ಪೊಲೀಸರಿಗೆ ಹೆದರದ ಕಳ್ಳರು- ದರೋಡೆಕೋರರಿಗೆ ಕೊರೊನಾ ಅಂದ್ರೆ ಭಯ !
ಬೆಂಗಳೂರು, ಮೇ. 19: ಕೊರೊನಾ ಸೋಂಕಿಗೆ ಕಳ್ಳರು- ದರೋಡೆಕೋರರು ಕೂಡ ಹೆದರಿದ್ದಾರೆ. ಕೊರೊನಾ ಸೋಂಕು ಭಯದಿಂದ ಕ್ರಿಮಿನಲ್ ಗಳು ಕೂಡ ರಜೆ ಮೊರೆ ಹೋದಂತಿದೆ. ಕೊರೊನಾ ಭೀತಿ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ಆದರೆ, ಸೈಬರ್ ಕಳ್ಳರು ಮಾತ್ರ ತಮ್ಮ ಕೈಚಳಕ ತೋರಿದ್ದಾರೆ.
ಅರ್ಧಕ್ಕೆ ಅರ್ಧ ಪ್ರಕರಣ ಕಡಿಮೆ: ಒಂದಂಡೆ ಕೊರೊನಾ ಭೀತಿ. ಇನ್ನೊಂದಡೆ ಕೊರೊನಾ ಲಾಕ್ ಡೌನ್ ನಿಯಮ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಊಹೆಗೂ ನಿಲುಕದಷ್ಟು ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಒಂದು ತಿಂಗಳಿಗೆ ಬೆಂಗಳೂರಿನಲ್ಲಿ ಸರಾಸರಿ ಐದು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗುತ್ತಿದ್ದರು. ಬೆಂಗಳೂರಿನಲ್ಲಿರುವ 110 ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಠಾಣೆಗಳಲ್ಲಿ ಸರಾಸರಿ ತಿಂಗಳಿಗೆ 40 ರಿಂದ 60 ಪ್ರಕರಣ ದಾಖಲಾಗುತ್ತಿದ್ದವು. 2021 ಜನವರಿ ತಿಂಗಳಲ್ಲಿ 6526 ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಪ್ರಸಕ್ತ ಏಪ್ರಿಲ್ ತಿಂಗಳಲ್ಲಿ ಕೇವಲ 2028 ಅಪರಾಧ ಪ್ರಕರಣ ಬೆಂಗಳೂರಿನಲ್ಲಿ ದಾಖಲಾಗಿವೆ. ಎರಡು ಪಟ್ಟು ಪ್ರಕರಣ ಕಡಿಮೆಯಾಗಿದ್ದು, ಸದ್ಯ ಬೆಂಗಳೂರು ಮಂದಿ ಕೂಡ ನಿಟ್ಟುಸಿರು ಬಿಡುವಂತಾಗಿದೆ.
ಕಳ್ಳರಿಗೆ ರೆಸ್ಟ್, ಪೊಲೀಸರು ಬ್ಯುಸಿ: ಕೊರೊನಾ ಲಾಕ್ ಡೌನ್ ನಿಯಮ ಜಾರಿ ಮಾಡುವ ಜವಾಬ್ಧಾರಿ ಪೊಲೀಸರಿಗೆ ವಹಿಸಲಾಗಿದೆ. ಹೀಗಾಗಿ ನಾಕಬಂದಿ ವಾಹನ ಚೆಕ್ ಪಾಯಿಂಟ್, ಅನಾವಶ್ಯಕವಾಗಿ ಸಂಚರಿಸುವ ವಾಹನಗಳ ಜಪ್ತಿ, ಮಾಸ್ಕ್ ಇಲ್ಲದವರಿಗೆ ದಂಡ ಹೀಗೆ ಕೊರೊನಾ ಸಂಬಂಧಿತ ಕಾರ್ಯಗಳಲ್ಲಿ ಪೊಲೀಸರು ನಿರತರಾಗಿದ್ದಾರೆ. ಆದರೆ ಕಳ್ಳರು, ದರೋಡೆಕೋರರು ಕೊರೊನಾ ಗೆ ಹೆದರಿ ಸುಮ್ಮನಾಗಿದ್ದಾರೆ. ಹೀಗಾಗಿ ಬಹುತೇಕ ಅಪರಾಧಗಳು ಕಡಿಮೆಯಾಗಿವೆ. ಇನ್ನು ಪೊಲೀಸರು ಕೂಡ ಹಳೇ ಪ್ರಕರಣಗಳ ತನಿಖೆ ಕೈ ಬಿಟ್ಟಿದ್ದಾರೆ. ಹೀಗಾಗಿ ರಾಜಧಾನಿಯಲ್ಲಿ ಏಕಾಏಕಿ ಅಪರಾಧ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ ಎಂಧು ಪೊಲೀಸರು ತಿಳಿಸಿದ್ದಾರೆ.

ಸೈಬರ್ ಅಪರಾಧ ಹೆಚ್ಚಳ: ಕೊರೊನಾ ಸಂದರ್ಭ ಬಳಿಸಿಕೊಂಡು ಸೈಬರ್ ಕಳ್ಳರು ತಮ್ಮ ಕೈಚಳಕ ಜೋರು ಮಾಡಿದ್ದಾರೆ. ಬೆಡ್ ಕೊಡಿಸುವ, ಕೇಂದ್ರ ಸರ್ಕಾರದಿಂದ ಅನುದಾನ ಕೊಡಿಸುವ, ಬಾಡಿಗೆ ಮನೆ ಪಡೆಯುವ ಸೋಗಿನಲ್ಲಿ ಲಿಂಕ್ ಕಳಿಸಿ ಮುಗ್ಧರಿಂದ ಸೈಬರ್ ಕಳ್ಳರು ಹಣ ಎಗರಿಸುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಜನರಿಗೆ ಕೆಲಸವಿಲ್ಲದ ಕಾರಣ ಅಪರಿಚಿತ ಕರೆಗಳನ್ನು ಸ್ವೀಕರಿಸುವುದು ಜಾಸ್ತಿ. ಆದರೆ ನಾನಾ ಅಮಿಷೆ ಒಡ್ಡಿ ಬ್ಯಾಂಕ್ ಖಾತೆಗಳಿಂದ ಹಣ ಎಗರಿಸುವ ಸೈಬರ್ ಕೃತ್ಯಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮೊಬೈಲ್ ಗಳಿಗೆ ಸಂದೇಶ ಕಳುಹಿಸಿ ವಂಚನೆ ಮಾಡುವ ಜಾಲ ಸಕ್ರಿಯವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ ಎಂದು ಸೈಬರ್ ತಜ್ಞರು ಮನವಿ ಮಾಡಿದ್ದಾರೆ.
ಜನವರಿಯಲ್ಲಿ ದಾಖಲಾದ ಪ್ರಕರಣ 6526
ಫೆಬ್ರವರಿ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣ 5642
ಮಾರ್ಚ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣ 3358
ಏಪ್ರಿಲ್ ತಿಂಗಳಲ್ಲಿ ದಾಖಲಾದ ಪ್ರಕರಣ 2028
Recommended Video
ಮೇ ತಿಂಗಳಲ್ಲಿ ದಾಖಲಾದ ಪ್ರಕರಣ 546
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications