾರಿ ತಿಳಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications