ಫ್ರೀಡಂ ಪಾರ್ಕಿನಲ್ಲಿ ಭಗತ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ
ಬೆಂಗಳೂರು, ಸೆ. 28: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮ ದಿನೋತ್ಸವದ ಅಂಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕಿನ ಆವರಣದಲ್ಲಿ 15 ಅಡಿ ಎತ್ತರದ ಪ್ರತಿಮೆ ರೂಪದ ಸ್ಮಾರಕ ನಿರ್ಮಾಣ ಕಾರ್ಯ ಆರಂಭಗೊಂಡಿದೆ.
ಯುವ ಜನತೆಗೆ ಸ್ಫೂರ್ತಿಯಾಗಿರುವ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಸವಿನೆನಪಿನಲ್ಲಿ ರಾಷ್ಟ್ರೀಯ ಚಾಲಕರ ಯೂನಿಯನ್ ಈ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ. ಶಿಲ್ಪಿ ಜಾನ್ ದೇವರಾಜ್ ಅವರು ಈ ಪ್ರತಿಮೆ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

ದೇಶದ ಯುವ ಜನತೆ, ದಕ್ಷ ಅಧಿಕಾರಿಗಳು, ದೇಶಭಕ್ತ ನಾಗರಿಕರು, ಸೆಲೆಬ್ರಿಟಿಗಳು ಪ್ರತಿಮೆ ನಿರ್ಮಾಣಕ್ಕೆ ಸಿಮೆಂಟ್ ಹಾಕುವ ಮೂಲಕ ತಮ್ಮ ಕೈಜೋಡಿಸಲಿದ್ದಾರೆ. ಇದು ಯುವಜನತೆಗೆ ಸಂತಸದ ವಿಷಯವಾಗಿದೆ ಎಂದು ಡ್ರೈವರ್ಸ್ ಯೂನಿಯನ್ ನ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಹೇಳಿದರು.

ಸೆ.28ರಿಂದ ಅಕ್ಟೋಬರ್ 02ರ ತನಕ ಭಗತ್ ಸಿಂಗ್ ಹುಟ್ಟುಹಬ್ಬದ ಆಚರಣೆಯನ್ನು ಫ್ರೀಡಂ ಪಾರ್ಕಿನಲ್ಲಿ ಆಚರಿಸಲಾಗುತ್ತಿದೆ. ಗುರುವಾರದ ಕಾರ್ಯಕ್ರಮದಲ್ಲಿ ಮಾಜಿ ಸೂಪರ್ ಕಾಪ್ ಹಾಲಿ ಕೆಪಿಸಿಸಿ ಉಪಾಧ್ಯಕ್ಷ ಎಚ್ ಟಿ ಸಾಂಗ್ಲಿಯಾನ, ಜಾನ್ ದೇವರಾಜ್, ಸಾಮಾಜಿಕ ಕಾರ್ಯಕರ್ತ ಕಿಶೋರ್ ಜೋಸೆಫ್, ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಉದಯ್ ಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications