ಚುನಾವಣೆ ಹಿನ್ನೆಲೆ ಹೆಚ್ಚಾದ ನಗದು ಹರಿವು: 81 ಆರ್ಥಿಕ ಸೂಕ್ಷ್ಮ ಪ್ರದೇಶಗಳು
ಬೆಂಗಳೂರು, ಏಪ್ರಿಲ್. 28 : ಮುಂದಿನ ತಿಂಗಳು 10 ರಂದು ರಾಜ್ಯದಲ್ಲಿವಿಧಾನಸಭಾ ಚುಣಾವಣೆ ನಡೆಯಲಿದ್ದು, ಚುನಾವಣಾ ಆಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಕರುನಾಡಿನೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 81 ಆರ್ಥಿಕ ಸೂಕ್ಷ್ಮ ಪ್ರದೇಶಗಳನ್ನು ಆಯೋಗದ ಅಧಿಕಾರಿಗಳು ಗುರುತಿಸಿದ್ದಾರೆ.
ರಾಜ್ಯದಲ್ಲಿ 81 ಆರ್ಥಿಕ ಸೂಕ್ಷ್ಮ ವಲಯಗಳಿದ್ದು, ಇದರಲ್ಲಿ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ 52 ಆರ್ಥಿಕ ಸೂಕ್ಷ್ಮ ಸ್ಥಳಗಳನ್ನು ಚುನಾವಣಾ ಆಯೋಗದ ಅಧಿಕಾರಿಗಳು ಗುರುತಿಸಿದ್ದಾರೆ. ಹೆಚ್ಚಿನ ಸ್ಥಳಗಳನ್ನು ಅಧಿಕಾರಿಗಳು ಇನ್ನೂ ಪಟ್ಟಿ ಮಾಡುತ್ತಲೇ ಇದ್ದಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ನಗದು, ಒಡವೆ ಮತ್ತು ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಈ ಸ್ಥಳಗಳು ಚಿಕ್ಕ ಘಟಕಗಳಾಘಿದ್ದು, ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಪ್ರಸ್ತುತ ಈ ಸ್ಥಳಗಳಿಂದ ನಗದು ವಶಪಡಿಸಿಕೊಳ್ಳುವಿಕೆ ಹೆಚ್ಚುತ್ತಿದೆ. ಗುರುತಿಸಲಾದ 52 ಸ್ಥಳಗಳು ಆರ್ಥಿಕ ಸ್ತರಗಳಿಗೆ ಸೀಮಿತವಾಗಿರದೆ ಜನಸಾಂದ್ರತೆಯನ್ನೂ ಹೊಂದಿದೆ. ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಆರ್ಥಿಕವಾಗಿ ಸೂಕ್ಷ್ಮವೆಂದು ಗುರುತಿಸಲಾಗಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ಮತ್ತು ನಿಯೋಜಿತ ಏಜೆನ್ಸಿಗಳು ಗಸ್ತು ಮತ್ತು ಜಾಗರೂಕತೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.
*ಬೆಂಗಳೂರಿಗೆ ವಿಶೇಷ ಮೊಬೈಲ್ ಸ್ಕ್ವಾಡ್*
ಮೊದಲ ಬಾರಿಗೆ, ಬೆಂಗಳೂರಿಗೆ ವಿಶೇಷ ಮೊಬೈಲ್ ಸ್ಕ್ವಾಡ್ಗಳನ್ನು ಯೋಜಿಸಲಾಗಿದೆ. ಇವುಗಳು 200 ಫ್ಲೈಯಿಂಗ್ ಸ್ಕ್ವಾಡ್ಗಳು ಮತ್ತು 130 ಚೆಕ್ಪೋಸ್ಟ್ ತಂಡಗಳನ್ನು ಹೊರತುಪಡಿಸಿ, ಜಿಎಸ್ಟಿ, ಕೇಂದ್ರೀಯ ಅಬಕಾರಿ, ಪೊಲೀಸ್, ಸಾರಿಗೆ, ಆದಾಯ ತೆರಿಗೆ ಮತ್ತು ಇತರ ವಿಶೇಷ ತಂಡಗಳನ್ನು ಒಳಗೊಂಡಿರುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಮುಖ್ಯ ಚುನಾವಣಾ ಆಯುಕ್ತರು ಕರ್ನಾಟಕದಲ್ಲಿ ಸಾಕಷ್ಟು ಹಣಕಾಸು ತೊಡಗಿಸಿಕೊಂಡಿರುವುದನ್ನು ಗಮನಿಸಿರುವುದರಿಂದ, ಜಾಗೃತರಾಗಿರಲು ಕ್ಷೇತ್ರಗಳು ಮತ್ತು ಸ್ಥಳವಾರು ನಮ್ಮ ಕಾರ್ಯತಂತ್ರಗಳನ್ನು ಬದಲಾಯಿಸುತ್ತಿದ್ದೇವೆ. ಬೆಂಗಳೂರು ಹೊರವಲಯದಲ್ಲಿರುವ ಕೇವಲ ಏಳು ಕ್ಷೇತ್ರಗಳಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ ಶೇ.400ರಷ್ಟು ದಾಳಿ ನಡೆದಿದೆ" ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರ್ಥಿಕವಾಗಿ ಸೂಕ್ಷ್ಮ ಸ್ಥಳಗಳ ಪಟ್ಟಿಯು ಏರಿಳಿತಗೊಳ್ಳುತ್ತಲೇ ಇರುತ್ತದೆ. ಪ್ರತಿದಿನವೂ ಇದನ್ನು ಮಾನಿಟೈಜ್ ಮಾಡಲಾಗುತ್ತದೆ. ನಮ್ಮ ತಂಡಗಳು ನಿರಂತರವಾಗಿ ಸಂಚರಿಸುತ್ತಿರುತ್ತವೆ. ಜನರೊಂದಿಗೆ ಮಾತುಕತೆ ನಡೆಸುತ್ತಿರುತ್ತವೆ. ರಾತ್ರಿ ವೇಳೆ ಮಾತ್ರವಲ್ಲದೇ ಹಗಲಿನಲ್ಲೂ ವಾಹನಗಳ ತಪಾಸಣೆಯೂ ತೀವ್ರಗೊಂಡಿದೆ ಎಂದು ಚುನಾವಣಾ ಆಯೋಗದ ಅಧಿಕಾರಿ ತಿಳಿಸಿದ್ದಾರೆ.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications