ವಿಡಿಯೋ: ಬೆಂಗಳೂರಿನಲ್ಲಿ ಕಂಡ ಕಂಡವರಿಗೆ ತಿವಿದ ಗೂಳಿ
ಬೆಂಗಳೂರು, ಸೆ. 6: ಬೆಂಗಳೂರಿನಲ್ಲಿ ಮದವೇರಿದ ಗೂಳಿ ತಿವಿದು ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಎಚ್ಎಎಲ್ ಬಳಿಯ ಅನ್ನಸಂದ್ರಪಾಳ್ಯದಲ್ಲಿಂದು ನಡೆದಿದೆ.
ಮದವೇರಿದ ಗೂಳಿಯೊಂದು ಅನ್ನಸಂದ್ರಪಾಳ್ಯದಲ್ಲಿ ಇದ್ದಕ್ಕಿದ್ದಂತೆ ಅಡ್ಡಾದಿಡ್ಡಿ ಓಡಾಡಲು ಶುರುಮಾಡಿತ್ತು. ಕಂಡ ಕಂಡ ವಸ್ತುಗಳ ಮೇಲೆ ಪರಾಕ್ರಮ ಮೆರೆಯುತ್ತಿತ್ತು. ಆಗ ಗೂಳಿ ಮೇಲೆ ಸ್ಥಳೀಯರು ಅಟ್ಯಾಕ್ ಮಾಡಿದ್ದಾರೆ. ಇದರಿಂದ ಮತ್ತಷ್ಟು ರೊಚ್ಚಿಗೆದ್ದ ಗೂಳಿ, ಕಂಡ ಕಂಡವರ ಮೇಲೆ ನುಗ್ಗಿದೆ. ಗೂಳಿ ತಿವಿದ ಪರಿಣಾಮ ಗುರಪ್ಪ ಹಾಗೂ ಸೆಲ್ವಕುಮಾರ್ ಎಂಬುವವರಿಗೆ ಗಂಭೀರ ಗಾಯವಾಗಿದೆ.

ಅಲ್ಲದೆ ಘಟನೆಯಲ್ಲಿ ಹಲವು ಅಂಗಡಿ ಮುಂಗಟ್ಟು, ವಾಹನಗಳು ಜಖಂ ಆಗಿವೆ. ಅಂಗಡಿ ವಸ್ತುಗಳ ಮೇಲೆ ದಾಳಿ ಮಾಡುವಾಗ ಮಾಲೀಕರು ಗೂಳಿ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಆಗ ಮತ್ತಷ್ಟು ಕೆರಳಿದ ಗೂಳಿ, ಹಲವು ಅಂಗಡಿಗಳಿಗೆ ನುಗ್ಗಿ ಸಿಕ್ಕ ಸಿಕ್ಕ ವಸ್ತುಗಳನ್ನು ಪುಡಿ ಪುಡಿ ಮಾಡಿಬಿಟ್ಟಿದೆ.
ಕತ್ತಿಗೆ ಹಗ್ಗ ಬಿಗಿದು ಹತ್ಯೆ..?
ಇನ್ನು ಗೂಳಿ ಅಟ್ಟಹಾಸ ಮಿತಿಮೀರಿ, ಇಬ್ಬರನ್ನು ಗಂಭೀರವಾಗಿ ಗಾಯಗೊಳಿಸಿದ ನಂತರ ಜನರೆಲ್ಲಾ ಒಟ್ಟಾಗಿ ಸೇರಿ ಗೂಳಿಯ ಮೇಲೆ ತಿರುಗಿ ಬಿದ್ದಿದ್ದಾರೆ. ಆಗ ಗೂಳಿ ನಿಯಂತ್ರಿಸಲು ಕುತ್ತಿಗೆಗೆ ಹಾಕಿದ್ದ ಹಗ್ಗ ಅದರ ಪ್ರಾಣಕ್ಕೆ ಮುಳುವಾಯಿತು. ಹಗ್ಗ ಕುತ್ತಿಗೆಗೆ ಬಿಗಿದ ಪರಿಣಾಮ ಗೂಳಿ ಸ್ಥಳದಲ್ಲೇ ಮೃತಪಟ್ಟಿದೆ. ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದರೆ ಗೂಳಿ ಈ ಮಟ್ಟಿಗೆ ಮದವೇರಲು ಕಾರಣವೇನು ಎಂಬದು ಇನ್ನೂ ಸ್ಪಷ್ಟವಾಗಿಲ್ಲ. ಗಾಯಗೊಂಡಿರುವ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications