9ನೇ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು(ಫೆ.2) ಚಾಲನೆ
ಬೆಂಗಳೂರು, ಫೆಬ್ರವರಿ 2: 9ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಗುರುವಾರ ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ. ವಿಧಾನ ಸೌಧ ಮುಂಬಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಚಿತ್ರೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಈಜಿಫ್ಟಿನ ಖ್ಯಾತ ನಿರ್ದೇಶಕಿ ಹಲಾ ಖಲೀಲ್, ಬಂಗಾಲಿ ಹೆಸರಾಂತ ನಿರ್ದೇಶಕ ಬುದ್ಧದೇವದಾಸ್ ಗುಪ್ತ, ನಟ ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದು ನಟ ರಮೇಸ್ ಅರವಿಂದ್ ಮತ್ತು ನಟಿ ಸುಹಾಸಿನಿ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ. ಅಲ್ಲದೆ ಹೆಸರಾಂತ ಕಲಾವಿದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.[ಬೆಂಗಳೂರು ಚಿತ್ರೋತ್ಸವದಲ್ಲಿ ದರ್ಶನ್, ಸುದೀಪ್, ಪುನೀತ್ ಚಿತ್ರಗಳು!]

ಇನ್ನು ನಾಳೆ(ಫೆ.3) ಯಿಂದ ಫೆ.9ರ ವರೆಗೆ ನಡೆಯಲಿರುವ ಚಿತ್ರೋತ್ಸವ ಬೆಂಗಳೂರು ಮತ್ತು ಮೈಸೂರಿನಲ್ಲಿಯೂ ನಡೆಯಲಿದೆ. ಬೆಂಗಳೂರಿನ ಒರಾಯನ್ ಮಾಲಿನ ಫಿವಿಆರ್ ಸಿನಿಮಾಸ್ ನ 11 ಬೆಳ್ಳಿತೆರೆಯ ಮೇಲೆ ಹಾಗು ಮೈಸೂರಿನ ಮಾಲ್ ಆಫ್ ಮೈಸೂರು ಐನಾಕ್ಸ್ ಸಿನೆಮಾಸ್ ನ 4 ಬೆಳ್ಳಿ ಪರದೆಯ ಮೇಲೆ ವಿಶ್ವದ ಅತ್ಯುತ್ತಮ 60 ದೇಶಗಳ 240 ಚಿತ್ರಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶನ ಕಾಣಲಿವೆ.
ಉದ್ಘಾಟಿತ ಚಿತ್ರವಾಗಿ ಅಲ್ಗೇರಿಯಾದ ಮಹ್ಮದ್ ಹಮಿದಿ ನಿರ್ದೇಸನದ ಲಾವ ವಚೆ ಚಿತ್ರ ಪ್ರದರ್ಶನವಾಗಲಿದೆ. ಇನ್ನು ಅನೇಕ ದೇಶದ ಚಿತ್ರಗಳು ಈ ಬಾರಿ ಪ್ರದರ್ಶನಗೊಳ್ಳಲಿದ್ದು, ಭಾರತದ ಬುದ್ಧದೇವ್ ದಾಸ್ ಗುಪ್ತ ಅವರ ಕುರಿತ ಸಾಕ್ಷಚಿತ್ರಗಲು ಪ್ರೇಕ್ಷಕರನ್ನು ಮನಸೂರೆಗೊಳಿಸಲಿವೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications