ಬೆಂಗಳೂರು: ಮಹಿಳೆಯರ ಒಳ ಉಡುಪು ಧರಿಸಿ ರೂಪದರ್ಶಿಗೆ ಕಿರುಕುಳ
ಬೆಂಗಳೂರು, ಆಗಸ್ಟ್ 9: ಬೆಂಗಳೂರಿನ ನೈಸ್ ರೋಡ್ ಬಳಿ ಮಹಿಳೆಯರ ಒಳ ಉಡುಪು ಧರಿಸಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬ ರೂಪದರ್ಶಿಯೊಬ್ಬರಿಗೆ ಕಿರುಕುಳ ನೀದಲು ಪ್ರಯತ್ನಿಸಿದ ಘಟನೆ ಆಗಸ್ಟ್ 6ರ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಿಸೆಸ್ ಇಂಡಿಯಾ ಪಟ್ಟ ಅಲಂಕರಿಸಿದ್ದ ರೂಪದರ್ಶಿ ರಾಜ್ಯಶ್ರೀ ಅವರು ಪತಿಗೆ ಕಾಯುತ್ತ ಒಂಟಿಯಾಗಿ ರಸ್ತೆಯಲ್ಲಿ ನಿಂತಿದ್ದ ಸಮಯದಲ್ಲಿ ಬಳಿ ಬಂದ ವ್ಯಕ್ತಿಯೊಬ್ಬ ಮಹಿಳೆಯರ ಒಳ ಉಡುಪು ಧರಿಸಿ, ಲಿಪ್ ಸ್ಟಿಕ್ ಧರಿಸಿ ವಿಚಿತ್ರವಾಗಿ ಓಡಾಡುತ್ತಿದ್ದ. ಆದರೆ ಈತ ತೃತಿಯಲಿಂಗಿಯಲ್ಲ ಎಂಬುದು ರಾಜ್ಯಶ್ರೀ ಅವರ ಮಾತು.

ಒಂಟಿಯಾಗಿ ನಿಂತಿದ್ದ ರಾಜ್ಯಶ್ರೀ ಅವರ ಕೈ ಹಿಡಿದು ಎಳೆಯಲು ಪ್ರಯತ್ನಿಸಿದ ಈತನ ವರ್ತನೆಗೆ ಭಯಗೊಂಡ ರಾಜ್ಯಶ್ರೀ ಅವರು ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ ಆ ಸಮಯದಲ್ಲಿ ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ಮತ್ತು ವಾಹನಗಳು ಓಡಾಡುತ್ತಿರಲಿಲಲ್ಲವಾದ್ದರಿಂದ ಅವರ ಕೂಗು ಯಾರಿಗೂ ಕೇಳಿಲ್ಲ.
ಆತನ ಉಪಟಳ ಹೆಚ್ಚಾದಾಗ, ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿದ್ದಾರೆ. ಭಯಗೊಂಡ ವ್ಯಕ್ತಿ ದೂರ ಸರಿದಿದ್ದಾನಾದರೂ ವಿಚಿತ್ರವಾಗಿ ವರ್ತಿಸುತ್ತಲೇ ಇದ್ದಾಗ ತಮ್ಮ ಫೋನಿನಿಂದ ವಿಡಿಯೋ ಮಾಡಲು ರಾಜ್ಯಶ್ರೀ ಮುಂದಾಗಿದ್ದಾರೆ. ಇದರಿಂದ ಭಯಗೊಂಡ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಈ ವಿಚಿತ್ರ ಘಟನೆಯಿಂದ ಆತಂಕಗೊಂಡ ರಾಜ್ಯಶ್ರೀ ಸಾಮಾಜಿಕ ಜಾಲತಾಣಗಳಲ್ಲಿಯೂ ತಮ್ಮ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications