Karnataka Election 2023: ಬಿಜೆಪಿಗೆ ವೋಟ್ ಹಾಕೋದಾದ್ರೆ ಮಾತ್ರ ವೋಟರ್ ಐಡಿ: ಬಿಬಿಎಂಪಿ ಗುತ್ತಿಗೆ ನೌಕರನ ದರ್ಪ
ರಾಜ್ಯ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸಲು ಸಜ್ಜಾಗಿದ್ದಾರೆ. ಮತದಾರರು ಯಾವುದೇ ಹಣ, ಉಡುಗೊರೆಯ ಆಮಿಷಕ್ಕೆ ಒಳಗಾಗದಂತೆ ಮತ ಚಲಾವಣೆ ಮಾಡಲು ಚುನಾವಣಾ ಆಯೋಗ ಎಲ್ಲಾ ಕಡೆ ಜಾಗೃತಿ ಮೂಡಿಸುತ್ತಿದೆ. ಆದರೆ, ಇಲ್ಲೊಬ್ಬ ವ್ಯಕ್ತಿ ಬಿಜೆಪಿಗೆ ವೋಟ್ ಹಾಕೋದಾದ್ರೆ ಮಾತ್ರ ಮತದಾರರ ಗುರುತಿನ ಚೀಟಿ ಮಾಡಿಕೊಡ್ತಿನಿ ಅಂತ ದರ್ಪ ತೋರಿದ್ದಾರೆ.
ಬಿಜೆಪಿಗೆ ವೋಟ್ ಮಾಡಿದರೆ ಮಾತ್ರ ವೋಟರ್ ಐಡಿ ಕಾರ್ಡ್ ಅಪ್ಲೈ ಮಾಡೋದು.
— ಸಂತು Straight Forward 🇮🇳 (@SStraightForwar) April 23, 2023
ಬೊಮ್ಮನಹಳ್ಳಿ ಬಿಬಿಎಂಪಿ ಕಚೇರಿಯಲ್ಲಿ ಸರಕಾರಿ ಸೇವೆಗಳ ಅಂಗಡಿ ಇಟ್ಟಿರುವ ಪ್ರಕಾಶ್#ಬಿಜೆಪಿ_ಸೋಲಿಸಿ_ಕರ್ನಾಟಕ_ಉಳಿಸಿ #KarnatakaElection2023 #KarnatakaAssemblyElection2023 pic.twitter.com/uJazmehY1O
ಮತದಾನ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಲು ಹೋದವರ ಬಳಿ ಬಿಬಿಎಂಪಿ ನೌಕರನೊಬ್ಬ ಬಿಜೆಪಿಗೆ ವೋಟ್ ಹಾಕೋದಾದ್ರೆ ಮಾತ್ರ ಅಪ್ಲೈ ಮಾಡ್ತೀನಿ ಬೇರೆ ಪಕ್ಷಕ್ಕೆ ವೋಟ್ ಹಾಕ್ತೀನಿ ಅಂದ್ರೆ ವೋಟರ್ ಐಡಿಗೆ ಅಪ್ಲೈ ಮಾಡಲ್ಲ ಎಂದು ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿರುವ ವ್ಯಕ್ತಿಯನ್ನು ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಬಿಬಿಎಂಪಿ ಕಚೇರಿಯಲ್ಲಿ ಸರಕಾರಿ ಸೇವೆಗಳ ಅಂಗಡಿಯನ್ನು ಹೊಂದಿರುವ ಪ್ರಕಾಶ್ ಎಂದು ವಿಡಿಯೋದಲ್ಲಿ ತಿಳಿಸಲಾಗಿದೆ. ಈತ ಬಿಜೆಪಿ ಪ್ರಭಾವಿಗಳ ಜೊತೆ ಗುರುತಿಸಿಕೊಂಡಿರುವ ವ್ಯಕ್ತಿ ಎಂದು ಹೇಳಲಾಗಿದೆ. ಪ್ರಭಾವಿಗಳ ಜೊತೆ ಸಂಪರ್ಕ ಇರುವುದರಿಂದಲೇ ಈ ರೀತಿ ದರ್ಪ ತೋರಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತವಾಗಿದೆ.
ಕ್ರಮ ತೆಗೆದುಕೊಳ್ಳಲು ಸಾರ್ವಜನಿಕರ ಒತ್ತಾಯ
ಇದೇ ಪಕ್ಷಕ್ಕೆ ಮತ ಹಾಕಿ ಎಂದು ಒತ್ತಾಯ ಮಾಡುವ ಅಧಿಕಾರ ಯಾರಿಗೂ ಇಲ್ಲ, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿ ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸುವುದು ಮಾತ್ರ ಗುತ್ತಿಗೆ ನೌಕರರ ಕೆಲಸವಾಗಿದೆ. ಅರ್ಜಿ ಸಲ್ಲಿಸಲು ಬಂದವರ ಬಳಿ ಬಿಜೆಪಿಗೆ ಮತ ಹಾಕುವಂತೆ ಒತ್ತಾಯ ಮಾಡುತ್ತಿರುವ ಪ್ರಕಾಶ್ ವಿರುದ್ಧ ಕೂಡಲೇ ಕ್ರಮ ತೆಗೆದುಕೊಂಡು, ಕೆಲಸದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ಈ ವಿಡಿಯೋ ಯಾವಾಗ ತೆಗದಿದ್ದು ಎನ್ನುವುದು ತಿಳಿದಿಲ್ಲವಾದರೂ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಸದ್ಯ ರಂಗೇರಿದೆ, ರಾಷ್ಟ್ರದ ಎಲ್ಲಾ ಪಕ್ಷಗಳ ನಾಯಕರು ಸದ್ಯ ಕರ್ನಾಟಕಕ್ಕೆ ಧಾವಿಸುತ್ತಿದ್ದು, ಮತದಾರರನ್ನು ಸೆಳೆಯಲು ಕಸರತ್ತು ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ಬಹುಮತ ಪಡೆಯುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದು, ಜೆಡಿಎಸ್ ಕೂಡ ಸರ್ಕಾರ ರಚನೆ ಮಾಡುವ ಉತ್ಸಾಹದಲ್ಲಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications