ಕೇರಳದಿಂದ ಇಲ್ಲಿಗೆ ಬಂದು ಆತ್ಮಹತ್ಯೆಗೆ ಶರಣಾದರು...
ಬೆಂಗಳೂರು, ಡಿ. 2: ನಗರಕ್ಕೆ ರೈಲ್ವೆ ಪರೀಕ್ಷೆಯ ನೆಪದಲ್ಲಿ ಬಂದಿದ್ದ ಕೇರಳ ಮೂಲದ ಓರ್ವ ಯುವಕ ಹಾಗೂ ಓರ್ವ ಯುವತಿ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಕೇರಳದ ಪಾಲಕ್ಯಾಡ್ ಜಿಲ್ಲೆಯ ಯುವಕ ಬಿಜೇಶ್ (25) ಹಾಗೂ ಯುವತಿ ಶಿನು (22) ಎಂದು ಗುರುತಿಸಲಾಗಿದೆ.
ಕಾಟನ್ಪೇಟೆಯ ಕೆ.ಕೆ ಲೇನ್ನಲ್ಲಿರುವ ರಾಧಾಕೃಷ್ಣ ಲಾಡ್ಜ್ನಲ್ಲಿ ಸೋಮವಾರ ಬೆಳಗಿನ ಜಾವವಷ್ಟೇ ತಂಗಿದ್ದ ಈ ಜೋಡಿ ಮಧ್ಯಾಹ್ನದ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬೆಳಗ್ಗೆ 10 ಗಂಟೆ ಸಮಯದಲ್ಲಿ ಲಾಡ್ಜ್ನ ಸಿಬ್ಬಂದಿ ತಿಂಡಿ ಆರ್ಡರ್ ತೆಗೆದುಕೊಳ್ಳಲು ಬಾಗಿಲು ಬಡಿದಾಗ, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಆದರೆ, ಮಧ್ಯಾಹ್ನ 1 ಗಂಟೆಯಾದರೂ ಹೊರ ಬಾರದಿದ್ದಾಗ ಅನುಮಾನಗೊಂಡು ಹಲವು ಬಾರಿ ಬಾಗಿಲು ಬಡಿಯಲಾಯಿತು. ಆದರೂ, ತೆರೆಯದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಜೋಡಿ ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿದೆ. ಆದರೆ, ಸ್ಥಳದಲ್ಲಿ ಮರಣ ಪತ್ರ ಲಭಿಸಿಲ್ಲ. [ಅಂತರಗಂಗೆಯಲ್ಲಿ ಮುಳುಗಿ ಪ್ರೇಮಿಗಳ ಆತ್ಮಹತ್ಯೆ]

3 ದಿನಗಳ ಹಿಂದೇ ಕಾಣೆಯಾಗಿದ್ದರು: ಯುವಕ-ಯುವತಿ ಕುರಿತು ಪೊಲೀಸರು ತನಿಖೆ ನಡೆಸಿದಾಗ ಇಬ್ಬರೂ ಕಾಣೆಯಾಗಿರುವ ಕುರಿತು ಪಾಲಕ್ಯಾಡ್ ಠಾಣೆಯಲ್ಲಿ ಮೂರು ದಿನಗಳ ಹಿಂದೆಯೇ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರೂ ಪ್ರೇಮಿಗಳಾಗಿರಬಹುದು, ಮನೆಯವರು ಒಪ್ಪದಿದ್ದಾಗ ಇಲ್ಲಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಊಹಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆ ಶವಗಾರದಲ್ಲಿ ಮೃತದೇಹಗಳನ್ನು ಇರಿಸಲಾಗಿದೆ. ಕೇರಳದಿಂದ ಕುಟುಂಬ ಸದಸ್ಯರು ಬಂದ ನಂತರ ವಿಚಾರಣೆ ನಡೆಸಿ ಅವರಿಗೆ ಒಪ್ಪಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೈಲ್ವೆ ಪರೀಕ್ಷೆಯೇ ಇಲ್ಲ: ಲಾಡ್ಜ್ನಲ್ಲಿ ತಂಗುವ ಸಂದರ್ಭದಲ್ಲಿ ತಾವು ರೈಲ್ವೆ ಪರೀಕ್ಷೆಗಾಗಿ ಇಲ್ಲಿಗೆ ಬಂದಿರುವುದಾಗಿ ತಿಳಿಸಿದ್ದರು. ಆದರೆ, ಬೆಂಗಳೂರಿನಲ್ಲಿ ಯಾವುದೇ ರೈಲ್ವೆ ಪರೀಕ್ಷೆ ನಡೆಯುತ್ತಿಲ್ಲ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications