ಪ್ರಮಾಣವಚನದ ನಡುವೆ ಅಡ್ಡ ಬಂದ ಬೆಕ್ಕು; ನೂತನ ಸಚಿವರಿಗೆ ಆರಂಭದಲ್ಲೇ ವಿಘ್ನ?
ಬೆಂಗಳೂರು, ಜನವರಿ 6: ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಠಿಸಿದ್ದ ಸಚಿವ ಸಂಪುಟ ವಿಸ್ತರಣೆ ಅಂತೂ ಮುಗಿದಿದೆ. ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ 10 'ಅರ್ಹ' ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಆದರೆ, ಈ ವೇಳೆ ರಾಜಭವನದಲ್ಲಿ ನಡೆದ ಒಂದು ಘಟನೆ ಚರ್ಚೆಗೆ ಗ್ರಾಸವಾಗಿದೆ. ಸಚಿವರು ಪ್ರಮಾಣವಚನ ತೆಗೆದುಕೊಳ್ಳುವ ಸಮಯದಲ್ಲಿ ಬೆಕ್ಕೊಂದು ಬಂದು ವೇದಿಕೆಯ ಬಳಿ ಓಡಾಡಿದೆ. ಆದರೆ, ಸಚಿವರು ಪ್ರಮಾಣವಚನ ತೆಗೆದುಕೊಳ್ಳುವ ಸಂದರ್ಭದಲ್ಲಿ ಬೆಕ್ಕು ಅಡ್ಡ ಬಂದಿರುವುದು ನೂತನ ಸಚಿವರಿಗೆ ಅಪಶಕುನ ಎಂದು ಜ್ಯೋತಿಷ್ಯ ನಂಬುವ ಕೆಲವರು ಹೇಳುತ್ತಿದ್ದಾರೆ.
ವೇದಿಕೆ ಕೆಳಗಿನಿಂದ ಕಂದು ಬಣ್ಣದ ಬೆಕ್ಕೊಂದು ಗಣ್ಯರು ಕುಳಿತುಕೊಳ್ಳುವ ಸಾಲಿನಲ್ಲಿ ಬಂದು ಅತ್ತಿಂದಿತ್ತ ಓಡಾಡಿದೆ. ಈ ವೇಳೆ ಪೊಲೀಸ್ ಅಧಿಕಾರಿಗಳ ಸೂಚನೆ ಮೆರೆಗೆ ಪೊಲೀಸ್ ಸಿಬ್ಬಂದಿ ಬೆಕ್ಕನ್ನು ಓಡಿಸಲು ಯಶಸ್ವಿಯಾದರು.

ಬೆಕ್ಕು ಬಂದಿದ್ದು ಅಪಶಕುನವಾ?
ಪ್ರಮಾಣವಚನ ಮುಗಿದ ಮೇಲೆ ನೂತನ ಸಚಿವರು ಹಾಗೂ ಅವರ ಬೆಂಬಲಿಗರು ಸಂಭ್ರಮದಲ್ಲಿದ್ದರೆ, ಬೆಕ್ಕನ್ನು ನೋಡಿದವರು ಇಂತಹ ಶುಭ ಸಂದರ್ಭದಲ್ಲಿ ಬೆಕ್ಕು ದಿಢೀರ್ನೆ ಏತಕ್ಕೆ ಬಂತು? ಎಂದು ಲೆಕ್ಕಾಚಾರ ಹಾಕುತ್ತಿದ್ದದ್ದು ಕಂಡು ಬಂದಿತು.

ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?
ಶುಭ ಸಮಾರಂಭದಲ್ಲಿ ಬೆಕ್ಕುಗಳ ಕಂಡು ಬಂದರೆ ಅದು ಅಪಶಕುನ ಎಂದು ಹಲವು ದೇಶಗಳಲ್ಲಿ ಜನರ ನಂಬಿಕೆ ಇದೆ. ಕಪ್ಪು ಬೆಕ್ಕು ಮಾತ್ರ ಬಹಳ ಅಪಶಕುನ ಎಂದು ಜಪಾನ್, ಕೊರಿಯಾ, ಜರ್ಮನಿ, ಶ್ರೀಲಂಕಾ ಮುಂತಾದ ದೇಶಗಳಲ್ಲಿ ನಂಬುತ್ತಾರೆ. ಆದರೆ, ಭಾರತದಲ್ಲಿ ಯಾವುದೇ ಬಣ್ಣದ ಬೆಕ್ಕು ಶುಭ ಸಮಾರಂಭಗಳಲ್ಲಿ ಕಂಡು ಬಂದರೆ ಅದು ಅಪಶಕುನ ಎಂದು ನಂಬುತ್ತಾರೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

ರಾಜಭವನದಲ್ಲಿ ಬೆಕ್ಕುಗಳ ಹಾವಳಿ
ಕಳೆದ ವರ್ಷ ರಾಜಭವನದಲ್ಲಿ ಬೆಕ್ಕುಗಳ ಹಾವಳಿ ವಿಪರೀತವಾಗಿದ್ದು ಇದಕ್ಕೆ ಪರಿಹಾರ ಕಂಡುಹಿಡಿಯಲೇ ಬೇಕು ಎಂದು ರಾಜಭವನ ಆಡಳಿತ ಮಂಡಳಿ ಬಿಬಿಎಂಪಿ ಮೊರೆ ಹೋಗಿತ್ತು. ರಾಜಭವನದಲ್ಲಿರುವ ಸುಮಾರು 35 ಬೆಕ್ಕುಗಳನ್ನು ಹಿಡಿಯಲು ಬಿಬಿಎಂಪಿ ಬರೋಬ್ಬರಿ 98 ಸಾವಿರ ರೂ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಗುರುವಾರದ ಘಟನೆ ನೋಡಿದರೆ ರಾಜಭವನದಲ್ಲಿ ಬೆಕ್ಕುಗಳ ಹಾವಳಿ ಇನ್ನೂ ಕಡಿಮೆ ಆಗಿಲ್ಲ ಎಂದು ತೋರುತ್ತದೆ.

ನೂತನ ಸಚಿವರು ಯಾರಾರು?
ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ, ಯಶವಂತಪುರ ಶಾಸಕ ಎಸ್ ಟಿ ಸೋಮಶೇಕರ, ಚಿಕ್ಕಬಳ್ಳಾಪುರ ಶಾಸಕ ಡಿ ಸುಧಾಕರ್, ವಿಜಯನಗರ ಶಾಸಕ ಆನಂದ ಸಿಂಗ್, ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ ಹಾಗೂ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ನೂತನ ಸಚಿವರಾಗಿ ರಾಜ್ಯಪಾಲರಿಂದ ಪ್ರಮಾಣ ವಚನ ತೆಗೆದುಕೊಂಡರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications