ಹಂದಿಜ್ವರ ರೋಗಿಯ ಪ್ರಾಣ ತೆಗೆದ ಕರೆಂಟ್ ಕಣ್ಣಾಮುಚ್ಚಾಲೆ?
ಬೆಂಗಳೂರು, ಮಾ. 1 : ಎಚ್ 1 ಎನ್ 1 ನಿಂದ ಬಳಲುತ್ತಿದ್ದ ಬೆಂಗಳೂರು ಬಾಪೂಜಿ ನಗರ ನಿವಾಸಿ ಗಣೇಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರೋಗಿಯ ಸಾವಿಗೆ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಪತ್ನಿ ಉಮಾ ಗಂಭೀರ ಆರೋಪ ಮಾಡಿದ್ದಾರೆ.
ಎಚ್ 1 ಎನ್ 1 ನಿಂದ ಬಳಲುತ್ತಿದ್ದ ಗಣೇಶ್ ಕಳೆದ 9 ದಿನಗಳ ಹಿಂದೆ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶನಿವಾರ ರಾತ್ರಿ ಐಸಿಯು ನಲ್ಲಿದ್ದಾಗಲೇ ಮೃತಪಟ್ಟಿದ್ದಾರೆ.[ಬೆಂಗಳೂರು: ಹಂದಿ ಜ್ವರ ಔಷಧ ಲಭ್ಯವಿರುವ ಆಸ್ಪತ್ರೆ ಪಟ್ಟಿ]

ರಾತ್ರಿ ವಿದ್ಯುತ್ ನಿಲುಗಡೆಯಾಗಿದ್ದು ಸಮಸ್ಯೆಯಾಗಿ ಪರಿಣಮಿಸಿದೆ. ಕೂಡಲೇ ಗಣೇಶ್ ಅವರಿಗೆ ಉಸಿರಾಟದ ತೊಂದರೆ ಆರಂಭವಾಗಿದೆ, ಗಣೇಶ್ ಪತ್ನಿ ಉಮಾ ಜನರೇಟರ್ ಹಾಕುವಂತೆ ವೈದ್ಯರು ಮತ್ತು ಸಿಬ್ಬಂದಿ ಬಳಿ ಮನವಿ ಮಾಡಿದ್ದಾರೆ. ಆದರೆ ಯಾರೂ ಜನರೇಟರ್ ಆನ್ ಮಾಡಿಲ್ಲ. ಪರಿಣಾಮ ಉಸಿರಾಟದ ತೊಂದರೆಯಿಂದ ಗಣೇಶ್ ಮೃತಪಟ್ಟಿದ್ದಾರೆ.
ಗಣೇಶ್ ಸಾವಿಗೆ ವೈದ್ಯರು ಮತ್ತು ಸಿಬ್ಬಂದಿಯೇ ನೇರ ಹೊಣೆಗಾರಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿಗೆ ರೋಗಿಗಳ ಮೇಲೆ ಮಾನವೀಯತೆಯೇ ಇಲ್ಲ. ಸಂಬಂಧಿಸಿದವರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.[ಹಂದಿ ಜ್ವರ: ಏನು ಮಾಡಬೇಕು? ಏನು ಮಾಡಬಾರದು?]
ಶನಿವಾರ ರಾತ್ರಿ ವಿದ್ಯುತ್ ಸಮಸ್ಯೆಯಾಗಿದ್ದು ನಿಜ. ಆದರೆ ಆಸ್ಪತ್ರೆಯಲ್ಲಿ ಸಕಲ ಪರ್ಯಾಯ ವ್ಯವಸ್ಥೆಗಳಿವೆ. ರೋಗಿ ಸಾವಿಗೂ ವಿದ್ಯುತ್ ನಿಲುಗಡೆಗೂ ಯಾವುದೇ ಸಂಬಂಧವಿಲ್ಲ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಕಲ ಮಾಹಿತಿ ಸಂಗ್ರಹಿಸಿ, ತನಿಖೆ ನಡೆಸಿ ಸಂಬಂಧಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications