ಬ್ಯಾಂಕ್ ದರೋಡೆಗೆ ವಿಫಲ ಯತ್ನ, ಗಾರ್ಡ್ ಮೇಲೆ ಹಲ್ಲೆ
ಬೆಂಗಳೂರು, ಜ. 10: ರಾಜಾಜಿನಗರದ ವೀರಶೈವ ಸಹಕಾರ ಬ್ಯಾಂಕ್ನಲ್ಲಿ ಬುಧವಾರ ರಾತ್ರಿ ಕಳ್ಳತನಕ್ಕೆ ಕಳವಿಗೆ ಯತ್ನಿಸಿದವ ಉದ್ದೇಶ ಈಡೇರದೆ ಗಾರ್ಡ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಹಲ್ಲೆಗೀಡಾಗಿರುವ ಕಾವಲುಗಾರ ಮಣಿಕಂಠನ್ (63) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಮತ್ತೋರ್ವ ಸೆಕ್ಯುರಿಟಿ ಗಾರ್ಡ್ ನಾಗೇಶ್ (52) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. [ಸರಗಳ್ಳನಿಗೆ ಗುಂಡೇಟು]
ರಾಜಾಜಿನಗರದ 3ನೇ ಬ್ಲಾಕ್ನ 46ನೇ ಅಡ್ಡ ರಸ್ತೆಯಲ್ಲಿ ವೀರಶೈವ ಸಹಕಾರಿ ಬ್ಯಾಂಕ್ ಕಚೇರಿ ಇದೆ. ಬ್ಯಾಂಕ್ ಇದ್ದ ಕಟ್ಟಡಕ್ಕೆ ಇದ್ದವ ಒಬ್ಬನೇ ಸೆಕ್ಯೂರಿಟಿ ಗಾರ್ಡ್ ಮಣಿ. ರಾತ್ರಿ ಅವರು ಮಲಗಿದ್ದಾಗ 2.30 ಗಂಟೆ ಸಮಯದಲ್ಲಿ ಕಳ್ಳನೋರ್ವ ನಕಲಿ ಕೀಲಿ ಬಳಸಿ ಬ್ಯಾಂಕ್ ಶೆಟರ್ ತೆರೆಯಲು ಯತ್ನಿಸಿದ್ದ. ಆಗ ಉಂಟಾದ ಶಬ್ದಕ್ಕೆ ಎಚ್ಚರಗೊಂಡ ಮಣಿ ಹೊರಬಂದು ಆತನನ್ನು ಹಿಡಿಯಲು ಯತ್ನಿಸಿದರು.

ಗಾಯಗೊಂಡಿದ್ದು ಓರ್ವ, ಮೃತಪಟ್ಟಿದ್ದು ಇನ್ನೋರ್ವ : ತಕ್ಷಣ ಮಣಿ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ. ಆದರೆ, ಪ್ರತಿರೋಧ ಎದುರಾದಾಗ ಕಳ್ಳ ಪರಾರಿಯಾದ. ಗಲಾಟೆ ಕೇಳಿ ಪಕ್ಕದ ಕಟ್ಟಡದ ಸೆಕ್ಯುರಿಟಿ ಗಾರ್ಡ್ ತುಳಸೀರಾಮ್ ಎಂಬುವರು ಓಡಿ ಬಂದರು. ತಕ್ಷಣ ವಿಷಯವನ್ನು ಪೊಲೀಸ್ ಠಾಣೆಗೆ ತಿಳಿಸಿ, ಆತನನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು. [ಟೆಕ್ಕಿಗೆ ಚಾಕುವಿನಿಂದ ಇರಿದು ದರೋಡೆ]
ಅನಂತರ ಬ್ಯಾಂಕ್ ಬಳಿ ಮತ್ತೋರ್ವ ಸೆಕ್ಯುರಿಟಿ ಗಾರ್ಡ್ ನಾಗೇಶ ಎಂಬುವರನ್ನು ನೇಮಿಸಲಾಗಿತ್ತು. ಅವರು ಬೆಳಗಿನ ಜಾವ 5 ಗಂಟೆ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಬ್ಯಾಂಕ್ನಲ್ಲಿ ಸಿಸಿ ಕ್ಯಾಮರಾ ಇರಲಿಲ್ಲ! : ಸಾಮಾನ್ಯವಾಗಿ ಹಣಕಾಸು ವ್ಯವಹಾರ ನಡೆಸುವ ಸಂಸ್ಥೆಗಳು ಭದ್ರತೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತವೆ. ಸಿಸಿ ಕ್ಯಾಮರಾ ಅದರಲ್ಲಿ ಪ್ರಮುಖವಾದುದು. ಆದರೆ, ದರೋಡೆಗೆ ಯತ್ನ ನಡೆಸಿದ್ದ ವೀರಶೈವ ಬ್ಯಾಂಕ್ನಲ್ಲಿ ಸಿಸಿ ಕ್ಯಾಮರಾ ಅಳವಡಿಸಿಲ್ಲ. [ಶೂಟೌಟ್, 7 ಲಕ್ಷ ರು. ದರೋಡೆ]
ಇದು ಪೊಲೀಸ್ ಆಯುಕ್ತರ ಆದೇಶದ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಐಪಿಸಿ ಕಲಂ 188 ಅನ್ವಯ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜಾಜಿನಗರದ ಪೊಲೀಸರು ತಿಳಿಸಿದ್ದಾರೆ.
{promotion-urls}
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications