ತಾನು ತೋಡಿದ ಬಲೆಗೆ ತಾನೇ ಬಿದ್ದ ಈ 'ಶ್ರೀಮಂತ್'
ಮಹಿಳೆಯೊಬ್ಬರಿಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ ಶ್ರೀಮಂತ್ ಎಂಬ ಯುವಕ ತಾನು ತೋಡಿದ ಬಲೆಗೆ ತಾನೇ ಬಿದ್ದಿದ್ದಾನೆ!
ಬೆಂಗಳೂರು, ಮಾರ್ಚ್ 20: ಮಹಿಳೆಯೊಬ್ಬರಿಗೆ ಪದೇ ಪದೇ ಫೊನ್ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದ 22 ವರ್ಷದ ಎನ್. ಶ್ರೀಮಂತ್ ಎಂಬ ಯುವಕನನ್ನು ಬೆಂಗಳೂರಿನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಯಾರಿಗೋ ಫೋನ್ ಮಾಡುವುದಕ್ಕೆ ಹೋಗಿ ನಂಬರ್ ತಪ್ಪಿ, ಈತನ ಮೊಬೈಲ್ ಸಂಖ್ಯೆಗೆ ಮಹಿಳೆ ಫೋನ್ ಮಾಡಿದ್ದಾರೆ. ರಾಂಗ್ ನಂಬರ್ ಎಂಬುದು ತಿಳಿಯುತ್ತಿದ್ದಂತೆಯೇ ಸುಮ್ಮನಾಗಿದ್ದಾರೆ. ಆದರೆ ಆ ಯುವಕ ಮಹಿಳೆಯ ನಂಬರ್ ಅನ್ನು ಸೇವ್ ಮಾಡಿಕೊಂಡು ಪ್ರತಿ ದಿನ ಆಕೆಗೆ ಫೋನ್ ಮಾಡುತ್ತಿದ್ದ. ರಾತ್ರಿ - ಹಗಲು ಎನ್ನದೆ ಯಾವ್ಯಾವುದೋ ಸಮಯದಲ್ಲಿ ಫೋನ್ ಮಾಡಿ ಅಸಭ್ಯವಾಗಿ ಮಾತನಾಡುವುದಲ್ಲದೆ, ಲೈಂಗಿಕ ಆಸೆಯನ್ನು ಈಡೇರಿಸುವಂತೆ ಬೇಡಿಕೆ ಇಟ್ಟಿದ್ದ.[ಮತ್ತೆ ಬೆಂಗಳೂರಲ್ಲಿ ಯುವತಿಗೆ ಲೈಂಗಿಕ ಕಿರುಕುಳ?!]

ಮೊದ ಮೊದಲು ಈತನನ್ನು ನಿರ್ಲಕ್ಷ್ಯಿಸಿ ಸುಮ್ಮನಾದರೂ ಕ್ರಮೇಣ ಈತನ ಅಸಭ್ಯ ಮಾತುಗಳು ಹೆಚ್ಚುತ್ತಿದ್ದಂತೆ ಗಾಬರಿಯಾದ ಮಹಿಳೆ ಪತಿಗೆ ವಿಷಯ ತಿಳಿಸಿದರು. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ದಂಪತಿ ದೂರು ನೀಡಿದರು. ಪೀಣ್ಯದ ಪೊಲೀಸರ ಉಪಾಯದ ಮೇರೆಗೆ 'ನಿನ್ನ ಬೇಡಿಕೆಗೆ ನಾನು ಒಪ್ಪಿಕೊಂಡಿದ್ದೇನೆ, ನಾಳೆ ಬೆಳಗ್ಗೆ ಪೀಣ್ಯದ ಎಂಟನೇ ಮೈಲಿಯ ಬಳಿ ಬಂದಿರುತ್ತೇನೆ, ಭೇಟಿಯಾಗೋಣ' ಎಂದು ಮಹಿಳೆ ಶ್ರೀಮಂತ್ ಬಳಿ ಹೇಳಿದ್ದಾಳೆ.
ಆಕೆಯ ಮಾತನ್ನು ನಂಬಿದ ಶ್ರೀಮಂತ್ ಇಂದು ಬೆಳಗ್ಗೆ ಎಂಟನೇ ಮೈಲಿ ಬಳಿ ಬಂದಿದ್ದಾನೆ. ಮೊದಲೇ ಅಲ್ಲಿಗೆ ಬಂದು ಆರೋಪಿಗಾಗಿ ಕಾಯುತ್ತಿದ್ದ ಪೊಲೀಸರು ಶ್ರೀಮಂತ್ ನನ್ನು ಬಂಧಿಸಿದ್ದಾರೆ. ಒಟ್ಟಿನಲ್ಲಿ ತಾನು ತೋಡಿದ ಬಲೆಯೊಳಗೆ ಶ್ರೀಮಂತ್ ತಾನೇ ಸಿಕ್ಕಿಹಾಕಿಕೊಂಡಿದ್ದಾನೆ!
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications