ಬೆಂಗಳೂರಿನ ಈ ಐನಾತಿ ಕಳ್ಳನಿಗೆ ಕ್ರೈಂ ಸ್ಟೋರಿಗಳೇ ಸ್ಫೂರ್ತಿ!
ಬೆಂಗಳೂರು, ಜನವರಿ.26: ಸೋಷಿಯಲ್ ಮೀಡಿಯಾವನ್ನು ಜನರು ಸಿಕ್ಕಾಪಟ್ಟೆ ಬಳಸುತ್ತಾರೆ. ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಗಳು ಸರ್ವೇ ಸಾಮಾನ್ಯ. ಇದನ್ನೇ ಬಳಸಿಕೊಂಡು ಬೆಂಗಳೂರಿನಲ್ಲಿ ಐನಾತಿ ಕಳ್ಳನೊಬ್ಬ ಮನೆಮನೆಗೂ ನುಗ್ಗಿ ತನ್ನ ಕೈಚಳಕ ತೋರುತ್ತಿದ್ದನು.
ಬೆಂಗಳೂರು ಬನಶಂಕರಿ ಪೊಲೀಸ್ ಠಾಣೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳನಿಗೆ ಕ್ರೈಂ ಸ್ಟೋರಿಗಳೇ ಸ್ಫೂರ್ತಿಯಂತೆ. ಟಿವಿ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಈತ ಕ್ರೈಂ ಸ್ಟೋರಿಗಳನ್ನು ನೋಡುತ್ತಿದ್ದ. ಬೆಳಗ್ಗೆ ಸ್ಟೋರಿಗಳನ್ನು ನೋಡಿ, ರಾತ್ರೋರಾತ್ರಿ ಮನೆಗೆ ನುಗ್ಗುತ್ತಿದ್ದ ಎಂಬ ಆಘಾತಕಾರಿ ವಿಚಾರ ಹೊರ ಬಿದ್ದಿದೆ.
ಸಿಲಿಕಾನ್ ಸಿಟಿಯಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಅಪ್ ಡೇಟೆಂಡ್ ಕಳ್ಳ ಕಿರಣ್ ನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರ ಬಲೆಗೆ ಕಳ್ಳ ಸರಿಯಾಗಿ ತಗ್ಲಾಕೊಂಡಿದ್ದಾನೆ.

ವೃದ್ಧೆಯ ಮನೆಗೆ ನುಗ್ಗಿದ್ದ ಆಸಾಮಿ ಅರೆಸ್ಟ್:
ಬೆಂಗಳೂರಿನಲ್ಲಿ ಒಂಟಿ ಮಹಿಳೆಯರು ಇರುವ ಮನೆಗಳನ್ನೇ ಆರೋಪಿ ಕಿರಣ್ ಟಾರ್ಗೆಟ್ ಮಾಡಿಕೊಂಡಿದ್ದನು. ಇತ್ತೀಚಿಗೆ ವೃದ್ಧೆಯೊಬ್ಬರ ಮನೆಗೆ ನುಗ್ಗಿದ್ದ ಆರೋಪಿ ಕಿರಣ್, ವೃದ್ಧೆಯ ಕೈ-ಕಾಲುಗಳನ್ನು ಕಟ್ಟಿಹಾಕಿ ಕಳ್ಳತತ ಮಾಡಿ ಎಸ್ಕೇಪ್ ಆಗಿದ್ದನು. ಮನೆಯಲ್ಲಿನ ಸಿಸಿ ಕ್ಯಾಮರಾ ದೃಶ್ಯಗಳನ್ನು ಆಧಾರವಾಗಿಟ್ಟುಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಂತರ ವಿಚಾರಣೆ ನಡೆಸಿದಾಗ ಸೋಷಿಯಲ್ ಮೀಡಿಯಾಗಳಲ್ಲಿ ಕಳ್ಳತನದ ಬಗ್ಗೆ ಕಿರಣ್ ತಿಳಿದುಕೊಳ್ಳುತ್ತಿದ್ದನು. ಕ್ರೈಂ ಸ್ಟೋರಿಗಳನ್ನು ನೋಡಿಕೊಂಡು ಕಳ್ಳತನ ಮಾಡೋದನ್ನು ಕಲಿತಿದ್ದ ಎಂದು ತಿಳಿದು ಬಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications