Unsung Heroes: ಈ ಮಹಿಳೆ ಇಲ್ಲದಿದ್ರೆ ಮೆಟ್ರೋದಲ್ಲಿ ದೊಡ್ಡ ದುರಂತವೇ ನಡೀತಿತ್ತು!
ಬೆಂಗಳೂರಿನ ನೆಚ್ಚಿನ ನಮ್ಮ ಮೆಟ್ರೋದಲ್ಲಿ ನಿನ್ನೆ ಸ್ವಲ್ಪ ಎಚ್ಚರ ತಪ್ಪಿದ್ದರೂ ದೊಡ್ಡ ಅನಾಹುತವೇ ನಡೆದು ಹೋಗುತ್ತಿತ್ತು. ಮೆಟ್ರೋ ನೇರಳೆ ಮಾರ್ಗದ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಿನ್ನೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆಯು ಬೆಂಗಳೂರಿಗರನ್ನು ಬೆಚ್ಚಿಬೀಳಿಸಿತ್ತು.
ಆದರೆ ಅದೃಷ್ಟವಶಾತ್ ಆತನಿಗೆ ಯಾವುದೇ ತೊಂದರೆ ಆಗಲಿಲ್ಲ. ಇದಕ್ಕೆ ಕಾರಣ, ಆ ನಿಲ್ದಾಣದಲ್ಲಿ ಅಲರ್ಟ್ ಆಗಿದ್ದ ಮಹಿಳಾ ಸಿಬ್ಬಂದಿ. ಅವರ ಹೆಸರು ರಶ್ಮಿ. ನಿನ್ನೆ ಇವರು ತೋರಿದ ಧೈರ್ಯಕ್ಕೆ ಎಲ್ಲರೂ ಸಲಾಂ ಎನ್ನುತ್ತಿದ್ದಾರೆ.

ಹೌದು, ನಿನ್ನೆ ಮಧ್ಯಾಹ್ನ ಮಧ್ಯಾಹ್ಮ 2.13ರ ವೇಳೆಗೆ ಮೆಟ್ರೋ ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆ ಬಿಹಾರ ಮೂಲದ ಸಿದ್ಧಾರ್ಥ್ ಜೈನ್ ಎಂಬ ವ್ಯಕ್ತಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಮುಂದಾಗಿದ್ದ. ವೈಟ್ಫೀಲ್ಡ್ ಕಡೆಯಿಂದ ಕೆಂಗೇರಿ ಕಡೆಗೆ ತೆರಳುತ್ತಿದ್ದ ಮೆಟ್ರೊ ರೈಲಿಗೆ ಬಲಿಯಾಗಲು ಆತ ನಿರ್ಧರಿಸಿದ್ದ.
ಇದನ್ನು ಗಮನಿಸಿದ ಸೆಕ್ಯೂರಿಟಿ ಆಫೀಸರ್ ರಶ್ಮಿ ಅವರು ತಕ್ಷಣವೇ ತಮ್ಮ ಬುದ್ಧಿ ಉಪಯೋಗಿಸಿದ್ದರು. ವ್ಯಕ್ತಿ ಹಳಿಗೆ ಜಿಗಿಯುತ್ತಿದ್ದಂತೆ ಕೂಡಲೇ ರಶ್ಮಿ ಅವರು ಅಲ್ಲಿದ್ದ ತುರ್ತು ಟ್ರಿಪ್ ಸಿಸ್ಟಮ್ಗೆ (ಇಟಿಎಸ್) ಅಳವಡಿಸಿದ್ದ ಗಾಜನ್ನು ಕೈಯಿಂದಲೇ ಒಡೆದು ಪವರ್ ಆಫ್ ಮಾಡಿದ್ದರು. ಇದರಿಂದ ಮೆಟ್ರೋ ರೈಲಿನ ವಿದ್ಯುತ್ ಸಂಪರ್ಕ ಕ್ಷಣಾರ್ಧದಲ್ಲೇ ಕಡಿತಗೊಂಡಿತು.
ರೈಲಿನ ಕೆಳಗೆ ಸಿಲುಕಿದ್ದ ಆ ವ್ಯಕ್ತಿ ಹೊರಬರಲಾರದೇ ಪರದಾಡಿದ. ಕೊನೆಗೆ ಅಲ್ಲಿದ್ದ ಸಿಬ್ಬಂದಿ ಆತನನ್ನು ಹಳಿಯಿಂದ ಮೇಲಕ್ಕೆ ಕ್ಷೇಮವಾಗಿ ಎತ್ತಿದರು. ಆತನ ಆಯಸ್ಸು ಗಟ್ಟಿಯಾಗಿದ್ದರಿಂದ ಪ್ರಾಣಕ್ಕೆ ಯಾವುದೇ ಅಪಾಯವಾಗಿರಲಿಲ್ಲ. ಈ ಘಟನೆ ನಂತರ ನೇರಳೆ ಮಾರ್ಗದಲ್ಲಿ ರೈಲು ಸಂಚಾರವನ್ನು ಮತ್ತೆ ಆರಂಭಿಸಲಾಯಿತು. ರಶ್ಮಿ ಅವರು ತಮ್ಮ ಜೀವವನ್ನೂ ಲೆಕ್ಕಿಸದೆ ಈ ಸಾಹಸಕ್ಕೆ ಕೈ ಹಾಕಿದ್ದರಿಂದಲೇ ಈ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಯಿತು.

ಆದರೆ ರಶ್ಮಿ ಅವರು ತಮ್ಮ ಕೈಯಿಂದಲೇ ಗಾಜನ್ನು ಒಡೆದಿರುವುದರಿಂದ ಗಂಭೀರ ಗಾಯಗೊಂಡಿದ್ದಾರೆ. ತುಸು ರಕ್ತಸ್ರಾವವೂ ಆಗಿದೆ ಎಂದು ವರದಿಯಾಗಿದೆ. ಆದರೆ ಇವರ ಧೈರ್ಯ ಹಾಗೂ ಸಾಹಸಕ್ಕೆ ಅಲ್ಲಿದ್ದ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತೊಂದೆಡೆ ರಶ್ಮಿ ಅವರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಧೈರ್ಯಂ ಸರ್ವತ್ರ ಸಾಧನಂ ಎಂದು ಬರೆದುಕೊಂಡು ಕೊಂಡಾಡುತ್ತಿದ್ದಾರೆ.
ಹೆಣ್ಣುಮಗಳಾಗಿ ಈಕೆ ತೋರಿರುವ ಧೈರ್ಯ ಹಾಗೂ ಸಮಯಪ್ರಜ್ಞೆ ಎಲ್ಲರಿಗೂ ಮಾದರಿ ಎಂದು ಹೊಗಳಿದ್ದಾರೆ. ಸದ್ಯ ರಶ್ಮಿ ಅವರ ಫೋಟೋ ಹಲವರು ಹಂಚಿಕೊಂಡಿದ್ದಾರೆ. ಇವರನ್ನು Unsung Heroes ಎಂದು ಕೆಲವರು ಕರೆದಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?: ನಿನ್ನೆ ಆತ್ನಹತ್ಯೆಗೆ ಯತ್ನಿಸಿದ್ದ ಬಿಹಾರ ಮೂಲದ ಸಿದ್ಧಾರ್ಥ್ ಜೈನ್ ಸದ್ಯ ಬೆಂಗಳೂರಿನ ಒಂದು ಅಪಾರ್ಟ್ಮೆಂಟ್ನಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಶೋರೂಂ ಒಂದರಲ್ಲಿ ಸೇಲ್ಸ್ ಎಕ್ಸೆಕ್ಯೂಟಿವ್ ಆಗಿ ಕೆಲಸ ಕೂಡ ಮಾಡಿಕೊಂಡಿದ್ದರು. ಈ ವೇಳೆ ಇವರು ಮಾಡಿದ್ದ ಸಾಲ ತೀರಿಸಲಾಗದೆ ಪರದಾಡುತ್ತಿದ್ದರು ಎಂದು ಹೇಳಲಾಗಿದೆ.
ಕೊನೆಗೆ ಮನೆ ಬಾಡಿಗೆ ಕಟ್ಟಲೂ ಅವರ ಬಳಿ ಹಣ ಇರಲಿಲ್ಲ. ಜೀವನ ನಡೆಸುವುದು ಕಷ್ಟವಾಗಿ ಕೊನೆಗೆ ಬೇರೆ ದಾರಿ ಕಾಣದೆ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಸಿದ್ಧಾರ್ಥ್ ಪೊಲೀಸರ ಮುಂದೆ ಹೇಳಿದ್ದಾರೆ. ಜೀವ ಬಿಡಲು ಬಂದಿದ್ದ ಈತನಿಗೆ ಮೆಟ್ರೋ ಸಿಬ್ಬಂದಿ ರಶ್ಮಿ ಅವರು ತಮ್ಮ ಜೀವ ಲೆಕ್ಕಿಸದೆ, ಹೊಸ ಜೀವನಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications