ಡಿ.ಕೆ.ಶಿವಕುಮಾರ್ ಬಂಧನಾನಂತರ ಪ್ರತಿಭಟನೆ: ರಾಜ್ಯಕ್ಕಾದ ನಷ್ಟವೆಷ್ಟು?
Recommended Video
ಬೆಂಗಳೂರು, ಜನವರಿ 28: ಡಿ.ಕೆ.ಶಿವಕುಮಾರ್ ಬಂಧನದ ನಂತರ ಬೆಂಬಲಿಗರು ರಾಜ್ಯದಲ್ಲಿ ಮಾಡಿದ ಪ್ರತಿಭಟನೆಯಿಂದ ರಾಜ್ಯ ಸರ್ಕಾರ ಬೊಕ್ಕಸಕ್ಕೆ 82 ಕೋಟಿ ನಷ್ಟವಾಗಿದೆ.
ಬಂಧನದ ವಿರುದ್ಧ ನಡೆದ ಪ್ರತಿಭಟನೆ ಕುರಿತಾಗಿ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಮತ್ತೆ ದೆಹಲಿ ಪೊಲೀಸ್ ಠಾಣೆಗೆ ಹೋದ ಡಿ.ಕೆ.ಶಿವಕುಮಾರ್!
ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆದು, ವಿಚಾರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಾಹಿತಿ ನೀಡಿದ್ದು, ಡಿ.ಕೆ.ಶಿವಕುಮಾರ್ ಬಂಧನದ ನಂತರ ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆಯಿಂದ ರಾಜ್ಯ ಸರ್ಕಾರಕ್ಕೆ 82 ಕೋಟಿ ನಷ್ಟವಾಗಿದೆ ಎಂದು ಮಾಹಿತಿ ನೀಡಿದೆ.
ಡಿ.ಕೆ.ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ಇಂದ ಬಂಧಿತರಾಗಿದ್ದರು. ಸೆಪ್ಟೆಂಬರ್ ಮೂರರಂದು ಡಿ.ಕೆ.ಶಿವಕುಮಾರ್ ಬಂಧನವಾದ ನಂತರ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿದ್ದವು. ರಾಮನಗರ, ಕನಕಪುರದಲ್ಲಿ ಬಸ್ಸುಗಳಿಗೆ ಕಲ್ಲು ತೂರಲಾಗಿತ್ತು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆ ವಿಳಂಬ: ದೆಹಲಿಯಲ್ಲೇ ಬೀಡುಬಿಟ್ಟ ಡಿಕೆಶಿ
ಡಿ.ಕೆ.ಶಿವಕುಮಾರ್ ಬಂಧನದ ನಂತರ ನಡೆದ ಪ್ರತಿಭಟನೆಯಿಂದ ರಾಜ್ಯಕ್ಕೆ ನಷ್ಟಾಗಿದ್ದು, ಪ್ರತಿಭಟನೆ ಮಾಡಿದವ್ರನ್ನು ಹಾಗೂ ಪ್ರೇರೇಪಿಸಿದವರನ್ನು ಶಿಕ್ಷಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೂಡಲಾಗಿದ್ದು, ಅರ್ಜಿಯ ಮುಂದಿನ ವಿಚಾರಣೆ ಫೆಬ್ರವರಿ 3 ರಂದು ನಡೆಯಲಿದೆ.