ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಬೆಂಗಳೂರು, ಏಪ್ರಿಲ್ 13: ಸಂಜೋಗ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯು ಮತ್ತು ಗೋಡ್ಖಿಂಡಿ ಮ್ಯುಸಿಕ್ & ಎಜುಟೇನ್ಮೆಂಟ್ ಪ್ರೈ. ಲಿ. ಇವರ ಸಹಯೋಗದೊಂದಿಗೆ ದಿವಂಗತ ಪಂ. ವೆಂಕಟೇಶ ಗೋಡ್ಖಿಂಡಿಯವರಿಗೆ ಮೊದಲನೇ ಸ್ವರಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಏಪ್ರಿಲ್ 15 ರಂದು ಜೆ.ಎಸ್.ಎಸ್. ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದೆ.
ಖ್ಯಾತ ಕೊಳಲುವಾದಕರಾದ ಪ್ರವೀಣ್ ಗೋಡ್ಖಿಂಡಿ ಹಾಗೂ ಅವರ ಶಿಷ್ಯವೃಂದದವರು ಈ ಕಾರ್ಯಕ್ರಮ ಜಯನಗರದ 8ನೇ ಹಂತದಲ್ಲಿರುವ ಜೆ.ಎಸ್.ಎಸ್ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಆಯೋಜಿಸಿದ್ದಾರೆ.[ಪಂಡಿತ್ ಗೋಡ್ಖಿಂಡಿರಿಂದ ವಿಶಿಷ್ಟ ಸಂಗೀತ ಸಾಹಸ ಘೋಷಣೆ]
ಸಂಜೋಗ್ ಸಂಸ್ಥೆಯ ವಿದ್ಯಾರ್ಥಿಗಳಲ್ಲದೇ ನಾಡಿನ ಅನೇಕ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದು ಸಂಗೀತಾಸಕ್ತರಿಗೆ ಅವಿಸ್ಮರಣೀಯ ಅನುಭವ ನೀಡಲಿದ್ದಾರೆ. ದಿನದ ಮೊದಲನೇ ಭಾಗದಲ್ಲಿ ನಾಡಿನ ಹೆಸರಾಂತ ಮೃದಂಗ ವಾದಕ ವಿದ್ವಾನ್ ಆನೂರು ಅನಂತಕೃಷ್ಣ ಶರ್ಮಾ ಅವರಿಂದ "ಲಯ - ಸೌಂದರ್ಯ ಮತ್ತು ಸೃಜನಾತ್ಮಕತೆ" ಈ ಕುರಿತು ಪ್ರಾತ್ಯಕ್ಷಿಕೆ ಹಾಗೂ ಸಂವಾದ ನಡೆಸಿಕೊಡಲಿದ್ದಾರೆ.

ಪಂಡಿತ್ ಪ್ರವೀಣ ಗೋಡ್ಖಿಂಡಿ ಈ ಸಂವಾದದ ನಿರ್ವಹಣೆ ಮಾಡಲಿದ್ದಾರೆ. ತದನಂತರ ವಿದ್ವಾನ್ ಆನೂರು ಅನಂತಕೃಷ್ಣ ಶರ್ಮಾ ಅವರು ತಮ್ಮ ಶಿಷ್ಯರೊಂದಿಗೆ ಒಂದು ವಿಶೇಷವಾದ ತನಿ ಆವರ್ತನ ಪ್ರಸ್ತುತ ಪಡಿಸಲಿದ್ದಾರೆ. ತದನಂತರ ಸಿತಾರ್ ಮತ್ತು ಸಂತೂರ್ ಜುಗಲಬಂದಿ ಕಾರ್ಯಕ್ರಮ ನಡೆಸಿಕೊದಲಿದ್ದಾರೆ ಸಂಜೀವ ಕೊರ್ತಿ ಹಾಗೂ ಅಶ್ವಿನ್ ವಾಲಾವಲ್ಕರ್.[ಪ್ರವೀಣ್ ಗೊಡ್ಖಿಂಡಿ 'ಗಾಡ್ಸ್ ಬನ್ಸಿ' ನಿನಾದ]
ಮಧ್ಯಾನ್ಹ 3.30 ರಿಂದ ಮಹಾವಿದ್ಯಾಲಯದ ಶಿಷ್ಯವೃಂದ ಗಾಯನ ಮತ್ತು ಬಾನ್ಸುರಿ ಕಾರ್ಯಕ್ರಮ, ಹಾಗೂ ಕಿರಣ್ ಗೋಡ್ಖಿಂಡಿ ಅವರು ತಬಲಾ ಸೋಲೊ ಪ್ರಸ್ತುತ ಪಡಿಸಲಿದ್ದಾರೆ. ಸಂಜೆಯ ಕಾರ್ಯಕ್ರಮದಲ್ಲಿ ಒಂದು ವಿನೂತನ ವಾದ್ಯವನ್ನು ಲೋಕಾರ್ಪಣೆ ಮಾಡಲಿದ್ದಾರೆ ಉದಯಶಂಕರ್.
ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಪಂಡಿತ್ ವೆಂಕಟೇಶ ಗೋಡ್ಖಿಂಡಿಯವರಿಗೆ ಸ್ವರ ಶ್ರದ್ಧಾಂಜಲಿ
ಮುಂಬಯಿಯ ಹೆಸರಾಂತ ಹಿಂದುಸ್ಥಾನಿ ಶಾಸ್ತ್ರೀಯ ಗಾಯಕಿ ವಿದುಶಿ ಗೌರೀ ಪಠಾರೆ ತಮ್ಮ ಸುಶ್ರಾವ್ಯ ಗಾಯನದ ಮೂಲಕ ಸಂಗೀತಾಸಕ್ತರಿಗೆ ರಸದೌತಣ ಉಣಬಡಿಸಲಿದ್ದಾರೆ.
ಕಾರ್ಯಕ್ರಮದ ಮುಕ್ತಾಯ ಪಂ ಪ್ರವೀಣ್ ಗೋಡ್ಖಿಂಡಿ ಹಾಗೂ ಅವರ ಮಗ ಕುಮಾರ್ ಶಡಜ್ ಗೋಡ್ಖಿಂಡಿ ಅವರ ಬಾಂಸುರಿ ಜುಗಲಬಂದಿ ನಡೆಯಲಿದ್ದು, ಇವರಿಗೆ ತಬಲಾ ಸಾಥ ನೀಡಲಿದ್ದಾರೆ ಹೆಸರಾಂತ ತಬಲಾ ವಾದಕರು ಪಂ. ರವೀಂದ್ರ ಯಾವಗಲ್ ಹಾಗೂ ಅವರ ಮಗ ಕಿರಣ ಯಾವಗಲ್, ಕಿರಣ ಗೋಡ್ಖಿಂಡಿ, ಪ್ರದ್ಯುಮ್ನ ಸೊರಬ ಹಾಗೂ ವಿಕಾಸ್ ನರೆಗಲ್ ಕೂಡ ಈ ಕಾರ್ಯಕ್ರಮದಲ್ಲಿ ತಬಲಾ ವಾದಕರಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಪಾತ್ರರಾಗಬೇಕೆಂದು ಸಂಜೋಗ್ ಸಂಸ್ಥೆ ಕೇಳಿಕೊಳ್ಳುತ್ತದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications