ಓಲಾದಲ್ಲಿ ಎಸಿಯಿಲ್ಲ ಎಂದು 15,000 ಪರಿಹಾರ ಪಡೆದ ಬೆಂಗಳೂರಿನ ಉದ್ಯಮಿ, ವಿವರಗಳು
ಬೆಂಗಳೂರು, ಜನವರಿ. 27: ತನ್ನ ಪ್ರಯಾಣಕ್ಕಾಗಿ ತಾನು ಬುಕ್ ಮಾಡಿದ ಓಲಾದಲ್ಲಿ ಎಸಿಯಿರಲಿಲ್ಲ ಎಂದು ಬೆಂಗಳೂರಿನ ಉದ್ಯಮಿಯೊಬ್ಬರು ಓಲಾ ಕ್ಯಾಬ್ಗಳ ಸಿಇಒ ವಿರುದ್ಧ ದೂರು ನೀಡಿ, ಪರಿಹಾರ ಪಡೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಮೂಲದ ಉದ್ಯಮಿ ವಿಕಾಸ್ ಭೂಷಣ್, ಓಲಾ ಸಿಇಒ ಭವಿಶ್ ಅಗರ್ವಾಲ್ ವಿರುದ್ಧ ದೂರು ನೀಡಿದ್ದರು. ತನ್ನ ಎಂಟು ಗಂಟೆಗಳ ಕಾಲದ ಪ್ರಯಾಣಕ್ಕೆ ಬಾಡಿಗೆಗೆ ಪಡೆದ ಕ್ಯಾಬ್ನಲ್ಲಿ ಅಸಮರ್ಪಕ ಎಸಿಯಿತ್ತು ಎಂದು ಮೊಕದ್ದಮೆ ಹೂಡಿದ್ದಾರೆ. ಈಗ ವಿಕಾಸ್ ಭೂಷಣ್ಗೆ 15,000 ರೂಪಾಯಿ ಪರಿಹಾರ ನಿಡುವಂತೆ ನ್ಯಾಯಾಲಯ ಆದೇಶಿಸಿದೆ.
ಉದ್ಯಮಿ ವಿಕಾಸ್ ಭೂಷಣ್ ಅವರು ಓಲಾ ಸಿಇಒ ವಿರುದ್ಧ ಮಾರ್ಚ್ 2022 ರಲ್ಲಿ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನಂತರ ವಿಕಾಸ್ ಭೂಷಣ್ಗೆ 15,000 ರೂಪಾಯಿ ನೀಡುವಂತೆ ಓಲಾಗೆ ನ್ಯಾಯಾಲಯ ಆದೇಶಿಸಿದೆ.

ವರದಿಗಳ ಪ್ರಕಾರ, ಉದ್ಯಮಿ ವಿಕಾಸ್ ಭೂಷಣ್ ಅಕ್ಟೋಬರ್ 2021 ರಲ್ಲಿ ಎಂಟು ಗಂಟೆಗಳ ಕಾಲ ಓಲಾ ಪ್ರೈಮ್ ಸೆಡಾನ್ ಅನ್ನು ಬಾಡಿಗೆಗೆ ಪಡೆದಿದ್ದರು. ಎಂಟು ಗಂಟೆಗಳ ಕಾಲ ಕ್ಯಾಬ್ ದರವಾಗಿ 1,837 ರೂಪಾಯಿ ನೀಡಿದ್ದರು. ಎಸಿ ಕಾರ್ಯನಿರ್ವಹಿಸದ ಕಾರಣ ಉದ್ಯಮಿ ಮತ್ತು ಅವರ ಸಹ ಪ್ರಯಾಣಿಕರು ಅನಾನುಕೂಲತೆಯನ್ನು ಎದುರಿಸಿದ್ದರು.
ವಿಕಾಸ್ ಭೂಷಣ್ ಪಾವತಿಸಿದ್ದ ಕ್ಯಾಬ್ ದರದಲ್ಲಿ ಎಸಿ ಶುಲ್ಕವನ್ನು ಸೇರಿಸಲಾಗಿತ್ತು. ನವೆಂಬರ್ 2021 ರಲ್ಲಿ, ಅವರು ಓಲಾ ಕಸ್ಟಮರ್ ಕೇರ್ಗೆ ಕರೆ ಮಾಡಿ ಮರುಪಾವತಿ ಮಾಡಬೇಕು ಎಂದು ಮನವಿ ಮಾಡಿದ್ದರು. ನಂತರ ಕ್ಯಾಬ್ನಲ್ಲಿ ಎಸಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಓಲಾ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಆದರೆ, ಮರುಪಾವತಿಗಾಗಿ ಅವರ ಬೇಡಿಕೆಯನ್ನು ಕಂಪನಿ ತಿರಸ್ಕರಿಸಿ, 100 ರೂಪಾಯಿಗಳ ವೋಚರ್ ನೀಡಿದೆ.
ನಂತರ ಅವರು ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದರು. ಆಯೋಗದ ನ್ಯಾಯಾಧೀಶರ ಅವರ ದೂರನ್ನು ಪರಿಶೀಲಿಸಿದರು. ಓಲಾದ ಇಮೇಲ್ ಪ್ರಕಾರ, ಕ್ಯಾಬ್ನ ಎಸಿ ಕಾರ್ಯನಿರ್ವಹಿಸದಿದ್ದರೂ ಸಹ ಕಂಪನಿಯು 1,837 ರೂಪಾಯಿಗಳನ್ನು ವಿಧಿಸಿದೆ ಎಂದು ಆಯೋಗದ ಅಧ್ಯಕ್ಷೆ ಎಂ ಶೋಭಾ ನೇತೃತ್ವದ ಪೀಠ ಗಮನಿಸಿದೆ.

ವಿಕಾಸ್ ಭೂಷಣ್ ಅವರಿಗೆ ಮಾನಸಿಕ ಯಾತನೆ ಮತ್ತು ಅನಾನುಕೂಲತೆಯನ್ನು ಉಂಟುಮಾಡಿದ್ದಕ್ಕಾಗಿ ಪರಿಹಾರವಾಗಿ ಭೂಷಣ್ಗೆ 10,000 ರೂ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. 1,837 ರೂಪಾಯಿಗಳನ್ನು ಬಡ್ಡಿ ಸಮೇತ ಮರುಪಾವತಿಸುವಂತೆ ಮತ್ತು ಉದ್ಯಮಿಯ ವ್ಯಾಜ್ಯ ವೆಚ್ಚದ 5,000 ರೂಪಾಯಿಗಳನ್ನು ಭರಿಸುವಂತೆ ಓಲಾ ಸಿಇಒ ಭವಿಶ್ ಅಗರ್ವಾಲ್ ಅವರಿಗೆ ನ್ಯಾಯಾಲಯ ಸೂಚಿಸಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications