ಕೋಟ್ಯಾಂತರ ರೂಪಾಯಿ ದುರುಪಯೋಗ; 77 ವರ್ಷದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಮಾಜಿ ಅಧಿಕಾರಿಗೆ ಜೈಲು
ಆರೋಪಿಯು ಈಗಾಗಲೇ ನಾಲ್ಕು ವರ್ಷ, ಏಳು ತಿಂಗಳು ಮತ್ತು 11 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದು, ಶಿಕ್ಷೆ ಅನುಭವಿಸಿದ್ದಾರೆ.
ಬೆಂಗಳೂರು, ಫೆಬ್ರವರಿ. 26: ತಮ್ಮ ಅವಧಿಯಲ್ಲಿ ಅಂದರೆ 1991 ಮತ್ತು 1998 ರ ನಡುವೆ 4.40 ಕೋಟಿ ರೂಪಾಯಿ ದುರುಪಯೋಗದ ಆರೋಪದ ಮೇಲೆ 77 ವರ್ಷದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಮಾಜಿ ಡೆಪ್ಯುಟಿ ಮ್ಯಾನೇಜರ್ಗೆ ವಿಶೇಷ ಸಿಬಿಐ ನ್ಯಾಯಾಲಯವು ನಾಲ್ಕು ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಮಾಜಿ ಡೆಪ್ಯುಟಿ ಮ್ಯಾನೇಜರ್, ಪಬ್ಲಿಕ್ ಪ್ರಾವಿಡೆಂಟ್ ಫಂಡ್ ವಿಭಾಗದ ಉಸ್ತುವಾರಿಯಾಗಿದ್ದ ಸಮಯದಲ್ಲಿ ಪಿಪಿಎಫ್ ಖಾತೆಯಿಂದ ಅಸ್ತಿತ್ವದಲ್ಲಿಲ್ಲದ ಮೊತ್ತವನ್ನು 50% ಹಿಂಪಡೆಯಲು ಅನುಕೂಲವಾಗುವಂತೆ ಸುಳ್ಳು ಡೆಬಿಟ್ ವೋಚರ್ಗಳನ್ನು ಸಿದ್ಧಪಡಿಸಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಯು ಈಗಾಗಲೇ ನಾಲ್ಕು ವರ್ಷ, ಏಳು ತಿಂಗಳು ಮತ್ತು 11 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದು, ಶಿಕ್ಷೆ ಕಡಿತಕ್ಕೆ ಅರ್ಹನಾಗಿರುವುದರಿಂದ, ನ್ಯಾಯಾಲಯ ವಿಧಿಸಲಾಗಿರುವ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಪರಿಗಣಿಸಲಾಗುತ್ತದೆ ಎಂದು ಸಿಬಿಐ ಪ್ರಕರಣಗಳ ಪ್ರಧಾನ ವಿಶೇಷ ನ್ಯಾಯಾಧೀಶ ಕೆ.ಎಲ್ ಅಶೋಕ್ ಹೇಳಿದ್ದಾರೆ.
ಡಿಸೆಂಬರ್ 6, 2006 ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಅವರಿಗೆ 77 ವರ್ಷ ಮತ್ತು ಅವರ ಪತ್ನಿ 71 ವರ್ಷವಾಗಿದ್ದು, ಆಕೆಯನ್ನು ನೋಡಿಕೊಳ್ಳಲು ಯಾರೂ ಇಲ್ಲ ಎಂಬುದನ್ನು ಗಮನಿಸಲಾಗಿದೆ.

ಆರೋಪಿಯ ಏಕೈಕ ಪುತ್ರ 2005 ರಲ್ಲಿ ಮಿದುಳಿನ ಕ್ಯಾನ್ಸರ್ನಿಂದ ಮಕ್ಕಳಿಲ್ಲದೆ ನಿಧನರಾಗಿದ್ದು, ಅವರಿಗೂ ಮಕ್ಕಳಿಲ್ಲ ಎಂದು ಶಿಕ್ಷೆಯ ಕುರಿತ ಮೇಲ್ಮನವಿಯಲ್ಲಿ ತಿಳಿಸಲಾಗಿದೆ. ತನ್ನ ಹೆಂಡತಿ ಮತ್ತು ವಿಧವೆ ಸೊಸೆಯನ್ನು ನೋಡಿಕೊಳ್ಳಲು ಕುಟುಂಬದ ಏಕೈಕ ವ್ಯಕ್ತಿ ಎಂದು ತಿಳಿಸಲಾಗಿದೆ. ಈಗಾಗಲೇ ನಾಲ್ಕು ವರ್ಷ ಮತ್ತು ಏಳು ತಿಂಗಳಿಗೂ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ. ಅವರ ಎಲ್ಲಾ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದ್ದು, ಅವರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ ಹೀಗಾಗಿ ತಮ್ಮ ಬಗ್ಗೆ ಶಿಕ್ಷೆ ಕಡಿತದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications