BREAKING: ಮಣ್ಣಿನಲ್ಲಿ ಜೀವಂತ ಹೂತಿದ್ದ ಗಂಡು ಮಗು ಪತ್ತೆ!, ಬದುಕಿದ ಕಂದಮ್ಮ...
ಬೆಂಗಳೂರು, ಸೆಪ್ಟಂಬರ್ 30: ಮಕ್ಕಳಿಲ್ಲ...ಮಕ್ಕಳಿಲ್ಲ... ಎಂದು ಕೊರಗುವ, ಕಂಡ ಕಂಡ ದೇವರಿಗೆ ಹರಕೆ ಹೊತ್ತು ಮಕ್ಕಳು ಬೇಕೆನ್ನುವವರನ್ನು, ಮಕ್ಕಳಿಲ್ಲ ಬದುಕು ಕಳೆಯುವವರನ್ನು ನಾವು ನೋಡಿದ್ದೇವೆ. ಆದರೆ ಬೆಂಗಳೂರಿನ ಸಮೀಪ ನಿರ್ಜನ ಪ್ರದೇಶದಲ್ಲಿ ಹುಟ್ಟಿದ ಒಂದೇ ದಿನಕ್ಕೆ ಹಸಿಗೂಸನ್ನು (ಮಗು) ಜೀವಂತವಾಗಿ ಮಣ್ಣಲ್ಲಿ ಹೂತಿಟ್ಟು ಪಾಪಿಗಳು ಪರಾರಿಯಾದ ಅಮಾನವೀಯ ಘಟನೆ ನಡೆದಿದೆ.
ಹೌದು, ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಕತ್ರಿಗುಪ್ಪೆ ದಿನ್ನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ನೀಲಗಿರಿಯ ತೋಪಿನಲ್ಲಿ ನಿರ್ಜನ ಪ್ರದೇಶದಲ್ಲಿ ಮಗುವನ್ನು ಜೀವಂತವಾಗಿ ಹೂತು ಹಾಕಲಾಗಿದೆ. ಇಂದು ಸೋಮವಾರ (ಸೆಪ್ಟಂಬರ್ 30) ಆಟೋ ಚಾಲಕರು ಬಹಿರ್ದೆಸೆಗೆ ತೆರಳಿದ್ದ ವೇಳೆ ಮಗು ಅಳುವ ಶಬ್ದ ಕೇಳಿ ವಿಷಯ ಗೊತ್ತಾಗಿದೆ.

ಕೂಡಲೇ ಮಗುವನ್ನು ರಕ್ಷಿಸಿದ ಸ್ಥಳೀಯರು ಮಕ್ಕಳ ರಕ್ಷಣಾ ವೇದಿಕೆಗೆ ಹಾಗೂ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಮಗು ಜೀವಂತವಾಗಿ ಸಿಕ್ಕಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಗುವಿಗೆ ಈ ಗತಿ ತಂದಿಟ್ಟವರಿಗೆ ಶಿಕ್ಷೆ ಆಗಲಿ
ಹುಟ್ಟಿದ ಒಂದೇ ದಿನದ ಕಂದಮ್ಮನಿಗೆ ಈ ಗತಿ ತಂದಿಟ್ಟ ಪಾಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗುತ್ತಿದೆ. ಮಗು ಬೇಕು ಎಂದುಕೊಂಡ ಅದೇಷ್ಟೋ ದಂಪತಿಗಳಿಗೆ ಮಕ್ಕಳಿಲ್ಲದ ಕೊರಗಿನಲ್ಲಿ ಜೀವನ ಕಳೆಯುತ್ತಾರೆ. ಆದರೆ ಜೀವಂತವಾಗಿ ಮಣ್ಣಲ್ಲಿ ಮಗು ಹೂತ ಪಾಪಿಗಳಿಗೆ ದೇವರು ಕರುಣಿಸಿದರೂ ಇಂಥ ಹೇಯ ಕೃತ್ಯ ಮಾಡಿದ್ದಾರೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.
ಮಕ್ಕಳ ರಕ್ಷಣಾ ವೇದಿಕೆ ಹೇಳುವುದೇನು?
ಸದ್ಯ ಪ್ರಕರಣವು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳೀಯರು ದೂರು ದಾಖಲಿಸಿದ್ದಾರೆ. ಮಗುವನ್ನು ಮಣ್ಣಲ್ಲಿ ಹೂತು ಹಾಕಿದ್ದ ಪರಿಣಾಮ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ, ಚಿಕ್ಕಪುಟ್ಟ ಗಾಯಗಳಾಗಿದ್ದು, ಮಕ್ಕಳ ಆಸ್ಪತ್ರೆಗೆ ಸೇರಿಸಲಾಗುವುದು ಎಂದು ಮಕ್ಕಳ ರಕ್ಷಣಾ ವೇದಿಕೆ ಮುಖ್ಯಸ್ಥೆ ಆಶಾ ಎಂಬವವರು ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆಗೆ ಆಟೋ ಚಾಲಕರು ನೀಲಗಿರಿ ತೋಪಿನಲ್ಲಿ ಬಹಿರ್ದೆಸೆಗೆ ಹೋಗಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರಿಗೆ ದೂರು ನೀಡಲಿದ್ದೇವೆ. ಇಂತಹ ಘಟನೆಗೆ ಕಾರಣವಾದವರನ್ನು ಹುಡುಕಿಸಿ ತಕ್ಕ ಶಿಕ್ಷೆ ಕೊಡಿಸುವ ಕೆಲಸವಾಗುತ್ತದೆ. ಇದೊಂದು ನಡೆಯಬಾರದ ಅಮಾನವೀಯ ಘಟನೆಯಾಗಿದ್ದು, ಸಮಾಜವೇ ತಲೆ ತಗ್ಗಿಸುವ ಪ್ರಕರಣ ಇದಾಗಿದೆ ಎಂದು ಆಶಾ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications