ಬೆಂಗಳೂರು: ಬಸವನಗುಡಿ ದೊಡ್ಡ ಗಣೇಶನ ದೇವಸ್ಥಾನದ ಗೋಪುರದಲ್ಲಿ ಬಿರುಕು
ಬೆಂಗಳೂರು, ಡಿಸೆಂಬರ್ 04: ಬೆಂಗಳೂರಿನ ಐತಿಹಾಸಿಕ ದೇವಾಲಯ ಬಸವನಗುಡಿ ದೊಡ್ಡ ಗಣಪನ ದೇವಸ್ಥಾನದ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ 8 ವರ್ಷಗಳಿಂದ ದೇವಸ್ಥಾನಕ್ಕೆ ಸುಣ್ಣ, ಬಣ್ಣವೇ ಆಗಿಲ್ಲ. ಹೆಸರಿಗೆ ಮಾತ್ರ ಇದು ಐತಿಹಾಸಿಕ ದೇವಾಲಯವಾಗಿದ್ದು, ಸರಿಯಾದ ನಿರ್ವಹಣೆ ಇಲ್ಲದೇ ಹಾಳಾಗುತ್ತಿದೆ.
ಬಸವನಗುಡಿ ದೊಡ್ಡ ಗಣೇಶ ದೇವಸ್ಥಾನದ ಗೋಪುರದಲ್ಲಿ ಬಿರುಕು ಬಿಟ್ಟಿದ್ದು, ಈ ಬಗ್ಗೆ ಮೂರು ತಿಂಗಳ ಹಿಂದೆಯೇ ದೇಗುಲದ ಆಡಳಿತ ಮಂಡಳಿ ಪುರಾತತ್ವ ಇಲಾಖೆಗೆ ಪತ್ರ ಬರೆದಿದೆ. ರಾಜ್ಯ ಸರ್ಕಾರದಿಂದಾಗಲೀ, ಇಲಾಖೆಯಿಂದಾಗಲೀ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಆರೋಪಿಸಿದೆ.

ದೊಡ್ಡ ಬಸವಣ್ಣ ದೇವಾಲಯವು ಪುರಾತತ್ವ ಇಲಾಖಾ ವ್ಯಾಪ್ತಿಗೆ ಒಳಪಟ್ಟಿದೆ. ದೇವಾಲಯದ ಆಡಳಿತವನ್ನು ಧಾರ್ಮಿಕ ದತ್ತಿ ಇಲಾಖಾ ವತಿಯಿಂದ ಕೈಗೊಳ್ಳಲಾಗುತ್ತಿದೆ. ದೇವಾಲಯದ ವಿಮಾನ ಗೋಪುರ ದಕ್ಷಿಣ ದಿಕ್ಕಿನ ಕೆಲವು ಭಾಗದಲ್ಲಿ ಬಿರುಕು ಬಿಟ್ಟಿದೆ. ತಜ್ಞರ ಅಭಿಪ್ರಾಯದಂತೆ ದೇವಾಲಯದ ಸಣ್ಣ-ಪುಟ್ಟ ರಿಪೇರಿ ಕಾಮಗಾರಿಯನ್ನು ನಡೆಸುವಂತೆ ಪುರಾತತ್ವ ಇಲಾಖೆಗೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.
ಅಲ್ಲದೇ ದೇವಾಲಯದ ಗರ್ಭಗುಡಿ ಮತ್ತು ರಾಜಗೋಪುರ ಮೇಲ್ಬಾಗದಲ್ಲಿ ಗಿಡಗಳು ಬೆಳೆದಿದ್ದು, ಇದರಿಂದ ದೇವಸ್ಥಾನದ ಕಟ್ಟಡಕ್ಕೆ ಹಾನಿಯಾಗಲಿದೆ. ಹೀಗಾಗಿ ಗೋಪುರದ ದುರಸ್ಥಿ ಕಾಮಗಾರಿಯನ್ನು ಹಾಗೂ ದೇವಾಲಯದ ಗುಡಿ ಸ್ವಚ್ಛತೆ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಆಡಳಿತ ಮಂಡಳಿಯಿಂದ ಮನವಿ ಮಾಡಲಾಗಿದ್ದು, ಯಾವುದೇ ಕ್ರಮ ಈವರೆಗೂ ಆಗಿಲ್ಲ. ಇನ್ನೇನು ಕೆಲವೇ ದಿನಗಳಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಈ ವೇಳೆ ಲಕ್ಷಾಂತರ ಜನರು ಆಗಮಿಸುತ್ತಾರೆ. ಹೀಗಾಗಿ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿರುವ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸಿದೆ.
ಬಸವನಗುಡಿ ದೊಡ್ಡ ಗಣೇಶ ದೇವಸ್ಥಾನದ ಬಗ್ಗೆ ಮಾಹಿತಿ..!
ದೊಡ್ಡ ಗಣಪತಿ ದೇವಸ್ಥಾನವು ಬೆಂಗಳೂರಿನ ಬಸವನಗುಡಿ ದಕ್ಷಿಣ ಬೆಂಗಳೂರು ಪ್ರದೇಶದಲ್ಲಿದೆ. ಇದು ಗಣೇಶನ ಹಳೆಯ ದೇವಾಲಯಗಳಲ್ಲಿ ಒಂದಾಗಿದೆ. ದೊಡ್ಡ ಗಣಪತಿಯು ಕರ್ನಾಟಕದ ದೊಡ್ಡ ಗಣೇಶನ ವಿಗ್ರಹವಾಗಿದೆ. ಈ ಜನಪ್ರಿಯ ದೇವಾಲಯದ ಬೃಹತ್ ಗಣೇಶ 18 ಅಡಿ ಎತ್ತರ ಮತ್ತು 16 ಅಡಿ ಅಗಲವಿದೆ. ದೊಡ್ಡ ಗಣೇಶ ದೇವಸ್ಥಾನವನ್ನು ಶಕ್ತಿ ಗಣಪತಿ ಮತ್ತು ಸತ್ಯ ಗಣಪತಿ ಎಂದು ಸಹ ಕರೆಯುತ್ತಾರೆ.

ಈ ದೇವಾಲಯದಲ್ಲಿ ನೂರು ಕೆ.ಜಿ ಬೆಣ್ಣೆಯನ್ನು ಬಳಸಿ ಮಾಡುವ ಅಲಂಕಾರ ಬಹಳ ವಿಶೇಷವಾಗಿದೆ. ಈ ದೇವಾಲಯವು ದೇಶಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಬೆಳಗ್ಗೆ 6-30 ರಿಂದ ಮಧ್ಯಾಹ್ನ 1-00 ರವರೆಗೆ ಮತ್ತು ಮತ್ತೆ ಸಂಜೆ 4-30 ರಿಂದ ರಾತ್ರಿ 8-00 ರವರೆಗೆ ಭಕ್ತರ ದರ್ಶನಕ್ಕೆ ಅವಕಾಶವಿದೆ. ಇಲ್ಲಿ ನಡೆಯುವ ಕಡಲೆ ಕಾಯಿ ಪರಿಷೆಯು ಬೆಂಗಳೂರಿನ ಅತಿ ದೊಡ್ಡ ಹಬ್ಬಗಳಲ್ಲಿ ಒಂದಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications