ವಿಡಿಯೋ: ಕೆಆರ್ ಪುರಂ ನಿಲ್ದಾಣದಲ್ಲಿ ರೈಲಿಗೆ ಸಿಲುಕಬೇಕಾಗಿದ್ದ ವ್ಯಕ್ತಿ ರಕ್ಷಣೆ
ಬೆಂಗಳೂರು, ಜುಲೈ 17: ರೈಲಿಗೆ ಸಿಲುಕಬೇಕಾಗಿದ್ದ ವ್ಯಕ್ತಿಯನ್ನು ಸಮಯ ಪ್ರಜ್ಞೆಯಿಂದ ರೈಲ್ವೆ ಸಿಬ್ಬಂದಿ ರಕ್ಷಿಸಿದ ಘಟನೆ ಬೆಂಗಳೂರಿನ ಕೆಆರ್ ಪುರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ರೈಲ್ವೆ ಸಚಿವಾಲಯ ವಿಡಿಯೋ ಹಂಚಿಕೊಂಡಿದ್ದು ಈಗ ವೈರಲ್ ಆಗಿದೆ.
28 ಸೆಕೆಂಡ್ಗಳ ಸಿಸಿಟಿವಿ ದೃಶ್ಯಾವಳಿಯಲ್ಲಿ, ಬೆಂಗಳೂರಿನ ಕೆಆರ್ ಪುರ ನಿಲ್ದಾಣದಲ್ಲಿ ರೈಲ್ವೆ ನೌಕರರು ಪ್ಲಾಟ್ಫಾರ್ಮ್ನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವರಲ್ಲಿ ಒಬ್ಬರು ಇದ್ದಕ್ಕಿದ್ದಂತೆ ತಿರುಗಿ ನೋಡಿದಾಗ ಪ್ಲಾಟ್ಫಾರ್ಮ್ಗೆ ಏರಲು ಪ್ರಯತ್ನಿಸುವಾಗ ಕಾಲು ಜಾರಿ ಬಿದ್ದ ವ್ಯಕ್ತಿಯನ್ನು ನೋಡಿದರು.
ಸಮವಸ್ತ್ರದಲ್ಲಿದ್ದ ಇಬ್ಬರು ವ್ಯಕ್ತಿಗಳು ವ್ಯಕ್ತಿಯನ್ನು ರಕ್ಷಿಸಲು ಪ್ಲಾಟ್ಫಾರ್ಮ್ನಿಂದ ಹಳಿಗಳ ಮೇಲೆ ಹಾರಿದರು. ರೈಲ್ವೆ ಸಿಬ್ಬಂದಿ ಮತ್ತು ಫ್ಲಾಟ್ಫಾರ್ಮ್ನಲ್ಲಿದ್ದ ಇತರರು ವ್ಯಕ್ತಿಯ ಜೀವ ಉಳಿಸಲು ರೈಲ್ವೆ ಹಳಿ ಕಡೆಗೆ ಓಡಿ ಬಂದರು.

ರೈಲು ಬರುವ ಕೆಲವೇ ಸೆಕೆಂಡ್ಗಳ ಮೊದಲು, ಹಳಿಯಿಂದ ವ್ಯಕ್ತಿಯನ್ನು ಫ್ಲಾಟ್ಫಾರ್ಮ್ ಮೇಲಕ್ಕೆ ಎಳೆದುಕೊಂಡಿದ್ದಾರೆ. ಕೆಲವು ಸೆಕೆಂಡ್ ತಡವಾಗಿದ್ದರು ಅನಾಹುತವೇ ಸಂಭವಿಸುವ ಅಪಾಯವಿತ್ತು.
"ಬೆಂಗಳೂರಿನ ಕೆಆರ್ ಪುರ ರೈಲು ನಿಲ್ದಾಣದಲ್ಲಿ ರೈಲು ಬರುವ ಕೆಲವೇ ಸೆಕೆಂಡ್ಗಳ ಮೊದಲು ಆರ್ಪಿಎಫ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಹಳಿಗಳ ಮೇಲೆ ಜಾರಿ ಬಿದ್ದ ವ್ಯಕ್ತಿಯ ಅಮೂಲ್ಯ ಜೀವವನ್ನು ಉಳಿಸಿದೆ" ಎಂದು ರೈಲ್ವೇ ಸಚಿವಾಲಯ ಟ್ವಿಟರ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ.
Prompt response by RPF personnel saved the precious life of a man who slipped and fell on tracks minutes before the arrival of a train at KR Puram Railway Station, Bengaluru. pic.twitter.com/P0CXy3JfvH
— Ministry of Railways (@RailMinIndia) July 16, 2022
ರಕ್ಷಣೆ ಮಾಡುವ ವಿಡಿಯೋ ವೈರಲ್; ಕೆಲವೇ ಸೆಕೆಂಡ್ ತಡವಾಗಿದ್ದರು ವ್ಯಕ್ತಿ ರೈಲೆಗೆ ಸಿಲುಕುವ ಅಪಾಯವಿತ್ತು. ವ್ಯಕ್ತಿ ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದನೋ, ಅಥವಾ ಉದ್ದೇಶಪೂರ್ವಕವಾಗಿ ಬಿದ್ದಿದ್ದಾನೋ ಎಂದು ವಿಡಿಯೋದಿಂದ ಸ್ಪಷ್ಟವಾಗಿಲ್ಲ. ಈ ವೀಡಿಯೊ ಟ್ವಿಟರ್ನಲ್ಲಿ ಇದುವರೆಗೆ ಸುಮಾರು 11,500 ಲೈಕ್ಗಳನ್ನು ಮತ್ತು 1,400 ಕ್ಕೂ ಹೆಚ್ಚು ರೀಟ್ವೀಟ್ಗಳನ್ನು ಪಡೆದುಕೊಂಡಿದೆ.
ಇದೇ ರೀತಿಯ ಪ್ರಯತ್ನಗಳ ವಿಡಿಯೋಗಳನ್ನು ಹೆಚ್ಚಾಗಿ ರೈಲ್ವೆ ಸಚಿವಾಲಯವು ಹಂಚಿಕೊಳ್ಳುತ್ತದೆ. ಕಳೆದ ತಿಂಗಳು ರೈಲ್ವೇ ಸಿಬ್ಬಂದಿಯೊಬ್ಬರು ಮುಂದೆ ಬರುತ್ತಿದ್ದ ಗೂಡ್ಸ್ ರೈಲಿಗೆ ಹಸಿರು ನಿಶಾನೆ ತೋರುತ್ತಿದ್ದಾಗ ರೈಲ್ವೆ ಹಳಿಯ ಮೇಲೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ಧಾವಿಸುತ್ತಿದ್ದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿತ್ತು. ರೈಲು ಬರುವ ಕೆಲವೇ ಸೆಕೆಂಡ್ಗಳ ಮೊದಲು ರೈಲ್ವೆ ಹಳಿಗಳ ಮೇಲೆ ಹಾರಿದ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದರು.
ರೈಲ್ವೆ ಸಿಬ್ಬಂದಿಯ ಸಮಯ ಪ್ರಜ್ಞೆಗೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಕ್ಷಣೆಯಾದ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ರೈಲ್ವೆ ನಿಲ್ದಾಣಗಳು, ರೈಲ್ವೆ ಹಳಿಗಳ ಸಮೀಪದಲ್ಲಿ ಚಲಿಸುವಾಗ ನಾಗರಿಕರು ಹೆಚ್ಚಿನ ಜಾಗೃತಿ ವಹಿಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications