Get Updates
Get notified of breaking news, exclusive insights, and must-see stories!

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ, ಮಹಿಳಾ ಸಾಹಿತಿಗಳ ಕಡೆಗಣನೆ: ಪರ್ಯಾಯ ಸಮ್ಮೇಳನಕ್ಕೆ ಸಾಹಿತಿಗಳ ಚಿಂತನೆ

ಬೆಂಗಳೂರು, ಡಿ. 26: ಮುಂದಿನ ವರ್ಷದ ಜನವರಿ 6 ರಿಂದ 8 ರವರೆಗೆ ನಡೆಯಲಿರುವ 86 ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ಮತ್ತು ಪ್ರಮುಖ ಅಧಿವೇಶನಗಳಲ್ಲಿ ಮುಸ್ಲಿಂ ಲೇಖಕರು ಮತ್ತು ಮಹಿಳಾ ಲೇಖಕರನ್ನು ನಿರ್ಲಕ್ಷಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಪ್ರತಿಭಟನೆಯ ಸಂಕೇತವಾಗಿ ಜನವರಿ 8 ರಂದು ಬೆಂಗಳೂರಿನಲ್ಲಿ ಪರ್ಯಾಯ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಪ್ರಗತಿಪರ ಸಾಹಿತಿಗಳು ನಿರ್ಧರಿಸಿದ್ದಾರೆ.

ಹಿರಿಯ ವಿದ್ವಾಂಸರಾದ ಪ್ರೊ.ಪುರುಷೋತ್ತಮ ಬಿಳಿಮಲೆ, "ಮುಸ್ಲಿಂ ಲೇಖಕರನ್ನು ಹೊರಗಿಡುವುದು ಮತ್ತು ಲಿಂಗ ತಾರತಮ್ಯ ಮಾಡುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಆದ್ದರಿಂದ ಜನವರಿ 8 ರಂದು ಬೆಂಗಳೂರಿನಲ್ಲಿ ಪರ್ಯಾಯ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಪ್ರಗತಿಪರ ಸಾಹಿತಿಗಳು ನಿರ್ಧರಿಸಿದ್ದಾರೆ. ನಾವು ಇದನ್ನು ಕ್ರೌಡ್ ಫಂಡಿಂಗ್ ಮೂಲಕ ಆಯೋಜಿಸುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.

ಈ ಬಾರಿ ಹಾವೇರಿಯಲ್ಲಿ 86ನೇ 'ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ' ನಡೆಯಲಿದೆ. ಈಗಾಗಲೇ ಸಮ್ಮೇಳನಕ್ಕೆ ಸಂಪೂರ್ಣ ಚಾಲನೆ ದೊರೆತಿದ್ದು, ಸಿದ್ಧತೆಗಳು ಆರಂಭವಾಗಿವೆ. ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸಲಿದ್ದು, ಹಲವು ಚುನಾಯಿತ ಪ್ರತಿನಿಧಿಗಳು ಹಾಗೂ ಸಾವಿರಾರು ಸಾಹಿತಿಗಳು ಭಾಗವಹಿಸಲಿದ್ದಾರೆ.

86th Kannada Sahitya Sammelana: Progressive writers plan alternative Sammelana on Jan 8

ಆದರೆ, ವಿವಿಧ ಅಧಿವೇಶನಗಳಲ್ಲಿ 40 ಭಾಷಣಕಾರರ ಪೈಕಿ ಮುಖ್ಯ ವೇದಿಕೆಗಳಲ್ಲಿನ ಪ್ರಧಾನ ಅಧಿವೇಶನಗಳಲ್ಲಿ ಅಲ್ಪಸಂಖ್ಯಾತ ಲೇಖಕರು ಅಥವಾ ವಿಷಯ ತಜ್ಞರಿಗೆ ಯಾವುದೇ ಪ್ರಾತಿನಿಧ್ಯವಿಲ್ಲ ಎಂಬ ಆರೋಪ ಹೊರ ಬಂದಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 83 ಸಾಧಕರನ್ನು ಕನ್ನಡ ಸಾಹಿತ್ಯ ಪರಿಷತ್ತು ಸನ್ಮಾನಿಸುತ್ತಿದೆ. ಆದರೆ, ಅವರಲ್ಲಿ ಒಬ್ಬರೇ ಒಬ್ಬರು ಮುಸ್ಲಿಂ ಸಮುದಾಯದವರಿಲ್ಲ ಎಂಬ ಆರೋಪವಿದೆ.

ಬಿ.ಎಂ. ಹಿರಿಯ ಪತ್ರಕರ್ತ ಹನೀಫ್ ಮಾತನಾಡಿ, 'ಈ ವರ್ಷ ದಾದಾಪೀರ್ ಜೈಮಾನ್ ಅವರಂತಹ ಮುಸ್ಲಿಂ ಲೇಖಕರಿಗೆ ಕೇಂದ್ರ ಪ್ರಶಸ್ತಿಗಳು ಲಭಿಸಿವೆ. ಹಿರಿಯ ಸಾಹಿತಿಗಳಾದ ಬೊಳುವಾರು ಮುಹಮ್ಮದ್ ಕುಂಞಿ, ಸಾರಾ ಅಬೂಬಕರ್, ಹಸನ್ ನಯೀಮ್ ಸುರಕೋಡ, ರಹಮತ್ ತರೀಕರೆ ಮುಂತಾದವರನ್ನು ಕಡೆಗಣಿಸಲಾಗಿದೆ' ಎಂದಿದ್ದಾರೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಗಳಲ್ಲಿ ಮಹಿಳಾ ಲೇಖಕಿಯರನ್ನು ಕಡೆಗಣಿಸಲಾಗಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.

86th Kannada Sahitya Sammelana: Progressive writers plan alternative Sammelana on Jan 8

ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ, "ಪರ್ಯಾಯ ಸಮ್ಮೇಳನ ಇವತ್ತಿನ ತುರ್ತು ಅಗತ್ಯ. ದಾವಣಗೆರೆ ಅಥವಾ ಬೆಂಗಳೂರು ಅನುಕೂಲ. ಕೋಲಾರ, ಮೈಸೂರು, ಶಿವಮೊಗ್ಗವೂ ಆದೀತು. ದೇವನೂರು ಬರಬೇಕು. ಬರಗೂರು ಇರಬೇಕುರಾಜೇಂದ್ರ ಚೆನ್ನಿ, ಅರುಣ್‌ ಜೋಳದಕೂಡ್ಲಿಗಿ, ಬಿ ಎಂ ಹನೀಫ್‌ ಮೊದಲಾದವರು ಬರುತ್ತಾರೆ. ಅವರವರದೇ ಖರ್ಚು. ಸಭಾಂಗಣ, ಮಧ್ಯಾಹ್ಯ ಊಟ, ಧ್ವನಿವರ್ಧಕ, ಚಹಾ ಇತ್ಯಾದಿಗಳಿಗೆ ಕ್ರೌಡ್ ಫಂಡಿಂಗ್ ಮಾಡೋಣ. ನಾನು ನನ್ನ ಖರ್ಚಲ್ಲಿ ಬರುತ್ತೇನೆ. ಸತ್ಯನಾರಾಯಣ ಪೂಜೆಗೆ ಸುದ್ದಿ ಕೇಳಿಯೇ ಹೋಗಬೇಕಂತೆ. ಇದೂ ಹಾಗೆಯೇ ಆಗಲಿ. ಸಮ್ಮೇಳನದಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ. ಯಾವುದೂ ಯ:ಕಶ್ಚಿತವೂ ಅಲ್ಲ. ಯಾರಾದರೂ ಸಮರ್ಥ ನಾಯಕತ್ವ ಕೊಡಿ!" ಎಂದಿದ್ದಾರೆ.

*ಕೆಎಸ್‌ಪಿ ಯಾವುದೇ ಸಿದ್ಧಾಂತಕ್ಕೆ ಸೇರಿಲ್ಲ: ಮಹೇಶ್ ಜೋಶಿ*

ಆರೋಪಗಳಿಗೆ ಪ್ರತಿಕ್ರಿಯಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ, "ಈ ಪರಿಷತ್ತು ಎಡ, ಬಲ ಅಥವಾ ಮಧ್ಯ ಎಂಬ ಯಾವುದೇ ಸಿದ್ಧಾಂತಕ್ಕೆ ಸೇರಿಲ್ಲ" ಎಂದು ಹೇಳಿದ್ದಾರೆ.

"ನಾವು ಯಾವುದೇ ಬರಹಗಾರರ ವಿರುದ್ಧ ಜಾತಿ, ಸಮುದಾಯ ಅಥವಾ ಧರ್ಮದ ಆಧಾರದ ಮೇಲೆ ಕಡೆಡಗಳಿಸಿಲ್ಲ. ಕನ್ನಡ ಭಾಷೆ ನಮ್ಮ ಜಾತಿ ಮತ್ತು ಧರ್ಮ. 14 ಸದಸ್ಯರ ಆಯ್ಕೆ ಸಮಿತಿಯು ಈ ಎಲ್ಲಾ ಸೆಮಿನಾರ್‌ಗಳು, ಅತಿಥಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಿರ್ಧರಿಸಿದೆ. ಈ ವರ್ಷ, ನಾವು ಎಲ್ಲಾ ಸೆಮಿನಾರ್‌ಗಳು ಮತ್ತು ಕಾರ್ಯಕ್ರಮಗಳಲ್ಲಿ ಹೊಸ ಮುಖಗಳಿಗೆ ಪ್ರಾಮುಖ್ಯತೆ ನೀಡಿದ್ದೇವೆ. ನಾವು ಪ್ರಧಾನ ವೇದಿಕೆಯನ್ನು ಸಂತ ಕನಕದಾಸ-ಶಿಶುನಾಳ ಷರೀಫ-ಸರ್ವಜ್ಞರಿಗೆ ಅರ್ಪಿಸಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಕನ್ನಡ ರಥವನ್ನು ರಾಜ್ಯದಾದ್ಯಂತ ಆರಂಭಿಸಿದ್ದೇವೆ. ಈ ರಥದ ಮುಖ್ಯ ವಾಸ್ತುಶೈಲಿ ಶಹಜಹಾನ್ ಮುದಕವಿ ಮತ್ತು ಇದರ ಮೇಲ್ವಿಚಾರಕರು ನಬಿ ಸಾಬ್ ಕುಷ್ಟಗಿ. ಹೀಗಾಗಿ ಜಾತಿ, ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ" ಎಂದಿದ್ದಾರೆ.

(ಮಾಹಿತಿ ಕೃಪೆ- ದಿ ಹಿಂದೂ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+