ರಸ್ತೆಗುಂಡಿ ಮುಚ್ಚಲು ಬಿಬಿಎಂಪಿ ಬಳಿ ಹೊಸ ಬಗೆಯ ಯಂತ್ರ
ಬೆಂಗಳೂರು, ಜನವರಿ 9: ಬಿಬಿಎಂಪಿ ರಸ್ತೆ ಗುಂಡಿಗಳನ್ನು ಮುಚ್ಚುವುದೇ ಒಂದು ಸವಾಲಾಗಿದೆ.
ಒಂದೆಡೆ ಗುಂಡಿ ಮುಚ್ಚುತ್ತಿದ್ದಂತೆ ಇನ್ನೊಂದೆಡೆ ರಸ್ತೆ ಮತ್ತೆ ಬಾಯ್ತೆರೆದುಕೊಳ್ಳುತ್ತಿದೆ. ಹಾಗೂ ಎಲ್ಲಾ ರಸ್ತೆಗುಂಡಿಗಳನ್ನು ಬೇಗ ಮುಚ್ಚಸಲು ಸಾಧ್ಯವಾಗದ ಕಾರಣ ಹೊಸ ಯಂತ್ರವನ್ನು ಬಳಕೆ ಮಾಡುತ್ತಿದೆ.
ಹೈಕೋರ್ಟ್ ಛಾಟಿ ಬೀಸಿದ ಬೆನ್ನಲ್ಲೇ ರಸ್ತೆ ಗುಂಡಿ ಮುಚ್ಚಲು ಹೊಸ ಉಪಾಯ ರೂಪಿಸಿದೆ ಅದರಂತೆ ರಸ್ತೆಗುಂಡಿಗಳನ್ನು ಮುಚ್ಚುತ್ತಿದೆ.

ಹೈಕೋರ್ಟ್ ಕೊಟ್ಟ ಟಾರ್ಗೆಟ್ನಲ್ಲಿ ಯಾವ ಕೆಲಸವೂ ಆಗಿಲ್ಲ
ರಸ್ತೆ ಗುಂಡಿ ಮುಚ್ಚಲು ಟಾರ್ಗೆಟ್ ಕೊಟ್ಟರು ಸಹ ಸಾಧ್ಯವಾಗುತ್ತಿಲ್ಲ. ಸಿಬ್ಬಂದಿ ಕೊರತೆ, ಕಾರ್ಮಿಕರ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ನಗರದಲ್ಲಿ ಇನ್ನೂ ಸಾವಿರಾರು ರಸ್ತೆಗಳು ಗುಂಡಿಗಳು ಬಾಯಿ ತೆರೆದು ನಿಂತಿವೆ. ಹೇಗಾದರೂ ಮಾಡಿ ಈ ಸಮಸ್ಯೆ ಪರಿಹರಿಸಬೇಕೆಂದು ಬಿಬಿಎಂಪಿ ವಿವಿಧ ಉಪಾಯಗಳ ಮೊರೆ ಹೋಗುತ್ತಿದೆ.

ರಸ್ತೆಗುಂಡಿ ಮುಚ್ಚಲು ಜೆಟ್ ಪ್ಯಾಚರ್ ಯಂತ್ರ
ಈ ಹಿಂದೆ ಫೈಥಾನ್ ಯಂತ್ರ ಬಳಸಿ ಗುಂಡಿ ಮುಚ್ಚಲು ಯತ್ನಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ಮುಚ್ಚುವುದಕ್ಕೆ ಸಾಧ್ಯವಾಗಲಿಲ್ಲ.
ಆದರೆ ಮಳೆಗಾಲದಲ್ಲೇ ರಸ್ತೆಗುಂಡಿಗಳ ಸಮಸ್ಯೆ ಹೆಚ್ಚು ಕಾಡುವುದರಿಂದ ಅನುಕೂಲವಾಗುವ ಯಂತ್ರ ಬಳಕೆಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಹೀಗಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲು ಸಿದ್ಧತೆ ನಡೆಸಿದೆ.

ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲೂ ತರಲು ಚಿಂತನೆ
ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಯಶಸ್ವಿಯಾದರೆ ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಪ್ರಾಯೋಗಿಕ ಯಂತ್ರ ಬಳಕೆಯ ಕಾಮಗಾರಿಯನ್ನು ಮೇಯರ್ ಗೌತಮ್ ಕುಮಾರ್ ತಪಾಸಣೆ ನಡೆಸಿದರು. ಈ ವೇಳೆ ಉಪಮೇಯರ್ ರಾಮ್ ಮೋಹನ್ ರಾಜು ಹಾಗೂ ಇತರರು ಇದ್ದರು.

ಜೆಟ್ ಪ್ಯಾಚಾರ್ ಯಂತ್ರ ಪ್ರಾಯೋಗಿಕ ಬಳಕೆ
ಪ್ರಾಯೋಗಿಕವಾಗಿ ಬುಧವಾರ ದೊಮ್ಮಲೂರು ವಾರ್ಡ್ ವ್ಯಾಪ್ತಿಯ ಇಸ್ರೋ ಕ್ವಾಟ್ರಸ್ ರಸ್ತೆಯಲ್ಲಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ಕೋಲ್ಡ್ ಮಿಕ್ಸ್ ಡಾಂಬರ್ ಬಳಸಿ ಗುಂಡಿಗಳನ್ನು ಮುಚ್ಚಲಾಯಿತು. ಪೈಥಾನ್ ಯಂತ್ರದಲ್ಲಿ ಹಾಟ್ ಮಿಕ್ಸ್ ಡಾಂಬರಿನಿಂದ ಮಾತ್ರ ರಸ್ತೆ ಗುಂಡಿ ಮುಚ್ಚಬಹುದು. ಅಲ್ಲದೆ ಮಳೆಗಾಲದಲ್ಲಿ ಸಾಧ್ಯವಾಗುವುದಿಲ್ಲ. ಆದರೆ ಜೆಟ್ ಪ್ಯಾಚರ್ ಯಂತ್ರದಿಂದ ಕೋಲ್ಡ್ ಮಿಕ್ಸ್ ಡಾಂಬರು ಬಳಸಿ ವರ್ಷವಿಡೀ ಗುಂಡಿಗಳನ್ನು ಮುಚ್ಚಬಹುದಾಗಿದೆ.

ರಸ್ತೆ ಗುಂಡಿ ಮುಚ್ಚೋದ್ಯಾವಾಗ ಹೈಕೋರ್ಟ್ ತರಾಟೆ
ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಗಿದಿದೆ, ಯಾವಾಗ ರಸ್ತೆಗುಂಡಿ ಮುಚ್ಚೋದು ಎಂದು ಹೈಕೋರ್ಟ್ ಬುಧವಾರ ಮತ್ತೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications