ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜರಾಜೇಶ್ವರಿ ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

By Mahesh
|
Google Oneindia Kannada News

ಬೆಂಗಳೂರು, ಜನವರಿ 11: ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 24 ವರ್ಷ ವಯಸ್ಸಿನ ನಿರ್ಮಲಾ ಎಂದು ಗುರುತಿಸಲಾಗಿದೆ.

ಒಂದೂವರೆ ವರ್ಷದ ಹಿಂದೆ ಚಿತ್ರದುರ್ಗ ಮೂಲದ ವಿಶ್ವನಾಥ್​​​ ಜತೆ ವಿವಾಹವಾಗಿದ್ದ ನಿರ್ಮಲಾ ಅವರು ತಮ್ಮ ಸಾವಿಗೆ ಅತ್ತೆ -ಮಾವನ ಕಿರುಕುಳವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಪತಿ ವಿಶ್ವನಾಥ್ ಅವರು ಆಗಾಗ ಕೆಲಸದ ನಿಮಿತ್ತ ಜಪಾನ್ ಗೆ ಹೋಗುತ್ತಿರುತ್ತಾರೆ ಎಂದು ತಿಳಿದು ಬಂದಿದೆ.

A housewife commits suicide in Rajarajeshwari Nagar
ಕಳೆದೆರಡು ದಿನದ ಹಿಂದಷ್ಟೆ ಪತಿ ಬೆಂಗಳೂರಿಗೆ ಬಂದಿದ್ದ ವಿಶ್ವನಾಥ್ ಅವರು ಜಪಾನ್ ​​ಗೆ ತೆರಳಿದ ಬಳಿಕ ಬುಧವಾರ ರಾತ್ರಿ ವೇಳೆ ನಿರ್ಮಲಾ ಅವರು ರೂಮಿನಲ್ಲಿರುವ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

'ನಿರ್ಮಲಾ ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್​​​​​ನೋಟ್ ಹರಿಯಲಾಗಿದ್ದು, ಕಸದ ಬುಟ್ಟಿಗೆ ಎಸೆಯಲಾಗಿತ್ತು. ಮೃತರ ಅತ್ತೆ ಮಾವ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ವರದಕ್ಷಿಣೆ ಕಿರುಕುಳದ ಆರೋಪದ ಬಗ್ಗೆ ತನಿಖೆ ನಂತರ ತಿಳಿದು ಬರಲಿದೆ ಎಂದು ರಾಜರಾಜೇಶ್ವರಿ ನಗರ ಪೊಲೀಸರು ಹೇಳಿದರು.

English summary
A 24-year-old housewife committed suicide by hanging herself at her residence in Rajarajeshwari Nagar on Wednesday. The deceased has been identified as Nirmala wife of Vishwanth. In-laws are blamed in her suicide and Rajarajeshwari Nagar police have detained accused and investigating about alleged dowry harassment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X