ಹಲ್ಲೆ ಆರೋಪ: ಸೋಮಣ್ಣ ಮಗನ ವಿರುದ್ಧ ದೂರು ಸಲ್ಲಿಕೆ
ಬೆಂಗಳೂರು, ಮೇ 11: ಬಿಜೆಪಿ ಮುಖಂಡ ವಿ. ಸೋಮಣ್ಣ ಅವರ ಮಗ ಅರುಣ್ ಸೋಮಣ್ಣ ಮತ್ತು ಕೆಲವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನವೀನ್ ಪ್ರಸಾದ್ ಸಿ.ಜಿ. ಎಂಬುವವರು ಚಂದ್ರಾ ಲೇ ಔಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಘಟನೆ ವೇಳೆ ತಮ್ಮ ಬಳಿಯಿದ್ದ ಚಿನ್ನದ ಸರ ಮತ್ತು ನಗದು ಹಣವನ್ನು ಕಸಿದುಕೊಂಡಿದ್ದಾರೆ. ಮತ್ತೊಮ್ಮೆ ಈ ಕಡೆ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೀ ಕಸಿದುಕೊಂಡರು:
ಸೋಮವಾರ ರಾತ್ರಿ 8.30ರ ಸಮಯದಲ್ಲಿ ನಾಯಂಡಹಳ್ಳಿಯ ರಸ್ತೆಯಲ್ಲಿ ಸ್ನೇಹಿತ ಪುನೀತ್ ಬಿ.ಕೆ. ಅವರೊಂದಿಗೆ ಮತ್ತೊಬ್ಬ ಸ್ನೇಹಿತನ ಮನೆಗೆ ತೆರಳುತ್ತಿದ್ದಾಗ 40-60 ಜನರ ಗುಂಪು ನಮ್ಮ ವಾಹನವನ್ನು ಅಡ್ಡಗಟ್ಟಿತು. ಅದರಲ್ಲಿ ಅರುಣ್ ಸೋಮಣ್ಣ ಅವರೂ ಇದ್ದರು. ಹಣ ಹಂಚಲು ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದ ಅವರು, ವಾಹನದ ಕೀ ಕಸಿದುಕೊಂಡು ಹಲ್ಲೆ ನಡೆಸಿದರು. ಅರುನ್ ಸೋಮಣ್ಣ ಕೂಡ ತಮ್ಮನ್ನು ತಳ್ಳಾಡಿ ಅವಾಚ್ಯ ಶಬ್ಧಗಳಿಂದ ಬೈದಿದ್ದಲ್ಲದೆ, ಜಾತಿ ನಿಂದನೆ ಮಾಡಿದರು.
ವಾಹನವನ್ನು ಪರಿಶೀಲಿಸಿ ಜೇಬಿಗೆ ಕೈಹಾಕಿ ಪರಿಶೀಲಿಸಿದರು. ಅದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಎಳೆದಾಡಿ 48 ಗ್ರಾಂ ಚಿನ್ನದ ಸರ ಮತ್ತು 5,550 ರೂಪಾಯಿಗಳನ್ನು ಯಾರೋ ಕಸಿದುಕೊಂಡಿದ್ದಾರೆ. ಬಳಿಕ ಪೊಲೀಸರು ತಮ್ಮನ್ನು ಹಾಗೂ ಸ್ನೇಹಿತನನ್ನು ರಕ್ಷಿಸಿದ್ದಾರೆ ಎಂದು ನವೀನ್ ಪ್ರಸಾದ್ ಅವರು ದೂರಿನಲ್ಲಿ ವಿವರಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications