ವರದಕ್ಷಿಣೆ ಕಿರುಕುಳ: ಬೆಂಗಳೂರಿನ ಬಗ್ಗೆ ಆಘಾತಕಾರಿ ಸಂಗತಿ ಬೆಳಕಿಗೆ
ಬೆಂಗಳೂರು, ಜನವರಿ 11: ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ) ದೇಶದಲ್ಲಿ ನಡೆದ ಅಪರಾಧಗಳ ಬಗ್ಗೆ ಅಂಕಿಅಂಶಗಳನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಬಗ್ಗೆ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗದ 2018 ರ ಅಂಕಿಅಂಶದ ಪ್ರಕಾರ ಬೆಂಗಳೂರು 2018 ರಲ್ಲಿ ದೇಶದಲ್ಲೇ ಅತ್ಯಧಿಕ ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ದಾಖಲಿಸಿಕೊಂಡ ನಗರವಾಗಿದೆ ಎಂದು ತಿಳಿದು ಬಂದಿದೆ. ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ 20 ನಗರಗಳ ಪೈಕಿ ಅಂಕಿ ಅಂಶಗಳನ್ನು ತುಲನೆ ಮಾಡಿ ಎನ್ಸಿಆಆರ್ ವರದಿ ನೀಡಿದ್ದು, ಶೇ 81 ರಷ್ಟು ವರದಕ್ಷಿಣೆ ಕಿರುಕುಳ ಪ್ರಕರಣಗಳು ಆ ವರ್ಷದಲ್ಲಿ ಬೆಂಗಳೂರಿನಲ್ಲಿಯೇ ನಡೆದಿವೆ ಎಂದು ವರದಿ ಹೇಳಿದೆ.
2018 ರಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ 20 ನಗರಗಳ ಪೇಕಿ 851 ಪ್ರಕರಣಗಳು ಒಟ್ಟಾರೆ ದಾಖಲಾಗಿದ್ದರೆ, ಅದರಲ್ಲಿ 692 ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ದೆಹಲಿ, ಮುಂಬೈ, ಹೈದರಾಬಾದ ಹಾಗೂ ಚೆನ್ನೈನಲ್ಲಿ 159 ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳು ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಅಂಕಿಅಂಶಗಳಾಗಿವೆ.

ಬೆಂಗಳೂರು ಹೊರತುಪಡಿಸಿ ದೇಶದ ಇತರ 19 ನಗರಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದ ವರದಕ್ಷಿಣೆ ಕಿರುಕುಳಗಳು ದಾಖಲಾಗಿದ್ದರೆ, ಬೆಂಗಳೂರಿನಲ್ಲೇ ಅತ್ಯಧಿಕ ಪ್ರಕರಣಗಳು ದಾಖಲಾಗಿ ಅಚ್ಚರಿ ಮೂಡಿಸಿದೆ. ಮಹಿಳಾ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳದ ಬಗ್ಗೆ ಪೊಲೀಸರು ಹಾಗೂ ಮಹಿಳಾ ಸಂಘಟನೆಗಳು ವ್ಯಾಪಕ ಜಾಗೃತಿ ಮೂಡಿಸಿರುವುದರಿಂದ ಹೆಚ್ಚಿನ ಪ್ರಕರಣಗಳು ದಾಖಲಾಗಿರಬಹುದು ಎಂದು ವರದಿ ಹೇಳಿದೆ.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications