ಪ್ರಮಾಣವಚನದ ನಡುವೆ ಅಡ್ಡ ಬಂದ ಬೆಕ್ಕು; ನೂತನ ಸಚಿವರಿಗೆ ಆರಂಭದಲ್ಲೇ ವಿಘ್ನ?
ಬೆಂಗಳೂರು, ಜನವರಿ 6: ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಠಿಸಿದ್ದ ಸಚಿವ ಸಂಪುಟ ವಿಸ್ತರಣೆ ಅಂತೂ ಮುಗಿದಿದೆ. ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ 10 'ಅರ್ಹ' ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಆದರೆ, ಈ ವೇಳೆ ರಾಜಭವನದಲ್ಲಿ ನಡೆದ ಒಂದು ಘಟನೆ ಚರ್ಚೆಗೆ ಗ್ರಾಸವಾಗಿದೆ. ಸಚಿವರು ಪ್ರಮಾಣವಚನ ತೆಗೆದುಕೊಳ್ಳುವ ಸಮಯದಲ್ಲಿ ಬೆಕ್ಕೊಂದು ಬಂದು ವೇದಿಕೆಯ ಬಳಿ ಓಡಾಡಿದೆ. ಆದರೆ, ಸಚಿವರು ಪ್ರಮಾಣವಚನ ತೆಗೆದುಕೊಳ್ಳುವ ಸಂದರ್ಭದಲ್ಲಿ ಬೆಕ್ಕು ಅಡ್ಡ ಬಂದಿರುವುದು ನೂತನ ಸಚಿವರಿಗೆ ಅಪಶಕುನ ಎಂದು ಜ್ಯೋತಿಷ್ಯ ನಂಬುವ ಕೆಲವರು ಹೇಳುತ್ತಿದ್ದಾರೆ.
ವೇದಿಕೆ ಕೆಳಗಿನಿಂದ ಕಂದು ಬಣ್ಣದ ಬೆಕ್ಕೊಂದು ಗಣ್ಯರು ಕುಳಿತುಕೊಳ್ಳುವ ಸಾಲಿನಲ್ಲಿ ಬಂದು ಅತ್ತಿಂದಿತ್ತ ಓಡಾಡಿದೆ. ಈ ವೇಳೆ ಪೊಲೀಸ್ ಅಧಿಕಾರಿಗಳ ಸೂಚನೆ ಮೆರೆಗೆ ಪೊಲೀಸ್ ಸಿಬ್ಬಂದಿ ಬೆಕ್ಕನ್ನು ಓಡಿಸಲು ಯಶಸ್ವಿಯಾದರು.

ಬೆಕ್ಕು ಬಂದಿದ್ದು ಅಪಶಕುನವಾ?
ಪ್ರಮಾಣವಚನ ಮುಗಿದ ಮೇಲೆ ನೂತನ ಸಚಿವರು ಹಾಗೂ ಅವರ ಬೆಂಬಲಿಗರು ಸಂಭ್ರಮದಲ್ಲಿದ್ದರೆ, ಬೆಕ್ಕನ್ನು ನೋಡಿದವರು ಇಂತಹ ಶುಭ ಸಂದರ್ಭದಲ್ಲಿ ಬೆಕ್ಕು ದಿಢೀರ್ನೆ ಏತಕ್ಕೆ ಬಂತು? ಎಂದು ಲೆಕ್ಕಾಚಾರ ಹಾಕುತ್ತಿದ್ದದ್ದು ಕಂಡು ಬಂದಿತು.

ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?
ಶುಭ ಸಮಾರಂಭದಲ್ಲಿ ಬೆಕ್ಕುಗಳ ಕಂಡು ಬಂದರೆ ಅದು ಅಪಶಕುನ ಎಂದು ಹಲವು ದೇಶಗಳಲ್ಲಿ ಜನರ ನಂಬಿಕೆ ಇದೆ. ಕಪ್ಪು ಬೆಕ್ಕು ಮಾತ್ರ ಬಹಳ ಅಪಶಕುನ ಎಂದು ಜಪಾನ್, ಕೊರಿಯಾ, ಜರ್ಮನಿ, ಶ್ರೀಲಂಕಾ ಮುಂತಾದ ದೇಶಗಳಲ್ಲಿ ನಂಬುತ್ತಾರೆ. ಆದರೆ, ಭಾರತದಲ್ಲಿ ಯಾವುದೇ ಬಣ್ಣದ ಬೆಕ್ಕು ಶುಭ ಸಮಾರಂಭಗಳಲ್ಲಿ ಕಂಡು ಬಂದರೆ ಅದು ಅಪಶಕುನ ಎಂದು ನಂಬುತ್ತಾರೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

ರಾಜಭವನದಲ್ಲಿ ಬೆಕ್ಕುಗಳ ಹಾವಳಿ
ಕಳೆದ ವರ್ಷ ರಾಜಭವನದಲ್ಲಿ ಬೆಕ್ಕುಗಳ ಹಾವಳಿ ವಿಪರೀತವಾಗಿದ್ದು ಇದಕ್ಕೆ ಪರಿಹಾರ ಕಂಡುಹಿಡಿಯಲೇ ಬೇಕು ಎಂದು ರಾಜಭವನ ಆಡಳಿತ ಮಂಡಳಿ ಬಿಬಿಎಂಪಿ ಮೊರೆ ಹೋಗಿತ್ತು. ರಾಜಭವನದಲ್ಲಿರುವ ಸುಮಾರು 35 ಬೆಕ್ಕುಗಳನ್ನು ಹಿಡಿಯಲು ಬಿಬಿಎಂಪಿ ಬರೋಬ್ಬರಿ 98 ಸಾವಿರ ರೂ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಗುರುವಾರದ ಘಟನೆ ನೋಡಿದರೆ ರಾಜಭವನದಲ್ಲಿ ಬೆಕ್ಕುಗಳ ಹಾವಳಿ ಇನ್ನೂ ಕಡಿಮೆ ಆಗಿಲ್ಲ ಎಂದು ತೋರುತ್ತದೆ.

ನೂತನ ಸಚಿವರು ಯಾರಾರು?
ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ, ಯಶವಂತಪುರ ಶಾಸಕ ಎಸ್ ಟಿ ಸೋಮಶೇಕರ, ಚಿಕ್ಕಬಳ್ಳಾಪುರ ಶಾಸಕ ಡಿ ಸುಧಾಕರ್, ವಿಜಯನಗರ ಶಾಸಕ ಆನಂದ ಸಿಂಗ್, ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ನೂತನ ಸಚಿವರಾಗಿ ರಾಜ್ಯಪಾಲರಿಂದ ಪ್ರಮಾಣ ವಚನ ತೆಗೆದುಕೊಂಡರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications