ಬೆಂಗಳೂರಿನಲ್ಲಿ ಆರಂಭವಾಗಲಿದೆ ಪ್ರತ್ಯೇಕ ಬಸ್ ಲೇನ್!
ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ವಾಹನ ಸಂಚಾರದ ವೇಗವನ್ನು ಕೊಂಚ ಹೆಚ್ಚಿಸುವ ಸಲುವಾಗಿ ಉದ್ಯಾನ ನಗರಿ ಬೆಂಗಳೂರಿನಲ್ಲಿ ಸದ್ಯದಲ್ಲೇ ಪ್ರತ್ಯೇಕ ಬಸ್ ಲೇನ್ ಅನ್ನು ಜಾರಿಗೆ ತರಲಾಗುತ್ತಿದೆ.
ಬೆಂಗಳೂರು, ಮೇ 19: ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ವಾಹನ ಸಂಚಾರದ ವೇಗವನ್ನು ಕೊಂಚ ಹೆಚ್ಚಿಸುವ ಸಲುವಾಗಿ ಉದ್ಯಾನ ನಗರಿ ಬೆಂಗಳೂರಿನಲ್ಲಿ ಸದ್ಯದಲ್ಲೇ ಪ್ರತ್ಯೇಕ ಬಸ್ ಲೇನ್ ಅನ್ನು ಜಾರಿಗೆ ತರಲು ಸಂಚಾರ ಪೊಲೀಸರು ಚಿಂತನೆ ನಡೆಸಿದ್ದಾರೆ. ಈ ಲೇನ್ ಅನ್ನು ಬಿಎಂಟಿಸಿ, ಕೆಎಸ್ ಆರ್ ಟಿಸಿ, ಖಾಸಗಿ ಬಸ್ ಗಳು ಬಳಸಿಕೊಳ್ಳಬಹುದು.
ಮೊದಲು ಇದನ್ನು ಪ್ರಾಯೋಗಿಕವಾಗಿ ಆರಂಭಿಸಿ, ಉಪಯುಕ್ತ ಎನ್ನಿಸಿದಲ್ಲಿ ಅಧಿಕೃತವಾಗಿ ಜಾರಿಗೆ ತರಲಾಗುವುದು ಎಂದು ಹೆಚ್ಚುವರಿ ಸಂಚಾರಿ ಪೊಲೀಸ್ ಆಯುಕ್ತ ಆರ್. ಹಿತೆಂದ್ರ ತಿಳಿಸಿದ್ದಾರೆ. ಬಸ್ಸುಗಳಿಗೆ ಒಂದು ಸರಿಯಾದ ಲೇನ್ ಇಲ್ಲದಿರುವುದರಿಂದ ರಸ್ತೆಯಲ್ಲಿ ಎಲ್ಲೆಂದರಲ್ಲಿ ಬಸ್ ಗಳು ಓಡಾಡುತ್ತಿವೆ. ಇದರಿಂದ ಸಂಚಾರ ಅಸ್ತವ್ಯಸ್ತವಾಗುತ್ತಿರುವುದಷ್ಟೇ ಅಲ್ಲದೆ, ಇತರ ವಾಹನ ಚಾಲಕರಿಗೂ ಕಷ್ಟವಾಗುತ್ತಿದೆ. ಈ ಎಲ್ಲ ಸಮಸ್ಯೆಗಳಿಗೆ ಇತೀಶ್ರೀ ಹಾಡುವ ದೃಷ್ಟಿಯಿಂದ ಬಸ್ ಲೇನ್ ಪದ್ಧತಿ ಜಾರಿಗೆ ತರಲಾಗುತ್ತಿದೆ.[ಬೆಂಗಳೂರಿಗೆ 'ಪಾಡ್ ಕಾರ್', ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ತಂತ್ರ]

ಬೆಂಗಳೂರಿನಲ್ಲಿ ಪೀಕ್ ಅವರ್ ಗಳಲ್ಲಿ ವಾಹನಗಳು ಗಂಟೆಗೆ ಕೇವಲ 4 ಕಿ.ಮೀ. ವೇಗದಲ್ಲಿ ಓಡುತ್ತಿವೆ! ಈಗಾಗಲೇ ಹಲವು ರಸ್ತೆಗಳಲ್ಲಿ ಆಟೋಗಳಿಗೆ ಪ್ರತ್ಯೇಕ ಲೇನ್ ಮಾಡಲಾಗಿದ್ದು, ಬಸ್ ಲೇನ್ ಕೂಡ ಆದರೆ ರಸ್ತೆಯಲ್ಲಿ ಶಿಸ್ತಿರುತ್ತದೆ, ವಾಹನಗಳ ವೇಗವನ್ನೂ ಹೆಚ್ಚಿಸಬಹುದು, ಮಾತ್ರವಲ್ಲ, ಬೆಂಗಳೂರಿಗರ ಪ್ರಮುಖ ಸಮಸ್ಯೆ ಎನ್ನಿಸಿರುವ ಟ್ರಾಫಿಕ್ ಸಮಸ್ಯೆಯೂ ತಗ್ಗಬಹುದು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications