ಹೆಣ್ಣು ಮಕ್ಕಳಿಲ್ಲವೆಂದು ಹೆಣ್ಣು ಆನೆ ದತ್ತು ಪಡೆದ ದಂಪತಿ
ಬೆಂಗಳೂರು, ಮಾರ್ಚ್ 9: ಹೆಣ್ಣು ಮಕ್ಕಳು ಇಲ್ಲವೆಂದು ಹೆಣ್ಣು ಆನೆಯನ್ನು ದಂಪತಿ ದತ್ತು ಪಡೆದಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳಾ ದಿನಾಚರಣೆಯ ವಿಶೇಷವಾಗಿ ಹೆಣ್ಣು ದಂಪತಿ ಆನೆಯನ್ನು ದತ್ತು ತೆಗೆದುಕೊಂಡಿದ್ದಾರೆ.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಗಿಹಳ್ಳಿ ರೇಂಜ್ನಲ್ಲಿ ಆನೆಯೊಂದು ಕೆಲ ದಿನಗಳ ಹಿಂದೆ ಒಂಟಿಯಾಗಿ ಕಾಣಿಸಿಕೊಂಡಿತ್ತು. ಸರಸ್ವತಿ ಎಂಬ ಈ ಆನೆ ಹುಟ್ಟಿದ ಕೆಲವೇ ದಿನಗಳಲ್ಲಿ ತಾಯಿಯಿಂದ ದೂರವಾಗಿತ್ತು. ಈ ಆನೆಯನ್ನು ದಿನೇಶ್ ದಂಪತಿ ದತ್ತು ಸ್ವೀಕರಿಸಿದ್ದಾರೆ.
ಒಂದು ವರ್ಷಕ್ಕೆ 1 ಲಕ್ಷ 75 ಸಾವಿರ ಹಣವನ್ನು ದಿನೇಶ್ ನೀಡಿದ್ದಾರೆ. ಅವರ ಜೀವಿತಾವಧಿ ಇರುವರೆಗೆ ಆನೆಯನ್ನು ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಆನೆ ಜೊತೆಗೆ ಕೆಲ ಕಾಲ ಕಳೆದು ಅದಕ್ಕೆ ಹಾಲು ಕುಡಿಸಿದ್ದಾರೆ. ಪ್ರೀತಿಯ ಆನೆಗೆ ಸರಸ್ವತಿ ಎಂದು ನಾಮಕರಣ ಮಾಡಿದ್ದಾರೆ.

ದಿನೇಶ್ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ, ಹೆಣ್ಣು ಮಕ್ಕಳು ಬೇಕು ಎನ್ನುವ ಆಸೆ ಅವರಿಗೆ ಇತ್ತು. ಹೀಗಾಗಿ, ಹೆಣ್ಣು ಆನೆಯನ್ನು ದತ್ತು ಪಡೆದು, ತಮ್ಮ ಮಕ್ಕಳಂತೆ ಕಂಡಿದ್ದಾರೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೈದ್ಯರು ಆಹಾರವಿಲ್ಲದೆ ಒಂಟಿಯಾಗಿ ಅಲೆದಾಟ ನಡೆಸಿದ್ದ ಆನೆಯನ್ನು ಆರೈಕೆ ಮಾಡಿದ್ದರು. ತಾಯಿ ಕಳೆದುಕೊಂಡ ಆನೆ ಮರಿಯನ್ನು ಮತ್ತೆ ತಾಯಿಯ ಬಳಿ ಸೇರಿಸಲು ಆಪರೇಷನ್ ನಡೆದಿತ್ತು. ಇದರಲ್ಲಿ ದಿನೇಶ್ ಕೂಡ ಭಾಗಿಯಾಗಿದ್ದರು. ಈ ವೇಳೆ ಆನೆ ಮರಿ ಸ್ಥಿತಿ ಕಂಡು ಆ ಆನೆಯನ್ನು ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ.
-
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications