Bengaluru: ಆಟೋರಿಕ್ಷಾ ಹೆಚ್ಚುವರಿ ಬಾಡಿಗೆಗೆ ಜಗಳ: ಒಡಿಶಾ ಪ್ರಯಾಣಿಕನನ್ನು ಕೊಂದ ಚಾಲಕನ ಬಂಧನ
ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ ಕರೆದಲ್ಲಿಗೆ ಆಟೋ ಚಾಲಕರು ಬಾರದಿರುವುದು, ಚಿಲ್ಲರೆ ಹಾಗೂ ಮೀಟರ್ ದರ ವಿಚಾರದಲ್ಲಿ ಪ್ರಯಾಣಿಕರೊಂದಿಗೆ ಸಣ್ಣ ಪುಟ್ಟ ಜಗಳ ಸಹಜ. ಆದರೆ ಕಳೆದ ಭಾನುವಾರ ನಡೆದ ಘಟನೆಯಿಂದಾಗಿ ರಾತ್ರಿ ವೇಳೆ ಆಟೋದಲ್ಲಿ ಪ್ರಯಾಣಿಸಲು ಯೋಚಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಆಟೋ ಚಾಲಕನೊಬ್ಬ ಬಾಡಿಗೆ ವಿಚಾರವಾಗಿ ಯಶವಂತಪುರ ಮೂಲಕ ತನ್ನ ರಾಜ್ಯಕ್ಕೆ ಹೊರಟಿದ್ದ ಪ್ರಯಾಣಿಕನ ಜೊತೆ ಜಳಗವಾಡಿ ಕೊಲೆ ಮಾಡಿದ ಘಟನೆ ಭಾನುವಾರ ನಡೆದಿದೆ. ಪ್ರಕರಣ ಸಂಬಂಧ ಆಟೋ ಚಾಲಕನನ್ನು ಸುಬ್ರಹ್ಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ.

ಒಡಿಶಾ ಮೂಲದ ವ್ಯಕ್ತಿ ಅಮೋದ್ (27) ಮೃತಪಟ್ಟ ದುರ್ದೈವಿ. ಹೊಳೇನರಸೀಪುರದ ನಿವಾಸಿ ಬೆಂಗಳೂರಿನಲ್ಲಿ ಆಟೋ ಓಡಿಸುತ್ತಿದ್ದ ಆರೋಪಿ ಚಾಲಕ ಎಸ್.ಆರ್. ಅಶ್ವಥ್ ಬಂಧಿತ ವ್ಯಕ್ತಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಓಡಿಶಾದಿಂದ ಇತ್ತೀಚೆಗೆ ಅಮೋದ್ ಹಾಗೂ ಅವರ ತಮ್ಮ ಅಯೋಬ್ ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿನ ಚಂದಾಪುರದಲ್ಲಿರುವ ಸಂಬಂಧಿಕರನ್ನು ಭೇಟಿಯಾದ ಬಳಿಕ ಮತ್ತೆ ತಮ್ಮ ರಾಜ್ಯಕ್ಕೆ ಮರಳಲು ಮುಂದಾದ ವೇಳೆ ಈ ಘಟನೆ ನಡೆದಿದೆ.

ಹೆಚ್ಚುವರಿ ಹಣ ವಸೂಲಿಗೆ ನಿಂತ ಚಾಲಕ ಅಶ್ವಥ್
ಭಾನುವಾರ ರಾತ್ರಿ ಸುಮಾರು 11 ಗಂಟೆ ಹೊತ್ತಿಗೆ ಚಂದಾಪುರದಿಂದ ಮೆಜೆಸ್ಟಿಕ್ಗೆ ಬಂದಿದ್ದರು. ಅವರು ಯಶವಂತಪುರ ರೈಲು ನಿಲ್ದಾಣದಿಂದ ರೈಲು ಹತ್ತಿ ಒಡಿಶಾಗೆ ತೆರಳಲಿದ್ದರು. ಈ ಸಂಬಂಧ ಯಶವಂತಪುರ ಕಡೆಗೆ ಹೋಗಲು ಬಂಧಿತ ಆರೋಪಿ ಅಶ್ವಥ್ ಆಟೋಗೆ (ನಂಬರ್ KA 01 AL 6094) ಕೈ ಮಾಡಿ ನಿಲ್ಲಿಸಿದ್ದಾರೆ.
ಈ ವೇಳೆ ಯಶವಂತಪುರಕ್ಕೆ ತಮ್ಮನ್ನು ಬಿಡಲು ಅಮೋದ್ 100 ರೂಪಾಯಿಗೆ ಬಾಡಿಗೆ ಮಾತನಾಡಿದ್ದರು. ಇದಕ್ಕೆ ಚಾಲಕ ಸಹ ಒಪ್ಪಿದ್ದ. ಬಳಿಕ ಯಶವಂತಪುರದತ್ತ ಆಟೋ ಪ್ರಯಾಣ ಆರಂಭಿಸಿತು. ಮಾರ್ಗಮಧ್ಯೆ ಆಟೋ ನಿಲ್ಲಿಸಿದ್ದ ಚಾಲಕ ಅಶ್ವಥ್, ಯಶವಂತಪುರಕ್ಕೆ ಕರೆದೊಯ್ಯಲು ಒಬ್ಬರಿಗೆ 1500 ರೂಪಾಯಿ ಆಗುತ್ತದೆ. ನೀವಿಬ್ಬರಿದ್ದು, ಒಟ್ಟು 3000 ರೂಪಾಯಿ ನೀಡಬೇಕೆಂದು ಒತ್ತಾಯಿಸಿದ್ದ.
ಸಹೋದರರ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಮೋದ್ ಹೆಚ್ಚುವರಿ ಹಣ ಕೊಡಲು ಒಪ್ಪಲಿಲ್ಲ. ಮಾತಿನಂತೆ 100 ರೂಪಾಯಿ ಕೊಡುವುದಾಗಿ ಹೇಳಿದ್ದ. ಈ ಸಂಬಂಧ ಚಾಲಕ ಅಶ್ವಥ್ ಹಾಗೂ ಅಮೋದ್ ಸಹೋದರರ ಜೊತೆಗೆ ಜಗಳಕ್ಕೆ ಇಳಿದಿದ್ದ. ಈ ವೇಳೆ ಅಮೋದ್ ಮತ್ತು ಚಾಲಕ ಅಶ್ವಥ್ ಮಧ್ಯೆ ಮಾತಿಗೆ ಮಾತು ಬೆಳೆದಿದೆ.
ಆಟೋ ಚಾಲಕ ಅಮೋದ್ಗೆ ಮನ ಬಂದಂತೆ ಥಳಿಸಿದ್ದಾನೆ. ಇದನ್ನು ಬಿಡಿಸಲು ಹೋದ ಸಹೋದರ ಅಯೋಬ್ ಮೇಲೂ ಚಾಲಕ ಹಲ್ಲೆ ಮಾಡಿದ್ದ. ಬಳಿಕ ಇಬ್ಬರು ಸಹೋದರರು ಓಡಲು ಆರಂಭಿಸಿದರು. ಓಡಿ ಸುಸ್ತಾಗಿ ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿ ಬಿದ್ದಿದ್ದರು. ಬಳಿಕ ಅವರನ್ನು ಸ್ಥಳೀಯ ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮೋದ್ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಆಟೋ ಚಾಲಕ ಅಶ್ವಥ್ ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications